25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬೆಳ್ತಂಗಡಿ: ಚಿತ್ಪಾವನ ಬ್ರಾಹ್ಮಣರ ಬಳಗದ ಮಹಾಸಭೆ

ಬೆಳ್ತಂಗಡಿ: ಚಿತ್ಪಾವನ ಬ್ರಾಹ್ಮಣರ ಬಳಗ, ಉಜಿರೆ-ಬೆಳ್ತಂಗಡಿ ಇದರ ವಿಶೇಷ ಮಹಾಸಭೆ ಲಾಯಿಲದ ಶ್ರೀ ಸುಬ್ರಹ್ಮಣ್ಯ ಸ್ಥಾನಿಕ ಸಭಾವನದಲ್ಲಿ ಆ.6 ರಂದು ನಡೆಯಿತು.
ಬಳಗದ ಅಧ್ಯಕ್ಷ ಯೋಗೀಶ್ ಆರ್.ಭಿಡೆ ಅವರ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಬೈಲಾವನ್ನು ಸ್ವೀಕರಿಸಿ, ಬಳಗವನ್ನು ರಾಜ್ಯದ ಸಂಘ- ಸಂಸ್ಥೆಗಳ ನೋಂದಾವಣೆ ಕಾನೂನಿನ ಪ್ರಕಾರ ನೋಂದಾವಣೆ ಮಾಡುವುದೆಂದು ತೀರ್ಮಾನಿಸಲಾಯಿತು.


ಬಳಗದ ವತಿಯಿಂದ ಆ.19 ರಂದು ಬೆಳ್ತಂಗಡಿಯ ಬಜಕ್ಕಿರೆ ಸಾಲು ಎಂಬಲ್ಲಿ ಔಷಧೀಯ ಸಸ್ಯಗಳ ಚಿತ್ಪಾವನದ ನಿರ್ಮಾಣದ ಶುಭಾರಂಭ ನಡೆಯಲಿದೆ. ಸೆ.10 ರಂದು ಉಜಿರೆ ಶ್ರೀ ಜನಾರ್ದನ ಸ್ವಾಮಿ ಸನ್ನಿಧಿಯಲ್ಲಿ ಶ್ರೀ ವಿಷ್ಣುಸಹಸ್ರನಾಮದ ಸಾಮೂಹಿಕ ಪಠಣ ನಡೆಯಲಿದೆ ಎಂದು ಸಭೆಯಲ್ಲಿ ತಿಳಿಸಲಾಯಿತು.


ವೇದಿಕೆಯಲ್ಲಿ ಬಳಗದ ಗೌರವಾಧ್ಯಕ್ಷ ಶಂಕರ ಪಟವರ್ಧನ್, ಉಪಾಧ್ಯಕ್ಷ ಗಿರೀಶ್ ಡೋಂಗ್ರೆ, ಜತೆ ಕಾರ್ಯದರ್ಶಿ ಗಂಗಾರಾಣಿ ಜೋಶಿ, ಖಜಾಂಜಿ ಶ್ರೀಕಾಂತ ಗೋರೆ ಇದ್ದರು.
ಬಳಗದ ಕಾನೂನು ಸಲಹೆಗಾರ ವಕೀಲ ಶೈಲೇಶ್ ಠೋಸರ್ ಬೈಲಾವನ್ನು ವಿವರಿಸಿದರು. ಕಾರ್ಯದರ್ಶಿ ಗಣೇಶ್ ಶೆಂಡ್ಯೆ ಸ್ವಾಗತಿಸಿ, ವಂದಿಸಿದರು.

Related posts

ಪುತ್ತೂರಿನಲ್ಲಿ ನಡೆದ ಕಾಮರ್ಸ್ ಆಂಡ್ ಡಿಸೈನ್ ಫೆಸ್ಟ್: ಬೆಳ್ತಂಗಡಿ ಶ್ರೀ ಗುರುದೇವ ಪದವಿ ಕಾಲೇಜಿಗೆ ಪ್ರಶಸ್ತಿ

Suddi Udaya

ಬೆಳ್ತಂಗಡಿ : ಹಸಿರು ಕ್ರಾಂತಿಯ ಹರಿಕಾರ ಡಾ| ಬಾಬು ಜಗಜೀವನರಾಮ್ ರವರ 117ನೇ ಜನ್ಮ ದಿನಾಚರಣೆ

Suddi Udaya

ಕಣಿಯೂರು: ಟೀಂ ನವಕೇಸರಿ ಮಲೆಂಗಲ್ಲು ಮತ್ತು ಅರಣ್ಯ ಇಲಾಖೆ ವತಿಯಿಂದ ವನಮಹೋತ್ಸವ

Suddi Udaya

ಪದ್ಮುಂಜ ವಿ.ಹಿಂ.ಪ. ಘಟಕದ ವತಿಯಿಂದ ಪದ್ಮುಂಜ ಪ್ರಾಥಮಿಕ ಆರೋಗ್ಯ ಕೇಂದ್ರದ ಸುತ್ತ ಸ್ವಚ್ಛತಾ ಕಾರ್ಯ

Suddi Udaya

ಉಡುಪಿಯಲ್ಲಿ ಲಕ್ಷಕಂಠ ಗೀತಾ ಭಜನೋತ್ಸವಕ್ಕೆ ಬೆಳ್ತಂಗಡಿ ತಾಲ್ಲೂಕಿನ ಭಜನಾಪಟುಗಳು

Suddi Udaya

ಇಂದಬೆಟ್ಟು: ಸಂವಿಧಾನ ಜಾಗೃತಿ ಜಾಥ

Suddi Udaya
error: Content is protected !!