31.9 C
ಪುತ್ತೂರು, ಬೆಳ್ತಂಗಡಿ
April 9, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಅಳದಂಗಡಿ ಸ. ಪ್ರೌ. ಶಾಲೆಯ ಶಿಕ್ಷಕ ಜಗದೀಶ್ ಬಿ.ಎಸ್ ಹಾಗೂ ಗೌರವ ಶಿಕ್ಷಕಿ ಸಾಧನ ರವರಿಗೆ ಬೀಳ್ಕೊಡುಗೆ ಸಮಾರಂಭ

ಅಳದಂಗಡಿ ಸರಕಾರಿ ಪ್ರೌಡ ಶಾಲೆಯ ಶಿಕ್ಷಕ ಜಗದೀಶ್ ಬಿ.ಎಸ್ ಹಾಗೂ ಅತಿಥಿ ಶಿಕ್ಷಕಿ ಸಾಧನ ರವರಿಗೆ ಬೀಳ್ಕೊಡುಗೆ ಸಮಾರಂಭವು ಇತ್ತೀಚೆಗೆ ಶಾಲೆಯಲ್ಲಿ ನಡೆಯಿತು.

ಶಾಲೆಯಲ್ಲಿ ಸುಮಾರು 15 ವರ್ಷ ಚಿತ್ರಕಲಾ ಶಿಕ್ಷಕರಾಗಿ ಸೇವೆ ಸಲ್ಲಿಸಿ ಸಾವಿರಾರು ವಿದ್ಯಾರ್ಥಿಗಳಿಗೆ ಮಾರ್ಗದರ್ಶನ ನೀಡಿ ದಾರಿದೀಪವಾದ ಜಗದೀಶ್ ಬಿ.ಎಸ್ ರವರು ಇತ್ತೀಚೆಗೆ ನಡೆದ ಶಿಕ್ಷಕರ ವರ್ಗಾವಣೆಯಲ್ಲಿ ಅವರ ಹುಟ್ಟೂರು ಹಾಸನ ಜಿಲ್ಲೆಯ ಅರಕಲಗೂಡು ತಾಲೂಕಿನ ಹುಲಿಕಲ್ ಪ್ರೌಢ ಶಾಲೆಗೆ ವರ್ಗಾವಣೆ ಪಡೆದುಕೊಂಡಿರುತ್ತಾರೆ.


ಶಾಲೆಯಲ್ಲಿ ಸಮಾಜ ವಿಜ್ಞಾನ ವಿಷಯದ ಗೌರವ ಶಿಕ್ಷಕಿ ಶ್ರೀಮತಿ ಸಾಧನ ರವರು ವಿದ್ಯಾರ್ಥಿ ಗಳಿಗೆ ಪಾಠ ಬೋಧನೆಯ ಜೊತೆಗೆ ಸಹ ಪಠ್ಯ ಚಟುವಟಿಕೆಯ ಮಾರ್ಗದರ್ಶನ ನೀಡಿ ವಿದ್ಯಾರ್ಥಿಗಳ ಪಾಲಿನ ಅಚ್ಚು ಮೆಚ್ಚಿನ ಶಿಕ್ಷಕಿಯಾಗಿದ್ದಾರೆ.


ಶಿಕ್ಷಕರಿಗೆ ಶಾಲಾಭಿವೃದ್ಧಿ ಸಮಿತಿ, ಹಳೆ ವಿದ್ಯಾರ್ಥಿಗಳು, ಶಾಲಾ ಮುಖ್ಯೋಪಾಧ್ಯಯರು, ಶಿಕ್ಷಕರು, ವಿದ್ಯಾರ್ಥಿಗಳ ಸಮ್ಮುಖದಲ್ಲಿ, ರಮೇಶ್ ದೇವಾಡಿಗ ರವರ ಅಧ್ಯಕ್ಷತೆಯಲ್ಲಿ ಗೌರವ ಸನ್ಮಾನದೊಂದಿಗೆ ಬೀಳ್ಕೊಡುಗೆ ಸಮಾರಂಭವನ್ನು ಹಮ್ಮಿಕೊಳ್ಳಲಾಯಿತು.

