September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿಬೆಳ್ತಂಗಡಿ

ಆ.15: ನಾಲ್ಕೂರು ಶ್ರೀ ಪಂಚಲಿಂಗೇಶ್ವರ ಭಜನಾ ಮಂಡಳಿಯಿಂದ ಸ್ವಾತಂತ್ರ್ಯೋತ್ಸವದ ಧ್ವಜಾರೋಹಣ ಕಾರ್ಯಕ್ರಮ ಹಾಗೂ ವಿವಿಧ ಆಟೋಟ ಸ್ಪರ್ಧೆಗಳು

ನಾಲ್ಕೂರು ಶ್ರೀ ಪಂಚಲಿಂಗೇಶ್ವರ ಭಜನಾ ಮಂಡಳಿ ವತಿಯಿಂದ ಸ್ವಾತಂತ್ರ್ಯೋತ್ಸವದ ಧ್ವಜಾರೋಹಣ ಕಾರ್ಯಕ್ರಮವು ಹಾಗೂ ವಿವಿಧ ಆಟೋಟ ಸ್ಪರ್ಧೆಗಳು ಆ.15ರಂದು ನಾಲ್ಕೂರು ಶ್ರೀ ಪಂಚಲಿಂಗೇಶ್ವರ ಭಜನಾ ಮಂಡಳಿ ವಠಾರದಲ್ಲಿ ಜರಗಲಿರುವುದು.


ನಾಲ್ಕೂರು ಹಾಲು ಉತ್ಪಾದಕರ ಸಹಕಾರಿ ಸಂಘದ ಅಧ್ಯಕ್ಷ ವಸಂತ ಶೆಟ್ಟಿ ಕಾರ್ಯಕ್ರಮ ಉದ್ಘಾಟಿಸಲಿದ್ದಾರೆ. ಬೆಳಿಗ್ಗೆ ನಾಲ್ಕೂರು ಬಳಂಜ ಗ್ರಾಮಗಳ ಗ್ರಾಮಸ್ಥರಿಗೆ ಆಟೋಟ ಸ್ಪರ್ಧೆಗಳ ನಡೆಯಲಿರುವುದು. ಪುರುಷರಿಗೆ: ಹಗ್ಗಜಗ್ಗಾಟ, ಗುಂಡೆಸೆತ, ಮಡಕೆ ಒಡೆಯುವುದು, ನಿಧಿ ಅನ್ವೇಷಣೆ, ತೆಂಗಿನಕಾಯಿಗೆ ಕಲ್ಲು ಎಸೆಯುವುದು, ವಾಲಿಬಾಲ್, ಮಹಿಳೆಯರಿಗೆ ಸಂಗೀತ ಕುರ್ಚಿ, ಮಡಕೆ ಒಡೆಯುವುದು, ಗುಂಡೆಸೆತ, ಹಗ್ಗಜಗ್ಗಾಟ, ತ್ರೋಬಾಲ್ ಹಾಗೂ ಮಕ್ಕಳಿಗೆ ವಿವಿಧ ಆಟೋಟ ಸ್ಪರ್ಧೆಗಳ ನಡೆಯಲಿರುವುದು.


ಅಪರಾಹ್ನ ಸಮಾರೋಪ ಸಮಾರಂಭ ಜರುಗಲಿದ್ದು, ಮುಖ್ಯ ಅತಿಥಿಗಳಾಗಿ ಬಳಂಜ ಗ್ರಾ.ಪಂ. ಅಧ್ಯಕ್ಷ ಹೇಮಂತ್ ಕುಮಾರ್, ಪಡಂಗಡಿ ಗ್ರಾ.ಪಂ. ಸದಸ್ಯ ಸಂತೋಷ್ ಕುಮಾರ್ ಜೈನ್, ವಿದ್ವಾನ್ ಶಶಾಂಕ್ ಭಟ್ ನಾಲ್ಕೂರು ಕೋಡಿಮನೆ, ನಾಲ್ಕೂರು ಗುರುನಾರಾಯಣ ಸಂಘದ ಅಧ್ಯಕ್ಷ ಹೆಚ್.ಎಸ್. ಪ್ರವೀಣ್, ಬಳಂಜ ಗಣೇಶೋತ್ಸವ ಸಮಿತಿ ಅಧ್ಯಕ್ಷ ರಾಕೇಶ್ ಹೆಗ್ಡೆ ಭಾಗವಹಿಸಲಿದ್ದಾರೆ. ಮಧ್ಯಾಹ್ನ ಅನ್ನಸಂತರ್ಪಣೆ ನಡೆಯಲಿರುವುದು.

Related posts

ಬೆಳ್ತಂಗಡಿ ಸಿಎ ಬ್ಯಾಂಕ್ ಮಾಜಿ ಅಧ್ಯಕ್ಷ, ಕಾಂಗ್ರೆಸ್ ಮುಖಂಡ ಬಿ. ಪ್ರಮೋದ್ ಕುಮಾರ್ ನೂಜೋಡಿ ನಿಧನ

Suddi Udaya

ವಿದ್ಯಾರ್ಥಿ ಚಳವಳಿಯ ಮೇಲೆ ನಡೆದ ಪೈಶಾಚಿಕ ದಾಳಿ ಕೇಂದ್ರ ಸರ್ಕಾರದ ಸರ್ವಾಧಿಕಾರಿ ಆಡಳಿತಕ್ಕೆ ಸಾಕ್ಷಿ: ಶೇಖರ ಎಲ್

Suddi Udaya

ಪತ್ನಿಯಿಂದ ಪತಿಯ ಕೊಲೆ ಪ್ರಕರಣ: ಕೊಲೆ ಪ್ರಕರಣ ಸಾಬೀತಾದರೂ ಪತ್ನಿಗಿಲ್ಲ ಶಿಕ್ಷೆ

Suddi Udaya

ಧರ್ಮಸ್ಥಳ ಶ್ರೀ ಧ ಮ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಅಂತರಾಷ್ಟ್ರೀಯ ಯೋಗ ದಿನಾಚರಣೆ

Suddi Udaya

ಶ್ರೀ ಗುರುದೇವ ವಿವಿಧೋದ್ದೇಶ ಸಹಕಾರಿ ಸಂಘದ ವಾರ್ಷಿಕ ಮಹಾಸಭೆ : ಸಾಧಕರಿಗೆ ಸನ್ಮಾನ

Suddi Udaya

ಕುಕ್ಕೇಡಿ ಶ್ರೀ ಶಾರದಾಂಭ ಭಜನಾ ಮಂಡಳಿಯ ಪದಾಧಿಕಾರಿಗಳ ಆಯ್ಕೆ

Suddi Udaya
error: Content is protected !!