July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬೆಳ್ತಂಗಡಿ ಬಂಟರ ಯಾನೆ ನಾಡವರ ಸಂಘದ ವತಿಯಿಂದ ವಿದ್ಯಾರ್ಥಿ ಪ್ರತಿಭಾ ಪುರಸ್ಕಾರ ಮತ್ತು ಅರ್ಹ ವಿದ್ಯಾರ್ಥಿಗಳಿಗೆ ಪ್ರೋತ್ಸಾಹ ಧನ ವಿತರಣಾ

ಬಂಟರ ಯಾನೆ ನಾಡವರ ಸಂಘ ಬೆಳ್ತಂಗಡಿ ಇದರ ಆಶ್ರಯದಲ್ಲಿ ಜಾಗತಿಕ ಬಂಟರ ಸಂಘಗಳ ಒಕ್ಕೂಟ ಮಂಗಳೂರು ಬಂಟರ ಯಾನೆ ನಾಡವರ ಮಾತೃ ಸಂಘ ಮಂಗಳೂರು ಬಂಟರ ಸಂಘ ಬೆಂಗಳೂರು ಇವುಗಳ ಸಹ ಭಾಗಿತ್ವದಲ್ಲಿ ವಿದ್ಯಾರ್ಥಿ ಪ್ರತಿಭಾ ಪುರಸ್ಕಾರ ಮತ್ತು ಅರ್ಹ ವಿದ್ಯಾರ್ಥಿಗಳಿಗೆ ಪ್ರೋತ್ಸಾಹ ಧನ ವಿತರಣಾ ಸಮಾರಂಭ ಆ. 6ರಂದು ಬಂಟರ ಭವನ ಗುರುವಾಯನಕೆರೆ ಯಲ್ಲಿ ಜರಗಿತು.

ಅಧ್ಯಕ್ಷತೆಯನ್ನು ಬೆಳ್ತಂಗಡಿ ಬಂಟರ ಯಾನೆ ನಾಡವರ ಸಂಘದ ಅಧ್ಯಕ್ಷ ಜಯರಾಮ್ ಶೆಟ್ಟಿ ಮುಂಡಾಡಿ ಗುತ್ತು ವಹಿಸಿದರು.

ನಿಕಟಪೂರ್ವ ಲಯನ್ಸ್ ಜಿಲ್ಲಾ ರಾಜಪಾಲರಾದ ಸಂಜಿತ್ ಶೆಟ್ಟಿ ಉಧ್ಘಾಟಿಸಿದರು .ಮುಖ್ಯ ಅತಿಥಿಗಳಾಗಿ ಆಗಮಿಸಿದ ಬೆಳ್ತಂಗಡಿ ಶಾಸಕ ಹರೀಶ್ ಪೂಂಜ ಮಾತನಾಡಿ ಯಾವಾಗಲು ಉದ್ಯೋಗಿಗಳಾದೆ ಉದ್ಯೋಗ ಕೊಡುವಂತವರು ಆಗಬೇಕು. ಉತ್ತಮ ಸಮಾಜ ನಿರೂಪಿಸಬೇಕು ಎಂದರು.

ಈ ಸಂದರ್ಭದಲ್ಲಿ ಮಂಗಳೂರು ಮಾತೃ ಸಂಘ ಸಂಚಾಲಕ ಜಯರಾಮ್ ಭಂಡಾರಿ, . ಮಂಗಳೂರು ಜಾಗತಿಕ ಬಂಟರ ಸಂಘಗಳ ಒಕ್ಕೂಟದ ನಿರ್ದೇಶಕ ಜಯಂತ್ ಶೆಟ್ಟಿ,. ಉಜಿರೆ ಎಸ್ಡಿ ಎಮ್ ಕಾಲೇಜ್ ಪ್ರಾಂಶುಪಾಲ ಡಾ. ಬಿ ಎ ಕುಮಾರ್, ಸಂಚಾಲಕರಾದ ವಿಠಲ್ ಶೆಟ್ಟಿ, ಕಾರ್ಯದರ್ಶಿ ಸಂಜೀವ ಶೆಟ್ಟಿ, ಕೋಶಾಧಿಕಾರಿ ಕೆಎನ್ ಆನಂದ ಶೆಟ್ಟಿ, ಜೊತೆ ಕಾರ್ಯದರ್ಶಿ ಸುರೇಶ್ ಶೆಟ್ಟಿ ಲಾಯಿಲ,. ಬಂಟರ ಯುವ ವಿಭಾಗದ ಅಧ್ಯಕ್ಷರಾದ ಸುಜಯ್ ಶೆಟ್ಟಿ, ಮಹಿಳಾ ವಿಭಾಗದ ಅಧ್ಯಕ್ಷರಾದ ಶೋಭಾ ವಿ ಶೆಟ್ಟಿ ಉಪಸ್ಥಿತರಿದ್ದರು .

ಸಂಘದ ಉಪಾಧ್ಯಕ್ಷ ವಿಠ್ಠಲ್ ಶೆಟ್ಟಿ ಸ್ವಾಗತಿಸಿ, ಕಾರ್ಯಕ್ರಮವನ್ನು ವಸಂತ್ ಶೆಟ್ಟಿ ನಿರೂಪಿಸಿದರು.

Related posts

ಮೇಲಂತಬೆಟ್ಟು ಗ್ರಾ.ಪಂ. ನಲ್ಲಿ ಗಣರಾಜ್ಯೋತ್ಸವ ಆಚರಣೆ

Suddi Udaya

ಬಂದಾರು: ಮೈರೊಳ್ತಡ್ಕ ವಾರ್ಡ್ ನ ನಿನ್ನಿಕಲ್ಲು- ಪುಯಿಲ ಕಾಂಕ್ರಿಟ್ ರಸ್ತೆ ಉದ್ಘಾಟನೆ

Suddi Udaya

ಮಚ್ಚಿನ: ಪೆರ್ನೆಡ್ಕ ನಿವಾಸಿ ಜನಾರ್ದನ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನ

Suddi Udaya

ನಡ ಪ್ರೌಢ ಶಾಲೆ ಹಾಗೂ ಕಾಲೇಜಿಗೆ ನುಗ್ಗಿದ ಕಳ್ಳರು: ಸಿಸಿ ಕ್ಯಾಮರ ಹಾಗೂ ದಾಖಲೆ ಪತ್ರಗಳಿಗೆ ಹಾನಿ

Suddi Udaya

ಗೂಡಿನಿಂದ ಕೋಳಿಗಳನ್ನು ಹೊತ್ತೊಯ್ದಿ ಕಾಡುಪ್ರಾಣಿ

Suddi Udaya

ದಯಾ ವಿಶೇಷ ಶಾಲೆಯಲ್ಲಿ ವಿಶ್ವ ಹೆಣ್ಣು ಮಕ್ಕಳ ದಿನಾಚರಣೆ

Suddi Udaya
error: Content is protected !!