July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಮುಂಡಾಜೆ :ಯುವ ಸಾಹಿತಿ ಆಪ್ತಿ ಪಟವರ್ಧನ್ ರವರು ಬರೆದ ಜರ್ನಿ ಅಂಡರ್‌ದ ಸ್ಕೈ ಪುಸ್ತಕ ಬಿಡುಗಡೆ

ಬೆಳ್ತಂಗಡಿ: ಇಂದಿನ‌ ಯುವಕ-ಯುವತಿಯರಲ್ಲಿನ ಸಜ್ಜನಶೀಲತೆ ಹೊರಬರಲು ಹಿರಿಯರ ಆಶೀರ್ವಾದ ಅತ್ಯಗತ್ಯ. ಅಪ್ಪನನ್ನು ಮಗಳ ಕಣ್ಣಲ್ಲಿ ನೋಡುವ ಬಗೆ ಹೇಗೆ ಎಂಬುದನ್ನು ತಿಳಿಯಲು ಈ ಪುಸ್ತಕ ಓದಬೇಕು. ಎಂದು ಪತ್ರಕರ್ತ, ಅನುವಾದಕ ಹುಬ್ಬಳಿಯ ಅನಂತ ಹುದಂಗಜೆ ಹೇಳಿದರು.


ಅವರು ಜು.30 ರಂದು ಮುಂಡಾಜೆ ಸನ್ಯಾಸಿಕಟ್ಟೆ ಪರಶುರಾಮ ದೇವಸ್ಥಾನದಲ್ಲಿ ಯುವ ಸಾಹಿತಿ ಬೆಂಗಳೂರಿನ ಆಪ್ತಿ ಪಟವರ್ಧನ್ ಅವರು ಬರೆದ ಜರ್ನಿ ಅಂಡರ್‌ದ ಸ್ಕೈ ಎಂಬ ಪುಸ್ತಕವನ್ನು ಬಿಡುಗಡೆಗೊಳಿಸಿ ಮಾತನಾಡಿದರು.
ಮುಂಡಾಜೆಯ ವೇದಮೂರ್ತಿ ಶ್ರೀನಿಧಿ ಅಭ್ಯಂಕರ್ ಅವರು ಪವನ್ ಕಾಕತ್ಕರ್ ಅವರು ಸಂಕಲಿಸಿದ ನಿತ್ಯಪೂಜಾ ಪುಸ್ತಕವನ್ನು ಬಿಡುಗಡೆಗೊಳಿಸಿ, ವಿಚಾರಗಳನ್ನು ನಾವು ಜೀವನದಲ್ಲಿ ಅಳವಡಿಸಿಕೊಂಡಾಗ ಪುಸ್ತಕಕ್ಕೆ ಸಾರ್ಥಕತೆ ಬರುತ್ತದೆ. ಮೊಬೈಲ್ ಚಟವನ್ನು ಬದಿಗೊತ್ತಿ ಪುಸ್ತಕಗಳನ್ನು ಓದುವ ಹವ್ಯಾಸ ಬೆಳೆಸಿಕೊಳ್ಳೋಣ ಎಂದರು.
ಶಿವಮೊಗ್ಗದ ದೇವಿ ಉಪಾಸಕ ಸಿದ್ದಪ್ಪಾಜಿ‌ ದೊಡ್ಡಮ್ಮ, ಕಿಶೋರ ಪಟವರ್ಧನ್, ರಶ್ಮೀ ಪಟವರ್ಧನ್ ಉಪಸ್ಥಿತರಿದ್ದರು.


