September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ರೋಟರಿ ಕ್ಲಬ್ ಬೆಳ್ತಂಗಡಿ, ರೋಟರಿ ಸೇವಾ ಟ್ರಸ್ಟ್, ರೋಟರಿ ಬೆಂಗಳೂರು ಇಂದಿರಾ ನಗರ,ಕ್ಯಾನ್ ಪಿನ್ ಹೋಮ್ಸ್ ಲಿಮಿಟೆಡ್ ವತಿಯಿಂದ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನ ವಿತರಣೆ

ಬೆಳ್ತಂಗಡಿ :ರೋಟರಿ ಕ್ಲಬ್ ಬೆಳ್ತಂಗಡಿ, ರೋಟರಿ ಸೇವಾ ಟ್ರಸ್ಟ್, ರೋಟರಿ ಬೆಂಗಳೂರು ಇಂದಿರಾ ನಗರ,ಕ್ಯಾನ್ ಪಿನ್ ಹೋಮ್ಸ್ ಲಿಮಿಟೆಡ್ ಇದರ ವತಿಯಿಂದ ಪ್ರತಿಭಾನ್ವಿತ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನ ವಿತರಣಾ ಸಮಾರಂಭವು ರೋಟರಿ ಸೇವಾ ಭವನ ಅರಳಿ ಕಾಶಿಬೆಟ್ಟುವಿನಲ್ಲಿ ಆ.5 ರಂದು ನಡೆಯಿತು.

ಸುಮಾರು 12 ಲಕ್ಷ ವೆಚ್ಚದಲ್ಲಿ ಕ್ಯಾನ್ ಫೀನ್ ಹೋಮ್ಸ್ ಸಂಸ್ಥೆ ಹಾಗೂ ರೋಟರಿ ಬೆಂಗಳೂರು ಇಂದಿರಾ ನಗರ ಸಹಭಾಗಿತ್ವದಲ್ಲಿ ತಾಲೂಕಿನ 135 ಪ್ರತಿಭಾನ್ವಿತ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನವನ್ನು ಕ್ಯಾನ್ ಫೀನ್ ಹೋಮ್ಸ್ ಸಂಸ್ಥೆಯ ಡಿಜಿಎಂ ಪ್ರಶಾಂತ್ ಜೋಷಿ ಹಾಗೂ ಬೆಳ್ತಂಗಡಿ ಶಾಸಕ ಹರೀಶ್ ಪೂಂಜರವರು ಹಸ್ತಾಂತರಿಸಿ ಶುಭ ಕೋರಿದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಬೆಳ್ತಂಗಡಿ ರೋಟರಿ ಕ್ಲಬ್ ಅಧ್ಯಕ್ಷ ಅನಂತ ಭಟ್ ಮಚ್ಚಿಮಲೆ ವಹಿಸಿದ್ದರು.

ವೇದಿಕೆಯಲ್ಲಿ ವಿಧಾನ ಪರಿಷತ್ ಸದಸ್ಯ ಪ್ರತಾಪ್ ಸಿಂಹ ನಾಯಕ್, ಬದುಕು ಕಟ್ಟೋಣ ಬನ್ನಿ ಸೇವಾ ಟ್ರಸ್ಟ್ ನ ಸ್ಥಾಪಕರಾದ ಮೋಹನ್ ಕುಮಾರ್ ಉಜಿರೆ, ರೋಟರಿ ಜಿಲ್ಲೆ 3181 ಜೋನ್ ರೋ.ಡಾ.ರಮೇಶ್, ರೋಟರಿ ಬೆಂಗಳೂರು ಇಂದಿರಾ ನಗರದ ಪೂರ್ವಾಧ್ಯಕ್ಷ ರೋ. ಜಗದೀಶ್ ಮುಗುಳಿ, ರೋಟರಿ ಜೋನ್ ರೋ.ಯಶವಂತ ಪಟವರ್ಧನ್,ರೋ.ಡೈರೆಕ್ಟರ್ ಸ್ಪೀಚ್ ಡಿ.ಎಂ ಗೌಡ ಉಪಸ್ಥಿತರಿದ್ದರು.

