September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ಶಾರದ ಮಂಟಪ ಉಜಿರೆ 17ನೇ ವರ್ಷದ ಸಾರ್ವಜನಿಕ ಗಣೇಶೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ, ಪೂರ್ವಭಾವಿ ಸಭೆ

ಉಜಿರೆ:ಸಾರ್ವಜನಕ ಶ್ರೀ ಗಣೇಶೋತ್ಸವ ಸಮಿತಿ ಶಾರದಾ ಮಂಟಪ ಉಜಿರೆ ಇದರ ವತಿಯಿಂದ ನಡೆಯುವ ಶ್ರೀ ಗಣೇಶೋತ್ಸವದ ಪೂರ್ವಾಭಾವಿ ಸಭೆ ಹಾಗೂ ಆಮಂತ್ರಣ ಪತ್ರಿಕೆ ಬಿಡುಗಡೆ ಸಮಾರಂಭ ಆಗಷ್ಟ್ 3 ರಂದು ಜನಾರ್ದನ ದೇವಸ್ಥಾನದ ರಾಮಕೃಷ್ಣ ಸಭಾ ಮಂಟಪದಲ್ಲಿ ನಡೆಯಿತು.

ಸೆಪ್ಟೆಂಬರ್ 19 ರಿಂದ ಸೆಪ್ಟೆಂಬರ್ 21 ರವರೆಗೆ ಶಾರದ ಮಂಟಪದಲ್ಲಿ ನಡೆಯಲಿರುವ 17ನೇ ವರ್ಷದ ಸಾರ್ವಜನಿಕ ಗಣೇಶೋತ್ಸವದ ಆಮಂತ್ರಣ ಪತ್ರಿಕೆಯನ್ನು ಗೌರವಾಧ್ಯಕ್ಷರಾದ ಶರತ್ ಕೃಷ್ಣ ಪಡ್ವೆಟ್ನಾಯರು ಮತ್ತು ಉಜಿರೆ ಗ್ರಾ.ಪಂ ಅಧ್ಯಕ್ಷೆ ಪುಷ್ಪಾವತಿ ಆರ್ ಶೆಟ್ಟಿ ಅವರು ಬಿಡುಗಡೆಗೊಳಿಸಿ ಶುಭಕೋರಿದರು.

ಈ ಸಂದರ್ಭದಲ್ಲಿ ಗಣೇಶೋತ್ಸವ ಸಮಿತಿ ಸಂಚಾಲಕರಾದ ಮೋಹನ್ ಕುಮಾರ್, ಕಳೆದ ಬಾರಿಯ ಅಧ್ಯಕ್ಷರಾದ ಅರವಿಂದ ಕಾರಂತ್, ಸಂಚಾಲಕರಾದ ಪ್ರಕಾಶ್ ಅಪ್ರಮೆಯ, ಗಣೇಶೋತ್ಸವ ಸಮಿತಿ ಅಧ್ಯಕ್ಷ ರಾಮಣ್ಣಗೌಡ, ಕಾರ್ಯದರ್ಶಿ ಪ್ರವೀಣ್, ಕೋಶಾಧಿಕಾರಿ ಧೀರಾಜ್ ಉಪಸ್ಥಿತರಿದ್ದರು.ಕುಮಾರಿ ಇಂಚರ ಕಾರಂತ ಪ್ರಾರ್ಥನೆ ಹಾಡಿದರು.ಪ್ರಸಾದ್ ಬಿ.ಎಸ್ ಮತ್ತು ಗೋಪಾಲಕೃಷ್ಣ ರವರು ಕಾರ್ಯಕ್ರಮ ನಿರೂಪಿಸಿದರು. ಮಮತಾ ವಂದಿಸಿದರು.

Related posts

ಕು.ಸೌಜನ್ಯ ಪ್ರಕರಣ: ಮರು ತನಿಖೆಗೆ ಒತ್ತಾಯಿಸಿ ಸಾರ್ವಜನಿಕ ಹಿತಾಸಕ್ತಿ ಅರ್ಜಿ: ಸೆ. 8ರಂದು (ಇಂದು)ಹೈಕೋರ್ಟಿನಲ್ಲಿ ವಿಚಾರಣೆ

Suddi Udaya

ಸ್ಕ್ರೈಬ್ ಮೈಂಡ್ಸ್ ಮತ್ತು ಮೀಡಿಯಾ ಕಾರ್ಯಕ್ರಮದಲ್ಲಿ ಹತ್ಯಡ್ಕದ ವಿವೇಕಾನಂದ ರಿಗೆ ಟಾಪ್ 10 ನಾಯಕ ಪ್ರಶಸ್ತಿ

Suddi Udaya

ಕಡಿರುದ್ಯಾವರ: ಕೆ. ಎನ್. ಭಟ್ ಶಿರಾಡಿಪಾಲ್ ಜನ್ಮ ಶತಮಾನೋತ್ಸವ ಸಮಾರಂಭದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಧಮ೯ಸ್ಥಳ ಮಹಾದ್ವಾರದ ಬಳಿ ಪಾದಯಾತ್ರಿಗಳಿಗೆ ಸ್ವಾಗತ

Suddi Udaya

ಪ್ರವೀಣ್ ನೆಟ್ಟಾರು ಮನೆಗೆ ಹರೀಶ್ ಪೂಂಜ ಭೇಟಿ

Suddi Udaya

ಆಹಾರ ಇಲಾಖೆ ಆದೇಶ: ಬೆಳಗ್ಗೆ 6ರಿಂದ ರಾತ್ರಿ 10 ರವರೆಗೆ ಪಡಿತರ ವಿತರಣೆ

Suddi Udaya
error: Content is protected !!