September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿವರದಿ

ಬೆಳ್ತಂಗಡಿ ತಾಲೂಕಿನಲ್ಲಿ ನೈತಿಕ ಪೊಲೀಸ್ ಗಿರಿ: ಸೂಕ್ತ ಕ್ರಮಕ್ಕೆ ಆಗ್ರಹಿಸಿ ಎಸ್‌ವೈಎಸ್ ಬೆಳ್ತಂಗಡಿ ಝೋನ್ ನಿಂದ ವೃತ ನಿರೀಕ್ಷಕರಿಗೆ ಮನವಿ

ಬೆಳ್ತಂಗಡಿ : ತಾಲೂಕಿನ ಎಲ್ಲಾ ಜಾತಿ ಧರ್ಮಗಳ ಜನರು ಪರಸ್ಪರ ಸ್ನೇಹ ಸೌಹಾರ್ದತೆ ಸಾಮರಸ್ಯ ಸಹಬಾಳ್ವೆಯಿಂದ ಜೀವನ ನಡೆಸುತ್ತಿದ್ದಾರೆ. ಆದರೆ ಕೆಲವೊಂದು ಕಿಡಿಗೇಡಿಗಳು ಕ್ಷುಲ್ಲಕ ಕಾರಣ ನೀಡಿ ಶಾಂತಿ ಸೌಹಾರ್ದತೆ ಕೆಡಿಸುವ ಪ್ರಯತ್ನ, ನೈತಿಕ ಪೋಲೀಸ್‌ಗಿರಿ ಹಾಗೂ ಅಲ್ಪಸಂಖ್ಯಾತ ಸಮುದಾಯದ ಜನರ ಮೇಲೆ ದೌರ್ಜನ್ಯ ಮೊದಲಾದ ಕೃತ್ಯಗಳು ತಾಲೂಕಿನ ವಿವಿಧೆಡೆ ನಡೆಯುತ್ತಿರುವುದು ಇತ್ತೀಚಿನ ದಿನಗಳಲ್ಲಿ ಕಂಡುಬರುತ್ತಿದೆ.
ಇದರ ಬಗ್ಗೆ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಬೆಳ್ತಂಗಡಿ ತಾಲೂಕು ವೃತ್ತ ನಿರೀಕ್ಷರಿಗೆ ಮನವಿ ಸಲ್ಲಿಸಲಾಯಿತು.

ಈ ಸಂದರ್ಭದಲ್ಲಿ ಎಸ್‌ವೈಎಸ್ ಕರ್ನಾಟಕ ರಾಜ್ಯ ಪ್ರಧಾನ ಕಾರ್ಯದರ್ಶಿ ಎಂ ಬಿ ಮುಹಮ್ಮದ್ ಸಾದಿಕ್ ಮಾಸ್ಟರ್ ಮಲೆಬೆಟ್ಟು, ಎಸ್‌ವೈಎಸ್ ಬೆಳ್ತಂಗಡಿ ಝೋನ್ ಅಧ್ಯಕ್ಷ ಕಾಸಿಂ ಮುಸ್ಲಿಯಾರ್ ಮಾಚಾರು, ಪ್ರಧಾನ ಕಾರ್ಯದರ್ಶಿ ನಝೀರ್ ಪೆರ್ದಾಡಿ, ಸಾಂತ್ವನ ಕಾರ್ಯದರ್ಶಿ ಸಲೀಂ ಕನ್ಯಾಡಿ, ಸದಸ್ಯರಾದ ಸಿದ್ದೀಖ್ ಪರಪ್ಪು, ಅಯ್ಯೂಬ್ ಮಹ್ಲರಿ ಕಾವಳಕಟ್ಟೆ, ಎಸ್ಸೆಸ್ಸೆಫ್ ಬೆಳ್ತಂಗಡಿ ಡಿವಿಷನ್ ಅಧ್ಯಕ್ಷ ಶಾಫಿ ಮದನಿ ಪಾಂಡವರಕಲ್ಲು, ಪ್ರಧಾನ ಕಾರ್ಯದರ್ಶಿ ನವಾಝ್ ಜಾರಿಗೆಬೈಲು, ಸದಸ್ಯ ಇಮ್ತಿಯಾಝ್ ಅಹ್ಸನಿ ಮಲೆಬೆಟ್ಟು ಮತ್ತಿತರರು ಹಾಜರಿದ್ದರು.

Related posts

ಬೆಳ್ತಂಗಡಿ ತಾ. ಪಂ ಕಾರ್ಯನಿರ್ವಾಹಕ ಅಧಿಕಾರಿ ಕುಸುಮಾಧರ್ ಹೊಳೆನರಸೀಪುರಕ್ಕೆ ವಗಾ೯ವಣೆ: ಕಡಬ ತಾ.ಪಂ ಕಾರ್ಯನಿರ್ವಾಹಕ ಅಧಿಕಾರಿ ಭವಾನಿಶಂಕರ್ ರವರಿಗೆ ಅಧಿಕಾರ ಹಸ್ತಾoತರ

Suddi Udaya

ಜ.8: ಉಜಿರೆ, ಧರ್ಮಸ್ಥಳ ವ್ಯಾಪ್ತಿಯಲ್ಲಿ ವಿದ್ಯುತ್ ನಿಲುಗಡೆ

Suddi Udaya

ಉರುವಾಲು : ಮುಹಮ್ಮದ್ ರಾಝಿಖ್ ದುಬೈನಲ್ಲಿ ಅನುಮಾನಸ್ಪದವಾಗಿ ಸಾವು

Suddi Udaya

ಬೆಳಗಾವಿ ಅಧಿವೇಶನ: ಬೆಳೆ ವಿಮೆ ಪರಿಹಾರದಲ್ಲಿ ತಾರತಮ್ಯ ಏಕೆ?: ಶಾಸಕ ಹರೀಶ್ ಪೂಂಜ

Suddi Udaya

ಮೇ 17: ವೇಣೂರುನಲ್ಲಿ ಬೃಹತ್ ಉಚಿತ ಆರೋಗ್ಯ ತಪಾಸಣಾ ಶಿಬಿರ

Suddi Udaya

ಮುಂಡಾಜೆ ಗ್ರಾಮ ಪಂಚಾಯತ್ ನ ಗ್ರಾಮಸಭೆ

Suddi Udaya
error: Content is protected !!