38.6 C
ಪುತ್ತೂರು, ಬೆಳ್ತಂಗಡಿ
March 6, 2026
Uncategorizedಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಹಲ್ಲೆಗೆ ಯತ್ನ: ಸೌಜನ್ಯ ತಾಯಿ ಕುಸುಮಾವತಿರವರಿಂದ ಬೆಳ್ತಂಗಡಿ ಠಾಣೆಗೆ ದೂರು

ಬೆಳ್ತಂಗಡಿ: ಅಪರಿಚಿತ ವ್ಯಕ್ತಿ ಹಾಗೂ ಇತರರು ತನ್ನ ಮೇಲೆ ಮಾನಹಾನಿಗೆ ಯತ್ನಿಸಿದ ಕುರಿತು ಹಾಗೂ ತನ್ನ ಮಗನಿಗೆ ಹಲ್ಲೆ ನಡೆಸಿದ ಬಗ್ಗೆ ಧರ್ಮಸ್ಥಳ ಗ್ರಾಮದ ಪಾಂಗಾಳದ ಚಂದಪ್ಪಗೌಡ ಎಂಬವರ ಪತ್ನಿ ಕುಸುಮಾವತಿ (48ವ)ರವರು ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಆ.4 ರಂದು ದೂರು ನೀಡಿದ್ದಾರೆ.

ತನ್ನ ಮಗಳು ಸೌಜನ್ಯಾ 11 ವರ್ಷಗಳ ಹಿಂದೆ ಅತ್ಯಾಚಾರಕ್ಕೊಳಗಾಗಿ ಹತ್ಯೆಯಾಗಿದ್ದಳು. ಕೃತ್ಯದ ನೈಜ ಆರೋಪಿಗಳನ್ನು ಪತ್ತೆ ಹಚ್ಚಿ ಶಿಕ್ಷೆಗೊಳಪಡಿಸುವಂತೆ ನಾನು 11 ವರ್ಷದಿಂದ ಹೋರಾಟ ನಡೆಸುತ್ತಿದ್ದು, ಅದೇ ಉದ್ದೇಶದಿಂದ ಆ. 4ರಂದು ಉಜಿರೆಯಲ್ಲಿ ಸಭೆಯೊಂದನ್ನು ಆಯೋಜಿಸಿರುವುದನ್ನು ತಿಳಿದು ನ್ಯಾಯಕ್ಕಾಗಿ ಕುಟುಂಬದೊಂದಿಗೆ ತೆರಳಿದ್ದೆ. ಈ ಸಂದರ್ಭ ಅಪರಿಚಿತ ವ್ಯಕ್ತಿಗಳು, ಇತರರೊಂದಿಗೆ ಸೇರಿಕೊಂಡು ತನ್ನನ್ನು ತಡೆದು ಮಾನಹಾನಿಗೆ ಯತ್ನಿಸಿದ್ದಲ್ಲದೆ, ತನ್ನ ಮಗ ಜಯರಾಮನಿಗೂ ಹಲ್ಲೆ ನಡೆಸಿದ್ದಾರೆ ಎಂದು ಅವರು ದೂರಿನಲ್ಲಿ ತಿಳಿಸಿದ್ದಾರೆ.
ಈ ಕುರಿತು ಬೆಳ್ತಂಗಡಿ ಪೊಲೀಸ್‌ ಠಾಣೆಯಲ್ಲಿ ದೂರು ದಾಖಲಾಗಿದೆ.

Related posts

ಬಜೆಟ್ ನಲ್ಲಿ ಅರಣ್ಯ ಮೂಲ ಬುಡಕಟ್ಟು ಸಮುದಾಯಕ್ಕೆ 200 ಕೋಟಿ ಅನುದಾನ ಅಭಿನಂದನೀಯ : ಜಿಲ್ಲಾ ಮಲೆಕುಡಿಯ ಸಂಘ ದಕ್ಷಿಣ ಕನ್ನಡ

Suddi Udaya

ಗೇರುಕಟ್ಟೆ : ಕಳಿಯ, ನ್ಯಾಯತರ್ಪು ಪ್ರದೇಶದಲ್ಲಿ ಏರ್ ಟೆಲ್ ನೆಟ್ವರ್ಕ್ ಸಮಸ್ಯೆ

Suddi Udaya

ಭಾರತೀಯ ಮಜ್ದೂರ್ ಸಂಘದ ರಾಷ್ಟ್ರೀಯ ಪ್ರಮುಖರಿಂದ ಸೇವಾಧಾಮಕ್ಕೆ ಭೇಟಿ

Suddi Udaya

ಲಯನ್ಸ್ ಕ್ಲಬ್ ವತಿಯಿಂದ ಸುಲ್ಕೇರಿ ಕೋಲ್ಯಾಯದಲ್ಲಿ ನದಿಯ ಅಣೆಕಟ್ಟಿಗೆ ಸಿಲುಕಿಕೊಂಡಿದ್ದ ಮರದ ದಿಮ್ಮಿ, ಕಸಕಡ್ಡಿಗಳ ತೆರವು ಕಾರ್ಯ

Suddi Udaya

ಉಜಿರೆ ಎಸ್‌ಡಿಎಂ ತಾಂತ್ರಿಕ ಮಹಾವಿದ್ಯಾಲಯದ ಸಹಪ್ರಾಧ್ಯಾಪಕ ಡಾ. ಸುಬ್ರಹ್ಮಣ್ಯ ಭಟ್ ರವರ “ಅಮ್ಮ ಹೇಳಿದ ಕತೆಗಳು” ಪುಸ್ತಕ ಬಿಡುಗಡೆ

Suddi Udaya

ಉಜಿರೆ: ಎಸ್ ಡಿ ಎಂ ಕಾಲೇಜಿನ ವಿದ್ಯಾರ್ಥಿಗಳಿಗೆ ರಾಷ್ಟ್ರೀಯ ಸಮ್ಮೇಳನದಲ್ಲಿ ಪ್ರಥ ಮ ಪ್ರಶಸ್ತಿ

Suddi Udaya
error: Content is protected !!