23.5 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬೆಳ್ತಂಗಡಿ: ಚಿತ್ಪಾವನ ಬ್ರಾಹ್ಮಣರ ಬಳಗದ ಮಹಾಸಭೆ

ಬೆಳ್ತಂಗಡಿ: ಚಿತ್ಪಾವನ ಬ್ರಾಹ್ಮಣರ ಬಳಗ, ಉಜಿರೆ-ಬೆಳ್ತಂಗಡಿ ಇದರ ವಿಶೇಷ ಮಹಾಸಭೆ ಲಾಯಿಲದ ಶ್ರೀ ಸುಬ್ರಹ್ಮಣ್ಯ ಸ್ಥಾನಿಕ ಸಭಾವನದಲ್ಲಿ ಆ.6 ರಂದು ನಡೆಯಿತು.
ಬಳಗದ ಅಧ್ಯಕ್ಷ ಯೋಗೀಶ್ ಆರ್.ಭಿಡೆ ಅವರ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಬೈಲಾವನ್ನು ಸ್ವೀಕರಿಸಿ, ಬಳಗವನ್ನು ರಾಜ್ಯದ ಸಂಘ- ಸಂಸ್ಥೆಗಳ ನೋಂದಾವಣೆ ಕಾನೂನಿನ ಪ್ರಕಾರ ನೋಂದಾವಣೆ ಮಾಡುವುದೆಂದು ತೀರ್ಮಾನಿಸಲಾಯಿತು.


ಬಳಗದ ವತಿಯಿಂದ ಆ.19 ರಂದು ಬೆಳ್ತಂಗಡಿಯ ಬಜಕ್ಕಿರೆ ಸಾಲು ಎಂಬಲ್ಲಿ ಔಷಧೀಯ ಸಸ್ಯಗಳ ಚಿತ್ಪಾವನದ ನಿರ್ಮಾಣದ ಶುಭಾರಂಭ ನಡೆಯಲಿದೆ. ಸೆ.10 ರಂದು ಉಜಿರೆ ಶ್ರೀ ಜನಾರ್ದನ ಸ್ವಾಮಿ ಸನ್ನಿಧಿಯಲ್ಲಿ ಶ್ರೀ ವಿಷ್ಣುಸಹಸ್ರನಾಮದ ಸಾಮೂಹಿಕ ಪಠಣ ನಡೆಯಲಿದೆ ಎಂದು ಸಭೆಯಲ್ಲಿ ತಿಳಿಸಲಾಯಿತು.


ವೇದಿಕೆಯಲ್ಲಿ ಬಳಗದ ಗೌರವಾಧ್ಯಕ್ಷ ಶಂಕರ ಪಟವರ್ಧನ್, ಉಪಾಧ್ಯಕ್ಷ ಗಿರೀಶ್ ಡೋಂಗ್ರೆ, ಜತೆ ಕಾರ್ಯದರ್ಶಿ ಗಂಗಾರಾಣಿ ಜೋಶಿ, ಖಜಾಂಜಿ ಶ್ರೀಕಾಂತ ಗೋರೆ ಇದ್ದರು.
ಬಳಗದ ಕಾನೂನು ಸಲಹೆಗಾರ ವಕೀಲ ಶೈಲೇಶ್ ಠೋಸರ್ ಬೈಲಾವನ್ನು ವಿವರಿಸಿದರು. ಕಾರ್ಯದರ್ಶಿ ಗಣೇಶ್ ಶೆಂಡ್ಯೆ ಸ್ವಾಗತಿಸಿ, ವಂದಿಸಿದರು.

Related posts

ಸಿ.ಎ. ಇಂಟರ್ ಮೀಡಿಯೆಟ್ ತರಬೇತಿ: ದೇಶಕ್ಕೆ 10ನೇ ರ್‍ಯಾಂಕ್ ಗಳಿಸಿದ ಬಜಿರೆಯ ದೀಪಕ್ ಹೆಗ್ಡೆ

Suddi Udaya

ಪೆರಿಯಶಾಂತಿಯಲ್ಲಿ ಸ್ಕಿಡ್ ಆಗಿ ಬಿದ್ದ ಬೈಕ್ : ಬೈಕ್ ಸವಾರನಿಗೆ ಗಾಯ: ಉಪ್ಪಿನಂಗಡಿ ಠಾಣೆಯಲ್ಲಿ ಪ್ರಕರಣ ದಾಖಲು

Suddi Udaya

ಇಂದಬೆಟ್ಟು ಗ್ರಾಮ ಪಂಚಾಯತ್ ನಲ್ಲಿ ಕಣ್ಣಿನ ಉಚಿತ ತಪಾಸಣಾ ಶಿಬಿರ

Suddi Udaya

ನಾವೂರು ಸ.ಹಿ.ಪ್ರಾ. ಶಾಲೆಯಲ್ಲಿ ಮಕ್ಕಳ ಗ್ರಾಮ ಸಭೆ

Suddi Udaya

ಪ್ರಧಾನ ಮಂತ್ರಿಯಾಗಿ ನರೇಂದ್ರ ಮೋದಿ ಪ್ರಮಾಣ ವಚನ: ಕನ್ಯಾಡಿಯ ಕೆ.ವಿ ಸ್ಟೋರ್ಸ್ ನಲ್ಲಿ ಸಿಹಿ ವಿತರಣೆ

Suddi Udaya

ಉಜಿರೆ: ಎಸ್.ಡಿ. ಎಮ್ ಆಂ.ಮಾ. ಶಾಲೆಯಲ್ಲಿ ದೀಪಾವಳಿಯ ಮಹತ್ವ ‘ಜ್ಞಾನ ಜ್ಯೋತಿ’ ಕಾರ್ಯಕ್ರಮ

Suddi Udaya
error: Content is protected !!