September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ಶಾರದ ಮಂಟಪ ಉಜಿರೆ 17ನೇ ವರ್ಷದ ಸಾರ್ವಜನಿಕ ಗಣೇಶೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ, ಪೂರ್ವಭಾವಿ ಸಭೆ

ಉಜಿರೆ:ಸಾರ್ವಜನಕ ಶ್ರೀ ಗಣೇಶೋತ್ಸವ ಸಮಿತಿ ಶಾರದಾ ಮಂಟಪ ಉಜಿರೆ ಇದರ ವತಿಯಿಂದ ನಡೆಯುವ ಶ್ರೀ ಗಣೇಶೋತ್ಸವದ ಪೂರ್ವಾಭಾವಿ ಸಭೆ ಹಾಗೂ ಆಮಂತ್ರಣ ಪತ್ರಿಕೆ ಬಿಡುಗಡೆ ಸಮಾರಂಭ ಆಗಷ್ಟ್ 3 ರಂದು ಜನಾರ್ದನ ದೇವಸ್ಥಾನದ ರಾಮಕೃಷ್ಣ ಸಭಾ ಮಂಟಪದಲ್ಲಿ ನಡೆಯಿತು.

ಸೆಪ್ಟೆಂಬರ್ 19 ರಿಂದ ಸೆಪ್ಟೆಂಬರ್ 21 ರವರೆಗೆ ಶಾರದ ಮಂಟಪದಲ್ಲಿ ನಡೆಯಲಿರುವ 17ನೇ ವರ್ಷದ ಸಾರ್ವಜನಿಕ ಗಣೇಶೋತ್ಸವದ ಆಮಂತ್ರಣ ಪತ್ರಿಕೆಯನ್ನು ಗೌರವಾಧ್ಯಕ್ಷರಾದ ಶರತ್ ಕೃಷ್ಣ ಪಡ್ವೆಟ್ನಾಯರು ಮತ್ತು ಉಜಿರೆ ಗ್ರಾ.ಪಂ ಅಧ್ಯಕ್ಷೆ ಪುಷ್ಪಾವತಿ ಆರ್ ಶೆಟ್ಟಿ ಅವರು ಬಿಡುಗಡೆಗೊಳಿಸಿ ಶುಭಕೋರಿದರು.

ಈ ಸಂದರ್ಭದಲ್ಲಿ ಗಣೇಶೋತ್ಸವ ಸಮಿತಿ ಸಂಚಾಲಕರಾದ ಮೋಹನ್ ಕುಮಾರ್, ಕಳೆದ ಬಾರಿಯ ಅಧ್ಯಕ್ಷರಾದ ಅರವಿಂದ ಕಾರಂತ್, ಸಂಚಾಲಕರಾದ ಪ್ರಕಾಶ್ ಅಪ್ರಮೆಯ, ಗಣೇಶೋತ್ಸವ ಸಮಿತಿ ಅಧ್ಯಕ್ಷ ರಾಮಣ್ಣಗೌಡ, ಕಾರ್ಯದರ್ಶಿ ಪ್ರವೀಣ್, ಕೋಶಾಧಿಕಾರಿ ಧೀರಾಜ್ ಉಪಸ್ಥಿತರಿದ್ದರು.ಕುಮಾರಿ ಇಂಚರ ಕಾರಂತ ಪ್ರಾರ್ಥನೆ ಹಾಡಿದರು.ಪ್ರಸಾದ್ ಬಿ.ಎಸ್ ಮತ್ತು ಗೋಪಾಲಕೃಷ್ಣ ರವರು ಕಾರ್ಯಕ್ರಮ ನಿರೂಪಿಸಿದರು. ಮಮತಾ ವಂದಿಸಿದರು.

Related posts

ಶಿಬಾಜೆ: ವಿದ್ಯುತ್ ಸ್ಪರ್ಶಿಸಿ ಮೃತಪಟ್ಟ ಯುವತಿಯ ಮನೆಗೆ ಶಾಸಕ ಹರೀಶ್ ಪೂಂಜ ಹಾಗೂ ವಿಧಾನ ಪರಿಷತ್ ಸದಸ್ಯ ಪ್ರತಾಪ್ ಸಿಂಹ ನಾಯಕ್ ಭೇಟಿ

Suddi Udaya

ಚಾರ್ಮಾಡಿ ಘಾಟಿಯಲ್ಲಿ ಪದೇ ಪದೇ ಸಂಭವಿಸುತ್ತಿರುವ ಕಾಳ್ಗಿಚ್ಚು ತಡೆಯಲು ಕೊನೆಗೂ ಅರಣ್ಯ ಇಲಾಖೆಯಿಂದ ಸಿಬ್ಬಂದಿ ನಿಯೋಜನೆ

Suddi Udaya

ಲಾಯಿಲ ಬೀಕರ ಗಾಳಿ ಮಳೆಗೆ ಪುತ್ರಬೈಲಿನಲ್ಲಿ ಮನೆಗೆ ತೆಂಗಿನ ಮರ ಬಿದ್ದು ಹಾನಿ

Suddi Udaya

ಕಸ್ತೂರಿ ರಂಗನ್ ವರದಿಯ ವಿರುದ್ಧ ನಡೆಯಲಿರುವ ಪ್ರತಿಭಟನೆಗೆ ಮಿತ್ತಬಾಗಿಲು ಗ್ರಾ.ಪಂ. ಅಧ್ಯಕ್ಷ ವಿನಯಚಂದ್ರ ಬೆಂಬಲ

Suddi Udaya

ದೇಶದಲ್ಲಿ ನೋಂದಾವಣೆಯಾಗದಿರುವ ದೊಡ್ಡ ಸಂಸ್ಥೆ ಆರ್.ಎಸ್.ಎಸ್. ಮಾತ್ರ,: ಕೆಪಿಸಿಸಿ ವಕ್ತಾರ ಅಮಲ ರಾಮಚಂದ್ರ

Suddi Udaya

ಉಜಿರೆ: ಅನುಗ್ರಹದಲ್ಲಿ ಸಂಭ್ರಮದ ಸ್ವಾತಂತ್ರ್ಯ ದಿನಾಚರಣೆ

Suddi Udaya
error: Content is protected !!