ಬಳಂಜ: ಮರಿಯಾಲಡೊಂಜಿ ಐತಾರ ಕಾರ್ಯಕ್ರಮದ ಆಮಂತ್ರಣ ಪತ್ರಿಕೆ ಬಿಡುಗಡೆ: ಆ. 20 ಆಟಿಕೂಟದ ಗಮ್ಮತ್ ಲೇಸ್, ವಾರ್ಷಿಕ ಮಹಾಸಭೆ

Suddi Udaya

ಬಳಂಜ: ಬ್ರಹ್ಮಶ್ರೀ ನಾರಾಯಣ ಗುರು ಸೇವಾ ಸಮಿತಿ ಬಳಂಜ, ಯುವ ಬಿಲ್ಲವ ವೇದಿಕೆ ಮತ್ತು ಮಹಿಳಾ ಬಿಲ್ಲವ ವೇದಿಕೆ ಬಳಂಜ ನಾಲ್ಕೂರು ತೆಂಕಕಾರಂದೂರು ಇದರ ಆಶ್ರಯದಲ್ಲಿ ಆ. 20 ರಂದು ಆಟಿಕೂಟದ ‘ಮರಿಯಾಲಡೊಂಜಿ ಐತಾರ’ ಕಾರ್ಯಕ್ರಮವು ಭಾಗಿ ಮುಂಡಪ್ಪ ಪೂಜಾರಿ ಸಭಾ ವೇದಿಕೆಯಲ್ಲಿ ನಡೆಯಲಿದ್ದು ಇದರ ಆಮಂತ್ರಣ ಪತ್ರಿಕೆಯನ್ನು ಸಂಘದ ಮಹಿಳಾ ವೇದಿಕೆಯ ಮಾಜಿ ಅಧ್ಯಕ್ಷೆ ಅನಸೂಯರವರು ಬಿಡುಗಡೆಗೊಳಿಸಿ ಶುಭಕೋರಿದರು.

ಕಾರ್ಯಕ್ರಮದಲ್ಲಿ ಬ್ರಹ್ಮಶ್ರೀ ನಾರಾಯಣ ಗುರು ಸೇವಾ ಸಮಿತಿ ಅಧ್ಯಕ್ಷ ಪ್ರವೀಣ್ ಕುಮಾರ್ ಹೆಚ್.ಎಸ್, ಕಾರ್ಯದರ್ಶಿ ಸಂತೋಷ್ ಪಿ ಕೋಟ್ಯಾನ್ ಬಳಂಜ, ಆಡಳಿತ ಮಂಡಳಿ ಸದಸ್ಯರಾದ ದಿನೇಶ್ ಕೋಟ್ಯಾನ್ ಕುದ್ರೊಟ್ಟು, ಸುರೇಶ್ ಪೂಜಾರಿ ಜೈಮಾತಾ, ಯೋಗೀಶ್ ಯೈಕುರಿ, ರವೀಂದ್ರ ಬಿ ಅಮೀನ್, ಯೋಗೀಶ್ ಕೊಂಗುಳ, ಜಗದೀಶ್ ಬಳ್ಳಿದಡ್ಡ, ಪ್ರವೀಣ್ ಪೂಜಾರಿ ಲಾಂತ್ಯಾರು, ಸದಾನಂದ ಪೂಜಾರಿ ಬೊಂಟ್ರೊಟ್ಟು, ಯುವ ಬಿಲ್ಲವ ವೇದಿಕೆ ಅಧ್ಯಕ್ಷ ಪ್ರವೀಣ್ ಕೋಟ್ಯಾನ್ ದರ್ಖಾಸು,ಕಾರ್ಯದರ್ಶಿ ಶರತ್ ಅಂಚನ್ ಬಾಕ್ಯರಡ್ಡ, ಸದಸ್ಯ ರಂಜಿತ್ ಮಜಲಡ್ಡ, ಮಹಿಳಾ ಬಿಲ್ಲವ ವೇದಿಕೆ ಅಧ್ಯಕ್ಷೆ ಪುಷ್ಪಾ ಗೀರೀಶ್, ಕಾರ್ಯದರ್ಶಿ ಕಲಾವತಿ, ಮಾಜಿ ಅಧ್ಯಕ್ಷೆ ವಿಶಾಲಾಕ್ಷಿ,ಸದಸ್ಯರಾದ ಅನುಷಾ ಬೊಕ್ಕಸ, ಮಮತಾ ಖಂಡಿಗ, ಅಶ್ವಿತಾ ಕಡೆಂಗಾಲು ಉಪಸ್ಥಿತರಿದ್ದರು.

Leave a Comment

error: Content is protected !!