ಬೆರಗುಗೊಳಿಸಿದ ಅಷ್ಟಾವಧನ: ಪುಸ್ತಕಗಳ ಬಿಡುಗಡೆಯ ಮೊದಲು ಅವಧಾನಿ ಸೂರ್ಯ ಹೆಬ್ಬಾರ್ ಅವರಿಂದ ಅಷ್ಡಾವಧಾನ ನಡೆಯಿತು. ಶ್ರೀನಿಧಿ ಅಭ್ಯಂಕರ್ ನಿಷೇಧಾಕ್ಷರಿಯಾಗಿ, ಅಕ್ಷಯ ಮರಾಠೆ ಸಮಸ್ಯಾ ಪೂರ್ತಿಕಾರರಾಗಿ, ಅನಿರುದ್ದ ಕಾಕತ್ಕರ್ ದತ್ತಪದಿಯಾಗಿ, ಮಹೇಶ್ ಕಾಕತ್ಕರ್ ಉದ್ದಿಷ್ಟಾಕ್ಷರಿಯಾಗಿ, ದಿನಕರ ಗೋಖಲೆ ಅಪ್ರಸ್ತುತ ಪ್ರಸಂಗಕಾರರಾಗಿ, ಅನಂತ ತಾಮ್ಹನ್ಕರ್ ಆಶುಪದ್ಯಕಾರರಾಗಿ, ರಾಕೇಶ್ ಫಡ್ಕೆ ಕಾವ್ಯವಾಚಕರಾಗಿ, ಆಪ್ತಿ ಪಟವರ್ಧನ್ ಸಂಖ್ಯಾಬಂಧಕರಾಗಿದ್ದರು. ಸುಮಾರು ಮೂರುಗಂಟೆಗಳ ಕಾಲ ನಡೆದ ಜಾಣ್ಮೆಯ, ಕುಶಲತೆಯ ಅಷ್ಟಾವಧಾನವು ಶ್ರೋತೃಗಳ ಬೌದ್ಧಿಕ ವೃದ್ಧಿಗೆ ಕಾರಣವಾಯಿತು.


ವಕೀಲ ಶೈಲೇಶ್ ಠೋಸರ್ ಸ್ವಾಗತಿಸಿದರು. ನಾರಾಯಣ ಫಡ್ಕೆ ಕಾರ್ಯಕ್ರಮ ನಿರ್ವಹಿಸಿದರು.

Related posts

ಮಾ.29-ಎ.6: ಬಳ್ಳಮಂಜ ಮಹತೋಭಾರ ಶ್ರೀ ಅನಂತೇಶ್ವರ ಸ್ವಾಮಿ ದೇವಸ್ಥಾನದ ಅಷ್ಟಬಂಧ ಬ್ರಹ್ಮಕಲಶೋತ್ಸವ – ಪತ್ರಿಕಾಗೋಷ್ಠಿ

Suddi Udaya

ಗುರುವಾಯನಕೆರೆ ಶ್ರೀ ಅಯ್ಯಪ್ಪ ಸ್ವಾಮಿ ಭಜನಾ ಮಂಡಳಿ ಅಧ್ಯಕ್ಷರಾಗಿ ಸತ್ಯಪಾಲನ್ ನಾಯರ್, ಕಾರ್ಯದರ್ಶಿಯಾಗಿ ಮಾನ್ಯ ಆಯ್ಕೆ

Suddi Udaya

ಡಿ.3ರಂದು ಮಂಗಳೂರು ಮಹಾತ್ಮ ಗಾಂಧೀಜಿ ಮತ್ತು ಬ್ರಹ್ಮಶ್ರೀ ನಾರಾಯಣ ಗುರುಗಳ ವರ್ಕಳ ಸಂವಾದದ ಶತಮಾನೋತ್ಸವ ಕಾರ್ಯಕ್ರಮದ ಪೂರ್ವಭಾವಿ ಸಭೆ

Suddi Udaya

ಓಡಿಲ್ನಾಳ ಮೈರಲ್ಕೆ ಶ್ರೀ ಕಿರಾತಮೂರ್ತಿ ಮಹಾಲಿಂಗೇಶ್ವರ ದೇವಸ್ಥಾನದ ಶಾರದ ಪೂಜಾ ಉತ್ಸವ ಸಮಿತಿ ರಚನೆ: ಅಧ್ಯಕ್ಷರಾಗಿ ನಿತೇಶ್ ಕೆ. ಓಡಿಲ್ನಾಳ

Suddi Udaya

ಉಜಿರೆಯ ರವೀಂದ್ರ ನಾಯಕ್ ನಿಧನ

Suddi Udaya

ಕೊಕ್ಕಡ ಗ್ರಾಮ ಪಂಚಾಯತ್ ನ ಗ್ರಾಮ ಸಭೆ

Suddi Udaya
error: Content is protected !!