24 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿಬೆಳ್ತಂಗಡಿ

ಆ.15: ನಾಲ್ಕೂರು ಶ್ರೀ ಪಂಚಲಿಂಗೇಶ್ವರ ಭಜನಾ ಮಂಡಳಿಯಿಂದ ಸ್ವಾತಂತ್ರ್ಯೋತ್ಸವದ ಧ್ವಜಾರೋಹಣ ಕಾರ್ಯಕ್ರಮ ಹಾಗೂ ವಿವಿಧ ಆಟೋಟ ಸ್ಪರ್ಧೆಗಳು

ನಾಲ್ಕೂರು ಶ್ರೀ ಪಂಚಲಿಂಗೇಶ್ವರ ಭಜನಾ ಮಂಡಳಿ ವತಿಯಿಂದ ಸ್ವಾತಂತ್ರ್ಯೋತ್ಸವದ ಧ್ವಜಾರೋಹಣ ಕಾರ್ಯಕ್ರಮವು ಹಾಗೂ ವಿವಿಧ ಆಟೋಟ ಸ್ಪರ್ಧೆಗಳು ಆ.15ರಂದು ನಾಲ್ಕೂರು ಶ್ರೀ ಪಂಚಲಿಂಗೇಶ್ವರ ಭಜನಾ ಮಂಡಳಿ ವಠಾರದಲ್ಲಿ ಜರಗಲಿರುವುದು.


ನಾಲ್ಕೂರು ಹಾಲು ಉತ್ಪಾದಕರ ಸಹಕಾರಿ ಸಂಘದ ಅಧ್ಯಕ್ಷ ವಸಂತ ಶೆಟ್ಟಿ ಕಾರ್ಯಕ್ರಮ ಉದ್ಘಾಟಿಸಲಿದ್ದಾರೆ. ಬೆಳಿಗ್ಗೆ ನಾಲ್ಕೂರು ಬಳಂಜ ಗ್ರಾಮಗಳ ಗ್ರಾಮಸ್ಥರಿಗೆ ಆಟೋಟ ಸ್ಪರ್ಧೆಗಳ ನಡೆಯಲಿರುವುದು. ಪುರುಷರಿಗೆ: ಹಗ್ಗಜಗ್ಗಾಟ, ಗುಂಡೆಸೆತ, ಮಡಕೆ ಒಡೆಯುವುದು, ನಿಧಿ ಅನ್ವೇಷಣೆ, ತೆಂಗಿನಕಾಯಿಗೆ ಕಲ್ಲು ಎಸೆಯುವುದು, ವಾಲಿಬಾಲ್, ಮಹಿಳೆಯರಿಗೆ ಸಂಗೀತ ಕುರ್ಚಿ, ಮಡಕೆ ಒಡೆಯುವುದು, ಗುಂಡೆಸೆತ, ಹಗ್ಗಜಗ್ಗಾಟ, ತ್ರೋಬಾಲ್ ಹಾಗೂ ಮಕ್ಕಳಿಗೆ ವಿವಿಧ ಆಟೋಟ ಸ್ಪರ್ಧೆಗಳ ನಡೆಯಲಿರುವುದು.


ಅಪರಾಹ್ನ ಸಮಾರೋಪ ಸಮಾರಂಭ ಜರುಗಲಿದ್ದು, ಮುಖ್ಯ ಅತಿಥಿಗಳಾಗಿ ಬಳಂಜ ಗ್ರಾ.ಪಂ. ಅಧ್ಯಕ್ಷ ಹೇಮಂತ್ ಕುಮಾರ್, ಪಡಂಗಡಿ ಗ್ರಾ.ಪಂ. ಸದಸ್ಯ ಸಂತೋಷ್ ಕುಮಾರ್ ಜೈನ್, ವಿದ್ವಾನ್ ಶಶಾಂಕ್ ಭಟ್ ನಾಲ್ಕೂರು ಕೋಡಿಮನೆ, ನಾಲ್ಕೂರು ಗುರುನಾರಾಯಣ ಸಂಘದ ಅಧ್ಯಕ್ಷ ಹೆಚ್.ಎಸ್. ಪ್ರವೀಣ್, ಬಳಂಜ ಗಣೇಶೋತ್ಸವ ಸಮಿತಿ ಅಧ್ಯಕ್ಷ ರಾಕೇಶ್ ಹೆಗ್ಡೆ ಭಾಗವಹಿಸಲಿದ್ದಾರೆ. ಮಧ್ಯಾಹ್ನ ಅನ್ನಸಂತರ್ಪಣೆ ನಡೆಯಲಿರುವುದು.

Related posts

ಉಜಿರೆ ಎಸ್‌ಡಿಎಂ ಪಾಲಿಟೆಕ್ನಿಕ್ ನಲ್ಲಿ ಪೂಲ್ ಕ್ಯಾಂಪಸ್ ನೇಮಕಾತಿ

Suddi Udaya

ಮಚ್ಚಿನ ಪ್ರೌಢಶಾಲೆಗೆ ಕ್ರೀಡಾ ಸಾಮಾಗ್ರಿಗಳ ವಿತರಣೆ ಹಾಗೂ ಶಿಕ್ಷಕರ ದಿನಾಚರಣೆ ಪ್ರಯುಕ್ತ ಶಿಕ್ಷಕರಿಗೆ ವಿವಿಧ ಕ್ರೀಡಾಕೂಟಗಳು

Suddi Udaya

ಬೆನ್ನುಹುರಿ ಅಪಘಾತಕ್ಕೊಳಗಾದ ದಿವ್ಯಾಂಗರಿಗಾಗಿ 29ನೇ ವಸತಿಯುತ ಉಚಿತ ಆರೋಗ್ಯ ತಪಾಸಣೆ, ಜಾಗೃತಿ ಶಿಬಿರ ಹಾಗೂ ಗಾಲಿಕುರ್ಚಿ ಜಾಥಾ

Suddi Udaya

ಮೇಲಂತಬೆಟ್ಟು ಗ್ರಾ.ಪಂ. ವತಿಯಿಂದ ಅರ್ಹ ಫಲಾನುಭವಿಗಳಿಗೆ ಉಜ್ವಲ ಗ್ಯಾಸ್ ವಿತರಣೆ

Suddi Udaya

ರಾಜ್ಯ ಮಟ್ಟದ ಕರಾಟೆ ಸ್ಪರ್ಧೆ: ಪೆರಿಂಜೆ ಶ್ರೀ ಧ.ಮಂ.ಅ. ಪ್ರೌಢಶಾಲೆಗೆ ಸಮಗ್ರ ಪ್ರಶಸ್ತಿ

Suddi Udaya

ಎಸ್.ಡಿ.ಎಂ. ಮಹಿಳಾ ಕೈಗಾರಿಕಾ ತರಬೇತಿ ಸಂಸ್ಥೆಯಲ್ಲಿ ಶಿಶಿಕ್ಷು ತರಬೇತಿ ಮಾಹಿತಿ ಕಾರ್ಯಾಗಾರ

Suddi Udaya
error: Content is protected !!