ನ್ಯಾಯವಾದಿ ರೋ.ದನಂಜಯ್ ರಾವ್ ಪ್ರಾಸ್ತಾವಿಕ ಮಾತನಾಡಿ ಸ್ವಾಗತಿಸಿದರು, ಎಸ್.ಡಿ.ಎಂ ಕಾಲೇಜಿನ ನಿವೃತ್ತ ಪ್ರಾಂಶುಪಾಲರಾದ ಡಾ.ಜಯಕುಮಾರ್ ನಿರೂಪಿಸಿದರು. ಬೆಳ್ತಂಗಡಿ ರೋಟರಿ ಕ್ಲಬ್ ಕಾರ್ಯದರ್ಶಿ ವಿದ್ಯಾ ಕುಮಾರ್ ಕಾಂಚೋಡು ವಂದಿಸಿದರು.

ಬೆಳ್ತಂಗಡಿ ರೋಟರಿ ಕ್ಲಬ್ ಪದಾಧಿಕಾರಿಗಳು ಸಹಕರಿಸಿದರು.

Related posts

ವಾಣಿ ಪದವಿ ಪೂರ್ವ ಕಾಲೇಜಿನ ಎನ್ಎಸ್ಎಸ್ ವಾರ್ಷಿಕ ವಿಶೇಷ ಶಿಬಿರ ಸಮಾರೋಪ ಸಮಾರಂಭ

Suddi Udaya

ಸುಲ್ಕೇರಿ ಅಂಗನವಾಡಿಯ ಹಳೆ ವಿದ್ಯಾರ್ಥಿನಿಯ ಪೋಷಕರಿಂದ ಸಾವಯವ ತರಕಾರಿ ಗಿಡಗಳ ಹಸ್ತಾಂತರ

Suddi Udaya

ಎಸ್‌ಎಸ್‌ಎಲ್‌ಸಿ ಫಲಿತಾಂಶ ಪ್ರಕಟ: ಉಡುಪಿ ಜಿಲ್ಲೆ ಪ್ರಥಮ, ದ.ಕ ಜಿಲ್ಲೆ ದ್ವಿತೀಯ

Suddi Udaya

ನೀರಚಿಲುಮೆ-ನಾರ್ಯ ಸಂಪರ್ಕಿಸುವ ರಸ್ತೆಯಲ್ಲಿ ನೀರು ಹರಿಯಲು ಚರಂಡಿ ವ್ಯವಸ್ಥೆಯಿಲ್ಲದೆ ಧರೆ ಕುಸಿತ, ಶೀಘ್ರ ದುರಸ್ಥಿಗೆ ಆಗ್ರಹ

Suddi Udaya

ಗುರುವಾಯನಕೆರೆ ವಿಜಯ ಕ್ರೆಡಿಟ್ ಕೋ -ಆಪರೇಟಿವ್ ಸೊಸೈಟಿಯ ವಾರ್ಷಿಕ ಮಹಾಸಭೆ: ರೂ.571 ಕೋಟಿ ವಾರ್ಷಿಕ ವ್ಯವಹಾರ, ರೂ.1.53 ಕೋಟಿ ನಿವ್ವಳ ಲಾಭ, ಸದಸ್ಯರಿಗೆ ಶೇ.18 ಡಿವಿಡೆಂಟ್

Suddi Udaya

ಮಚ್ಚಿನ ಗ್ರಾಮದ ಕಾಂಗ್ರೆಸ್ ನ ಸಕ್ರಿಯ ನಾಯಕ ಸಂದೀಪ್ ಮಡಿವಾಳ್ ಬಿಜೆಪಿಗೆ ಸೇರ್ಪಡೆ

Suddi Udaya
error: Content is protected !!