37.9 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ರಾಷ್ಟ್ರ ಮಟ್ಟದ ಅತ್ಯುತ್ತಮ ಪ್ರವಾಸೋದ್ಯಮ ಹಳ್ಳಿ ಸ್ಪರ್ಧೆ : ಕುತ್ಲೂರು ಗ್ರಾಮ ರಾಜ್ಯ ಮಟ್ಟಕ್ಕೆ ಆಯ್ಕೆ

ಕುತ್ಲೂರು : ಕಳೆದ ಫೆಬ್ರವರಿ ತಿಂಗಳಲ್ಲಿ ಕೇಂದ್ರ ಪ್ರವಾಸೋದ್ಯಮ ಇಲಾಖೆ ಹಳ್ಳಿಗಳಲ್ಲಿ ಪ್ರವಾಸೋದ್ಯಮ ಉತ್ತೇಜಿಸುವ ಸಲುವಾಗಿ ರಾಷ್ಟ್ರ ಮಟ್ಟದ ಅತ್ಯುತ್ತಮ ಪ್ರವಾಸೋದ್ಯಮ ಹಳ್ಳಿ ಎಂಬ ಸ್ಪರ್ಧೆಯನ್ನು ಘೋಷಿಸಿತ್ತು. ಪ್ರಾಕೃತಿಕ ಸೌ೦ದರ್ಯದ ಜೊತೆ ಪ್ರವಾಸೋದ್ಯಮಕ್ಕೆ ಅನುಕೂಲಕರವಾಗಿರುವ ಕುತ್ಲೂರು ಗ್ರಾಮವು ಈ ಸ್ಪರ್ಧೆಗೆ ಪ್ರವೇಶಿಸಿದ್ದು ಇದೀಗ ಜಿಲ್ಲಾ ಮಟ್ಟದಲ್ಲಿ ಅಂಗೀಕಾರ ಪಡೆದು ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿದೆ.

ಪಶ್ಚಿಮ ಘಟ್ಟಗಳ ತಪ್ಪಲಿನಲ್ಲಿರುವ ಕುತ್ಲೂರು ಗ್ರಾಮವು ರಾಜ್ಯ ಹೆದ್ದಾರಿ 37 ರ ನಡುವೆ ಇದ್ದು ಧರ್ಮಸ್ಥಳ ವೇಣೂರು ಉಡುಪಿ ಹಾಗೂ ಮೂಡಬಿದಿರೆಯ೦ತಹ ಪ್ರೇಕ್ಷಣೀಯ ಸ್ಥಳಗಳಿಗೆ ಈ ಹೆದ್ದಾರಿ ಮೂಲಕ ಪ್ರವಾಸಿಗರು ಪ್ರಯಾಣಿಸುತ್ತಿದ್ದು ಹಾಗೂ ಕುತ್ಲೂರು ಅರಣ್ಯ ಪ್ರದೇಶದಿಂದ ಆವೃತವಾಗಿದ್ದು ಅರ್ಬಿ ಜಲಪಾತವು ಪ್ರಮುಖ ಆಕರ್ಷಣೆಯಾಗಿದೆ. ಸ್ಥಳೀಯರಾದ ಸಂದೀಪ್ ಪೂಜಾರಿಯವರು ಇನ್ಫೋಸಿಸ್ ಉದ್ಯೋಗಿ ಹಾಗೂ ಸ್ಥಳೀಯರಾದ ಹರೀಶ್ ಸಾಲ್ಯಾನ್ ರವರ ಸಹಾಯದಿಂದ ಡಾಕ್ಯುಮೆಂಟ್ ಸಿದ್ಧಪಡಿಸಿ ಸ್ಪರ್ಧೆಗೆ ಪ್ರವೇಶಿಸಿದ್ದು ಇದೀಗ ದಕ್ಷಿಣ ಕನ್ನಡ ಜಿಲ್ಲಾ ಮಟ್ಟದಲ್ಲಿ ಅಂಗೀಕಾರಗೊ೦ಡು ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿದೆ.


ಮುಂದೆ ರಾಜ್ಯ ಮಟ್ಟದಲ್ಲಿ ಆಯ್ಕೆಯಾಗುವ ಹಳ್ಳಿಗಳು ಪ್ರಶಸ್ತಿ ಸುತ್ತಿಗೆ ತೇರ್ಗಡೆಯಾಗಲಿದ್ದು ಕುತ್ಲೂರು ಗ್ರಾಮವು ರಾಷ್ಟ್ರ ಮಟ್ಟದಲ್ಲಿ ಕೂಡ ಸ್ಥಾನ ಪಡೆಯಲಿ ಎಂಬುದು ಗ್ರಾಮಸ್ಥರ ಆಶಯವಾಗಿದೆ.

Related posts

ಉಜಿರೆ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಅನುದಾನಿತ ಹಿರಿಯ ಪ್ರಾಥಮಿಕ ಶಾಲಾ ಶತಮಾನೋತ್ಸವ ಸಂಭ್ರಮ

Suddi Udaya

ಶಿರ್ಲಾಲು ಸ್ವಾಮಿ ವಿವೇಕಾನಂದ ಯುವಕ ಮಂಡಲದ ಮುಂದಾಳತ್ವದಲ್ಲಿ ರಸ್ತೆ ಬದಿ ಸ್ವಚ್ಛತಾ ಕಾರ್ಯಕ್ರಮ

Suddi Udaya

ಇಂದಬೆಟ್ಟು ಗ್ರಾ.ಪಂ. ಅಧ್ಯಕ್ಷರಾಗಿ ಆಶಾಲತಾ ಉಪಾಧ್ಯಕ್ಷರಾಗಿ ಪ್ರೇಮ ಅವಿರೋಧ ಆಯ್ಕೆ

Suddi Udaya

ಪಡಂಗಡಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಸಾಧನೆಗೆ ಸಾಧನಾ ಪ್ರಶಸ್ತಿ

Suddi Udaya

ಜೆಸಿಐ ಮಡಂತ್ಯಾರು “ವಿಜಯ 2024” ವತಿಯಿಂದ ಕೊರಿಂಜ ಶ್ರೀ ಪಂಚಲಿಂಗೇಶ್ವರ ದೇವಸ್ಥಾನಕ್ಕೆ ಹೊರೆಕಾಣಿಕೆ ಸಮರ್ಪಣೆ

Suddi Udaya

ಮೇಲಂತಬೆಟ್ಟು: ಕೊಡಮಣಿತ್ತಾಯ ಮತ್ತು ಬ್ರಹ್ಮ ಬೈದರ್ಕಳ ವರ್ಷಾವಧಿ ಜಾತ್ರೆ

Suddi Udaya
error: Content is protected !!