23.5 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬೆಳ್ತಂಗಡಿ ಬಂಟರ ಯಾನೆ ನಾಡವರ ಸಂಘದ ವತಿಯಿಂದ ವಿದ್ಯಾರ್ಥಿ ಪ್ರತಿಭಾ ಪುರಸ್ಕಾರ ಮತ್ತು ಅರ್ಹ ವಿದ್ಯಾರ್ಥಿಗಳಿಗೆ ಪ್ರೋತ್ಸಾಹ ಧನ ವಿತರಣಾ

ಬಂಟರ ಯಾನೆ ನಾಡವರ ಸಂಘ ಬೆಳ್ತಂಗಡಿ ಇದರ ಆಶ್ರಯದಲ್ಲಿ ಜಾಗತಿಕ ಬಂಟರ ಸಂಘಗಳ ಒಕ್ಕೂಟ ಮಂಗಳೂರು ಬಂಟರ ಯಾನೆ ನಾಡವರ ಮಾತೃ ಸಂಘ ಮಂಗಳೂರು ಬಂಟರ ಸಂಘ ಬೆಂಗಳೂರು ಇವುಗಳ ಸಹ ಭಾಗಿತ್ವದಲ್ಲಿ ವಿದ್ಯಾರ್ಥಿ ಪ್ರತಿಭಾ ಪುರಸ್ಕಾರ ಮತ್ತು ಅರ್ಹ ವಿದ್ಯಾರ್ಥಿಗಳಿಗೆ ಪ್ರೋತ್ಸಾಹ ಧನ ವಿತರಣಾ ಸಮಾರಂಭ ಆ. 6ರಂದು ಬಂಟರ ಭವನ ಗುರುವಾಯನಕೆರೆ ಯಲ್ಲಿ ಜರಗಿತು.

ಅಧ್ಯಕ್ಷತೆಯನ್ನು ಬೆಳ್ತಂಗಡಿ ಬಂಟರ ಯಾನೆ ನಾಡವರ ಸಂಘದ ಅಧ್ಯಕ್ಷ ಜಯರಾಮ್ ಶೆಟ್ಟಿ ಮುಂಡಾಡಿ ಗುತ್ತು ವಹಿಸಿದರು.

ನಿಕಟಪೂರ್ವ ಲಯನ್ಸ್ ಜಿಲ್ಲಾ ರಾಜಪಾಲರಾದ ಸಂಜಿತ್ ಶೆಟ್ಟಿ ಉಧ್ಘಾಟಿಸಿದರು .ಮುಖ್ಯ ಅತಿಥಿಗಳಾಗಿ ಆಗಮಿಸಿದ ಬೆಳ್ತಂಗಡಿ ಶಾಸಕ ಹರೀಶ್ ಪೂಂಜ ಮಾತನಾಡಿ ಯಾವಾಗಲು ಉದ್ಯೋಗಿಗಳಾದೆ ಉದ್ಯೋಗ ಕೊಡುವಂತವರು ಆಗಬೇಕು. ಉತ್ತಮ ಸಮಾಜ ನಿರೂಪಿಸಬೇಕು ಎಂದರು.

ಈ ಸಂದರ್ಭದಲ್ಲಿ ಮಂಗಳೂರು ಮಾತೃ ಸಂಘ ಸಂಚಾಲಕ ಜಯರಾಮ್ ಭಂಡಾರಿ, . ಮಂಗಳೂರು ಜಾಗತಿಕ ಬಂಟರ ಸಂಘಗಳ ಒಕ್ಕೂಟದ ನಿರ್ದೇಶಕ ಜಯಂತ್ ಶೆಟ್ಟಿ,. ಉಜಿರೆ ಎಸ್ಡಿ ಎಮ್ ಕಾಲೇಜ್ ಪ್ರಾಂಶುಪಾಲ ಡಾ. ಬಿ ಎ ಕುಮಾರ್, ಸಂಚಾಲಕರಾದ ವಿಠಲ್ ಶೆಟ್ಟಿ, ಕಾರ್ಯದರ್ಶಿ ಸಂಜೀವ ಶೆಟ್ಟಿ, ಕೋಶಾಧಿಕಾರಿ ಕೆಎನ್ ಆನಂದ ಶೆಟ್ಟಿ, ಜೊತೆ ಕಾರ್ಯದರ್ಶಿ ಸುರೇಶ್ ಶೆಟ್ಟಿ ಲಾಯಿಲ,. ಬಂಟರ ಯುವ ವಿಭಾಗದ ಅಧ್ಯಕ್ಷರಾದ ಸುಜಯ್ ಶೆಟ್ಟಿ, ಮಹಿಳಾ ವಿಭಾಗದ ಅಧ್ಯಕ್ಷರಾದ ಶೋಭಾ ವಿ ಶೆಟ್ಟಿ ಉಪಸ್ಥಿತರಿದ್ದರು .

ಸಂಘದ ಉಪಾಧ್ಯಕ್ಷ ವಿಠ್ಠಲ್ ಶೆಟ್ಟಿ ಸ್ವಾಗತಿಸಿ, ಕಾರ್ಯಕ್ರಮವನ್ನು ವಸಂತ್ ಶೆಟ್ಟಿ ನಿರೂಪಿಸಿದರು.

Related posts

ರೈತರಿಗೆ ಬೆಳೆ ವಿಮೆ ಪಾವತಿಸಲು ಜು.31 ಅಂತಿಮ ದಿನ

Suddi Udaya

ತಾಲೂಕು ಮಟ್ಟದ ವಿಜ್ಞಾನ ಮೇಳ: ನಾವೂರು ಸ.ಹಿ.ಪ್ರಾ ಶಾಲಾ ಇಬ್ಬರು ವಿದ್ಯಾರ್ಥಿಗಳಿಗೆ ಪ್ರಥಮ ಸ್ಥಾನ

Suddi Udaya

ಕಬಡ್ಡಿ ಪಂದ್ಯಾಟ: ಕುವೆಟ್ಟು ಸ.ಉ.ಹಿ.ಪ್ರಾ.ಶಾಲೆಯ ವಿದ್ಯಾರ್ಥಿಗಳು ದ್ವಿತೀಯ ಸ್ಥಾನ

Suddi Udaya

ಕಲ್ಮಂಜದಲ್ಲಿ ಕಾಡಾನೆಗಳ ಹಾವಳಿ: ಬಾಳೆ ಕೃಷಿ, ಅಡಿಕೆ ಬೆಳೆ ಹಾನಿ

Suddi Udaya

ಬಾರ್ಯ ಶ್ರೀ ಮಹಾವಿಷ್ಣುಮೂರ್ತಿ ದೇವಸ್ಥಾನದಲ್ಲಿ ವಿಜಯದಶಮಿಯ ವಿಶೇಷ ಪೂಜೆ ಹಾಗೂ ಆಡಳಿತ ಟ್ರಸ್ಟ್ ವತಿಯಿಂದ ಊರವರ ಭಕ್ತರ ಸಭೆ

Suddi Udaya

ರಾಜ್ಯಮಟ್ಟದ ಕರಾಟೆ ಸ್ಪರ್ಧೆ: ಅಳದಂಗಡಿ ಸೈಂಟ್ ಪೀಟರ್ ಕ್ಲೇವರ್ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿ ಪ್ರೇಕ್ಷಿತ್ ತೃತೀಯ ಸ್ಥಾನ

Suddi Udaya
error: Content is protected !!