ಧರ್ಮಸ್ಥಳ: ಶ್ರೀ ಮಂ. ಸ್ವಾ. ಅ. ಹಿ. ಪ್ರಾ. ಶಾಲೆಯಲ್ಲಿ ಹದಿಹರೆಯದ ವಿದ್ಯಾರ್ಥಿನಿಯರಿಗೆ ಮಾಹಿತಿ

Suddi Udaya

ಧರ್ಮಸ್ಥಳ: ಶ್ರೀ ಮಂಜುನಾಥ ಸ್ವಾಮಿ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಹದಿಹರೆಯದ ವಿದ್ಯಾರ್ಥಿನಿಯರಿಗೆ ಮಾಹಿತಿಯನ್ನು ಧರ್ಮಸ್ಥಳ ಪ್ರಾಥಮಿಕ ಆರೋಗ್ಯ ಕೇoದ್ರದ ಹಿರಿಯ ವೈದ್ಯಾಧಿಕಾರಿ ಶ್ರೀಮತಿ ವಿಜಯಲಕ್ಷ್ಮಿ ಇವರು ನೀಡಿದರು.


ಶಾಲೆಯ 5, 6 ಮತ್ತು 7 ನೇ ತರಗತಿಯ ವಿದ್ಯಾರ್ಥಿ ವಿದ್ಯಾರ್ಥಿನಿಯರಿಗೆ ಹದಿ ಹರೆಯದಲ್ಲಿ ಶಾರೀರಕವಾಗಿ, ಮಾನಸಿಕವಾಗಿ ಆಗುವ ಬದಲಾವಣೆಗಳನ್ನು ಗಮನಿಸಿಕೊಳ್ಳಬೇಕು. ಸರಿಯಾಗಿ ಪೋಷಕರ ಮತ್ತು ಶಿಕ್ಷಕರು ಹೇಳುವ ಸರಿಯಾದ ಮಾಹಿತಿಯನ್ನು ಗಮನದಲ್ಲಿ ಇರಿಸಿಕೊಳ್ಳಬೇಕು ಎಂದರು.
ಕಾರ್ಯಕ್ರಮದಲ್ಲಿ ಶಾಲಾ ಮುಖ್ಯ ಗುರುಗಳಾದ ಪಿ ಸುಬ್ರಹ್ಮಣ್ಯ ರಾವ್, ಶಿಕ್ಷಕಿಯರಾದ ಶ್ರೀಜಾ, ಪೂರ್ಣಿಮಾ ಉಪಸ್ಥಿತರಿದ್ದರು.

Leave a Comment

error: Content is protected !!