23.5 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಕೊಲ್ಲಿ ಶ್ರೀ ದುರ್ಗಾದೇವಿ ದೇವಸ್ಥಾನದ ಜೀರ್ಣೋದ್ಧಾರ ಶ್ರೀ ಕ್ಷೇತ್ರ ಧರ್ಮಸ್ಥಳದಿಂದ ರೂ.10 ಲಕ್ಷ ದೇಣಿಗೆ

ಮಿತ್ತಬಾಗಿಲು : ಇತಿಹಾಸ ಪ್ರಸಿದ್ಧ ಕೊಲ್ಲಿ ಶ್ರೀ ದುರ್ಗಾ ದೇವಿ ದೇವಸ್ಥಾನದ ಜೀರ್ಣೋದ್ಧಾರ ಕಾರ್ಯವು ಭಕ್ತರ ಹಾಗೂ ಊರ ಹಾಗೂ ಪರವೂರ ದಾನಿಗಳ ಸಹಕಾರದಲ್ಲಿ ನಡೆಯುತ್ತಿದ್ದು, ದೇವಸ್ಥಾನದ ಈ ಜೀರ್ಣೋದ್ಧಾರ ಕಾರ್ಯಕ್ಕೆ ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆಯವರು ರೂ. 10 ಲಕ್ಷ ದೇಣಿಗೆಯನ್ನು ನೀಡಿ ಆಶೀರ್ವದಿಸಿದರು.


ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ನಿವೃತ್ತ ಪ್ರಾದೇಶಿಕ ನಿರ್ದೇಶಕ ಮಹಾವೀರ ಅಜ್ರಿ ಅವರು ರೂ.೧೦ ಲಕ್ಷದ ಚೆಕ್‌ನ್ನು ದೇವಸ್ಥಾನದ ಆಡಳಿತ ಮಂಡಳಿ ಅಧ್ಯಕ್ಷ ವಾಸುದೇವ ರಾವ್ ಕಕ್ಕೇನೇಜಿ ಅವರಿಗೆ ಹಸ್ತಾಂತರಿಸಿದರು.

ಈ ಸಂದರ್ಭದಲ್ಲಿ ಯೋಜನಾಧಿಕಾರಿ ಸುರೇಂದ್ರ ಕುಮಾರ್ ಸೇವಾ ಪ್ರತಿನಿಧಿ ಲತಾ ಹಾಗೂ ಇತರರು, ದೇವಸ್ಥಾನದ ಆಡಳಿತ ಮಂಡಳಿಯ ಸದಸ್ಯರಾದ ವಿನಯಚಂದ್ರ, ಕೇಶವ ಎಂ.ಕೆ, ಶ್ರೀಮತಿ ವನಿತಾ, ಶ್ರೀಮತಿ ಜ್ಯೋತಿ ಲಕ್ಷ್ಮೀ, ವಿನಯಚಂದ್ರ, ದಾಸಪ್ಪ ಗೌಡ, ದಿನೇಶ್ ಗೌಡ, ಚಂದ್ರಶೇಖರ್, ಜೀರ್ಣೋದ್ದಾರ ಸಮಿತಿಯ ಉಪಾಧ್ಯಕ್ಷ ಬಿ.ಕೆ.ರಾಜಶೇಖರ ರಾವ್, ಸಲಹೆಗಾರ ಬಿ.ಕೆ. ಧನಂಜಯ ರಾವ್, ಅಶೋಕ್ ಕಡಿರುದ್ಯಾವರ, ಶೀನಪ್ಪ ಗೌಡ ದಿಡುಪೆ, ಗೋಪಾಲ ಕೊಲ್ಲಿ, ಸುಧಾಕರ ಕೊಲ್ಲಿ, ಸಿದ್ಧಪ್ಪ ಪೂಜಾರಿ, ರಾಮಣ್ಣ ಕುಂಬಾರ, ಕೃಷ್ಣ ಗೌಡ, ಶೇಖರ ಪೂಜಾರಿ, ಡಿ. ವಿಜಯ ಪೂಜಾರಿ, ಶ್ರೀಧರ ಪೂಜಾರಿ, ದೇವಸ್ಥಾನದ ಸಿಬ್ಬಂದಿ ಬಾಲಕೃಷ್ಣ ಪೂಜಾರಿ ಮೊದಲಾದವರು ಉಪಸ್ಥಿತರಿದ್ದರು.

Related posts

ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್‌.ಇ) ಶಾಲೆಯಲ್ಲಿ ಪೋಷಕರ ಸಭೆ

Suddi Udaya

ಜೂ.15: ಮಡಂತ್ಯಾರ್‌ನಲ್ಲಿ ಆಲ್ಕೋಹಾಲಿಕ್ಸ್ ಅನೋನಿಮಸ್ (ಎ.ಎ) ಗ್ರೂಪ್‌ನ ಆರಂಭ: ಫಾ. ಸ್ಟಾನಿ ಗೋವಿಯಸ್

Suddi Udaya

ಅರುವ ‘ನಮ ಮಾತೆರ್ಲ ಒಂಜೇ ‘ ಕಲಾ ತಂಡದ ಪದಾಧಿಕಾರಿಗಳ ಆಯ್ಕೆ

Suddi Udaya

ಜಿಲ್ಲಾ ಮಟ್ಟದ ಕರಾಟೆ ಸ್ಪರ್ಧೆ: ಸೇಕ್ರೆಡ್ ಹಾರ್ಟ್ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿನಿಗೆ ತೃತೀಯ ಸ್ಥಾನ

Suddi Udaya

ಗೋಪಾಲಕೃಷ್ಣ ದೇವಸ್ಥಾನ ಬೆಂದ್ರಾಳ ಶ್ರೀ ಕೃಷ್ಣ ಜನ್ಮಾಷ್ಟಮಿ ಪ್ರಯುಕ್ತ ವಿಶೇಷ ಪೂಜೆ ಹಾಗೂ ಆಟೋಟ ಸ್ಪರ್ಧೆ

Suddi Udaya

ಮಡಂತ್ಯಾರು ಸೇಕ್ರೆಡ್ ಹಾರ್ಟ್ ಪದವಿ ಪೂರ್ವ ಕಾಲೇಜಿನಲ್ಲಿ ಓಣಂ ಆಚರಣೆ

Suddi Udaya
error: Content is protected !!