24 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿವರದಿ

ಬೆಳ್ತಂಗಡಿ ತಾಲೂಕಿನಲ್ಲಿ ನೈತಿಕ ಪೊಲೀಸ್ ಗಿರಿ: ಸೂಕ್ತ ಕ್ರಮಕ್ಕೆ ಆಗ್ರಹಿಸಿ ಎಸ್‌ವೈಎಸ್ ಬೆಳ್ತಂಗಡಿ ಝೋನ್ ನಿಂದ ವೃತ ನಿರೀಕ್ಷಕರಿಗೆ ಮನವಿ

ಬೆಳ್ತಂಗಡಿ : ತಾಲೂಕಿನ ಎಲ್ಲಾ ಜಾತಿ ಧರ್ಮಗಳ ಜನರು ಪರಸ್ಪರ ಸ್ನೇಹ ಸೌಹಾರ್ದತೆ ಸಾಮರಸ್ಯ ಸಹಬಾಳ್ವೆಯಿಂದ ಜೀವನ ನಡೆಸುತ್ತಿದ್ದಾರೆ. ಆದರೆ ಕೆಲವೊಂದು ಕಿಡಿಗೇಡಿಗಳು ಕ್ಷುಲ್ಲಕ ಕಾರಣ ನೀಡಿ ಶಾಂತಿ ಸೌಹಾರ್ದತೆ ಕೆಡಿಸುವ ಪ್ರಯತ್ನ, ನೈತಿಕ ಪೋಲೀಸ್‌ಗಿರಿ ಹಾಗೂ ಅಲ್ಪಸಂಖ್ಯಾತ ಸಮುದಾಯದ ಜನರ ಮೇಲೆ ದೌರ್ಜನ್ಯ ಮೊದಲಾದ ಕೃತ್ಯಗಳು ತಾಲೂಕಿನ ವಿವಿಧೆಡೆ ನಡೆಯುತ್ತಿರುವುದು ಇತ್ತೀಚಿನ ದಿನಗಳಲ್ಲಿ ಕಂಡುಬರುತ್ತಿದೆ.
ಇದರ ಬಗ್ಗೆ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಬೆಳ್ತಂಗಡಿ ತಾಲೂಕು ವೃತ್ತ ನಿರೀಕ್ಷರಿಗೆ ಮನವಿ ಸಲ್ಲಿಸಲಾಯಿತು.

ಈ ಸಂದರ್ಭದಲ್ಲಿ ಎಸ್‌ವೈಎಸ್ ಕರ್ನಾಟಕ ರಾಜ್ಯ ಪ್ರಧಾನ ಕಾರ್ಯದರ್ಶಿ ಎಂ ಬಿ ಮುಹಮ್ಮದ್ ಸಾದಿಕ್ ಮಾಸ್ಟರ್ ಮಲೆಬೆಟ್ಟು, ಎಸ್‌ವೈಎಸ್ ಬೆಳ್ತಂಗಡಿ ಝೋನ್ ಅಧ್ಯಕ್ಷ ಕಾಸಿಂ ಮುಸ್ಲಿಯಾರ್ ಮಾಚಾರು, ಪ್ರಧಾನ ಕಾರ್ಯದರ್ಶಿ ನಝೀರ್ ಪೆರ್ದಾಡಿ, ಸಾಂತ್ವನ ಕಾರ್ಯದರ್ಶಿ ಸಲೀಂ ಕನ್ಯಾಡಿ, ಸದಸ್ಯರಾದ ಸಿದ್ದೀಖ್ ಪರಪ್ಪು, ಅಯ್ಯೂಬ್ ಮಹ್ಲರಿ ಕಾವಳಕಟ್ಟೆ, ಎಸ್ಸೆಸ್ಸೆಫ್ ಬೆಳ್ತಂಗಡಿ ಡಿವಿಷನ್ ಅಧ್ಯಕ್ಷ ಶಾಫಿ ಮದನಿ ಪಾಂಡವರಕಲ್ಲು, ಪ್ರಧಾನ ಕಾರ್ಯದರ್ಶಿ ನವಾಝ್ ಜಾರಿಗೆಬೈಲು, ಸದಸ್ಯ ಇಮ್ತಿಯಾಝ್ ಅಹ್ಸನಿ ಮಲೆಬೆಟ್ಟು ಮತ್ತಿತರರು ಹಾಜರಿದ್ದರು.

Related posts

ಪೆರ್ಲ -ಬೈಪಾಡಿ ಶ್ರೀ ಸಿದ್ದಿವಿನಾಯಕ ದೇವಸ್ಥಾನದ ಪುನರ್ ಪ್ರತಿಷ್ಟಾಬಂಧ ಬ್ರಹ್ಮಕಲಶೋತ್ಸವ: ಕೊಯ್ಯೂರು, ಕಳಿಯ, ನ್ಯಾಯತರ್ಪು, ಮತ್ತು ನಾಳ ಭಕ್ತಾದಿಗಳಿಂದ ಹಸಿರು ವಾಣಿ ಸಮರ್ಪಣೆ

Suddi Udaya

ಮೂಲ ಕೋಟೆ ತರವಾಡು ವತಿಯಿಂದ ಡಾ. ರವೀಶ್ ಪಡುಮಲೆಗೆ ಸನ್ಮಾನ

Suddi Udaya

ಸುರ್ಯ ಸದಾಶಿವರುದ್ರ ದೇವಸ್ಥಾನಕ್ಕೆ ಮಂಗಳೂರು ಕೆ.ಎಂ.ಎಫ್ ಅಧ್ಯಕ್ಷ ರವಿರಾಜ್ ಹೆಗ್ಡೆ ಭೇಟಿ

Suddi Udaya

ಬೆಳಾಲು: ಕೊಲ್ಪಾಡಿ ಶಾಲೆಗೆ ದಾನಿಗಳಿಂದ ಕೊಡುಗೆಗಳ ಹಸ್ತಾಂತರ

Suddi Udaya

ಶಿಬಾಜೆ ಬರ್ಗುಲದಲ್ಲಿ ವಿದ್ಯುತ್ ಸ್ಪರ್ಶಿಸಿ ಯುವತಿ ಸಾವು: ರೂ.25 ಲಕ್ಷ ಪರಿಹಾರ ನೀಡುವಂತೆ ಮೆಸ್ಕಾಂ ಇಲಾಖೆಗೆ ಶಾಸಕ ಹರೀಶ್ ಪೂಂಜಾ ಆಗ್ರಹ

Suddi Udaya

ಮದ್ದಡ್ಕ ನಿವಾಸಿ ಬೆಲ್ಚೆರ್ ಕ್ರಾಸ್ತ ಹೃದಯಾಘಾತದಿಂದ ನಿಧನ

Suddi Udaya
error: Content is protected !!