ಹಲವಾರು ವಿದ್ಯಾರ್ಥಿಗಳು ಶಿಕ್ಷಕರ ಬಗ್ಗೆ ಮೆಚ್ಚುಗೆಯ ನುಡಿಗಳನ್ನಾಡಿ ನೆನಪಿನ ಕಾಣಿಕೆಗಳನ್ನು ನೀಡಿದರು. ಶಾಲೆಯಲ್ಲಿ ಸೇವೆ ಸಲ್ಲಿಸಿ ವರ್ಗಾವಣೆಯಾದ ಶಿಕ್ಷಕರು, ಇತರ ಶಾಲೆಗಳಿಂದ ಆಗಮಿಸಿದ ಚಿತ್ರಕಲಾ ಶಿಕ್ಷಕರು, ನಿವೃತ್ತ ಮುಖ್ಯ ಶಿಕ್ಷಕರು ಯಶೋಧರ ಸುವರ್ಣ, ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷರು ಮನೋಹರ್ ಮತ್ತು ದಕ್ಷಿಣ ಕನ್ನಡ ಜಿಲ್ಲಾ ಪ್ರೌಡ ಶಾಲಾ ಶಿಕ್ಷಕರ ಸಂಘದ ಜಿಲ್ಲಾ ಅಧ್ಯಕ್ಷ ಮಹಮ್ಮದ್ ರಿಯಾಜ್ ರವರು ವರ್ಗಾವಣೆಯಾದ ಶಿಕ್ಷಕರಿಗೆ ಶುಭ ಹಾರೈಸಿದರು.
ಶ್ರೀಮತಿ ಲಲಿತಾ ಹಾಗೂ ಜಗದೀಶ್ ರವರು ಸನ್ಮಾನ ಪತ್ರವನ್ನು ವಾಚಿಸಿದರು.

ಗಣಿತ ಶಿಕ್ಷಕಿ ಶ್ರೀಮತಿ ಪ್ರೇಮಲತಾ ಸಿಲ್ವಿಯ ಡಿಕೋಸ್ತ ರವರು ಕಾರ್ಯಕ್ರಮ ನಿರೂಪಿಸಿ, ಶಾಲಾ ಮುಖ್ಯೋಪಾಧ್ಯಾಯಿನಿ ಶ್ರೀಮತಿ ಶಾಂತಿ ಮರಿಯಾ ಸಾಲ್ದಾನ್ಹ ಸ್ವಾಗತಿಸಿ, ಹಿಂದಿ ಶಿಕ್ಷಕಿ ಶ್ರೀಮತಿ ಲಿಲ್ಲಿ ಮ್ಯಾಥ್ಯುರವರು ವಂದಿಸಿದರು.

Related posts

ವಾಣಿ ಕಾಲೇಜು: ಅಕ್ಷರವಾಣಿ ಭಿತ್ತಿಪತ್ರಿಕೆ ಅನಾವರಣ

Suddi Udaya

ರೆಖ್ಯ : ಮಳೆಯಿಂದ ಹಾನಿಗೊಳಗಾದ ಸ್ಥಳಕ್ಕೆ ಬಿಜೆಪಿ ಬೆಳ್ತಂಗಡಿ ಮಂಡಲದ ವತಿಯಿಂದ ಭೇಟಿ

Suddi Udaya

ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲೆಯಲ್ಲಿ ದ.ಕ. ಜಿಲ್ಲೆಯ ಸಿ.ಬಿ.ಎಸ್.ಇ ಅಂತರ ಶಾಲೆಗಳ ಐಕ್ಸ್ (AICS) ಸಾಂಸ್ಕೃತಿಕ ಸ್ಪರ್ಧೆ

Suddi Udaya

ವಲಯ ಮಟ್ಟದ ವಾಲಿಬಾಲ್ ಪಂದ್ಯಾಟ: ಮನ್ ಶರ್ ಆಂ.ಮಾ. ಶಾಲೆಯ ವಿದ್ಯಾರ್ಥಿಗಳು ತಾಲೂಕು ಮಟ್ಟಕೆ ಆಯ್ಕೆ

Suddi Udaya

ಕ್ಲಸ್ಟರ್ ಮಟ್ಟದ ಅಥ್ಲೆಟಿಕ್ಸ್ ನಲ್ಲಿ ಎಸ್ ಡಿ ಎಂ ಬೆಳ್ತಂಗಡಿಯ ವಿದ್ಯಾರ್ಥಿಗಳು ತಾಲೂಕು ಮಟ್ಟಕ್ಕೆ ಆಯ್ಕೆ

Suddi Udaya

ಕುಕ್ಕೇಡಿ ಡಾ. ಬಿ. ಆರ್ ಅಂಬೇಡ್ಕರ್ ಭವನದ ಮುಂದುವರಿದ ಕಾಮಗಾರಿ ಗೆ ಹೆಚ್ಚುವರಿ ರೂ.50 ಲಕ್ಷ ಅನುದಾನ ಮಂಜೂರು: ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ

Suddi Udaya
error: Content is protected !!