24 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬೆಳ್ತಂಗಡಿ: ಚಿತ್ಪಾವನ ಬ್ರಾಹ್ಮಣರ ಬಳಗದ ಮಹಾಸಭೆ

ಬೆಳ್ತಂಗಡಿ: ಚಿತ್ಪಾವನ ಬ್ರಾಹ್ಮಣರ ಬಳಗ, ಉಜಿರೆ-ಬೆಳ್ತಂಗಡಿ ಇದರ ವಿಶೇಷ ಮಹಾಸಭೆ ಲಾಯಿಲದ ಶ್ರೀ ಸುಬ್ರಹ್ಮಣ್ಯ ಸ್ಥಾನಿಕ ಸಭಾವನದಲ್ಲಿ ಆ.6 ರಂದು ನಡೆಯಿತು.
ಬಳಗದ ಅಧ್ಯಕ್ಷ ಯೋಗೀಶ್ ಆರ್.ಭಿಡೆ ಅವರ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಬೈಲಾವನ್ನು ಸ್ವೀಕರಿಸಿ, ಬಳಗವನ್ನು ರಾಜ್ಯದ ಸಂಘ- ಸಂಸ್ಥೆಗಳ ನೋಂದಾವಣೆ ಕಾನೂನಿನ ಪ್ರಕಾರ ನೋಂದಾವಣೆ ಮಾಡುವುದೆಂದು ತೀರ್ಮಾನಿಸಲಾಯಿತು.


ಬಳಗದ ವತಿಯಿಂದ ಆ.19 ರಂದು ಬೆಳ್ತಂಗಡಿಯ ಬಜಕ್ಕಿರೆ ಸಾಲು ಎಂಬಲ್ಲಿ ಔಷಧೀಯ ಸಸ್ಯಗಳ ಚಿತ್ಪಾವನದ ನಿರ್ಮಾಣದ ಶುಭಾರಂಭ ನಡೆಯಲಿದೆ. ಸೆ.10 ರಂದು ಉಜಿರೆ ಶ್ರೀ ಜನಾರ್ದನ ಸ್ವಾಮಿ ಸನ್ನಿಧಿಯಲ್ಲಿ ಶ್ರೀ ವಿಷ್ಣುಸಹಸ್ರನಾಮದ ಸಾಮೂಹಿಕ ಪಠಣ ನಡೆಯಲಿದೆ ಎಂದು ಸಭೆಯಲ್ಲಿ ತಿಳಿಸಲಾಯಿತು.


ವೇದಿಕೆಯಲ್ಲಿ ಬಳಗದ ಗೌರವಾಧ್ಯಕ್ಷ ಶಂಕರ ಪಟವರ್ಧನ್, ಉಪಾಧ್ಯಕ್ಷ ಗಿರೀಶ್ ಡೋಂಗ್ರೆ, ಜತೆ ಕಾರ್ಯದರ್ಶಿ ಗಂಗಾರಾಣಿ ಜೋಶಿ, ಖಜಾಂಜಿ ಶ್ರೀಕಾಂತ ಗೋರೆ ಇದ್ದರು.
ಬಳಗದ ಕಾನೂನು ಸಲಹೆಗಾರ ವಕೀಲ ಶೈಲೇಶ್ ಠೋಸರ್ ಬೈಲಾವನ್ನು ವಿವರಿಸಿದರು. ಕಾರ್ಯದರ್ಶಿ ಗಣೇಶ್ ಶೆಂಡ್ಯೆ ಸ್ವಾಗತಿಸಿ, ವಂದಿಸಿದರು.

Related posts

ಇಂದಬೆಟ್ಟು ಎಂಜೆಎಂ ಮಸೀದಿಯಲ್ಲಿ ಈದ್ ಆಚರಣೆ

Suddi Udaya

ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲೆಯಲ್ಲಿ ವಿಜ್ಞಾನ ದಿನಾಚರಣೆ

Suddi Udaya

ಹೆದ್ದಾರಿ ಕಾಮಗಾರಿಯನ್ನು ರಾತ್ರೋರಾತ್ರಿ ವೀಕ್ಷಿಸಿದ ಹರೀಶ್ ಪೂಂಜ

Suddi Udaya

ನೆರಿಯ: ಶ್ರೀ ಕ್ಷೇತ್ರ ಕುಡುಮಡ್ಕ ಶ್ರೀ ಅನ್ನಪೂರ್ಣೇಶ್ವರಿ ದೇವಸ್ಥಾನಕ್ಕೆ ಶಾಸಕ ಹರೀಶ್‌ ಪೂಂಜ ಭೇಟಿ

Suddi Udaya

ಕೊಕ್ಕಡ: ದುರಸ್ತಿ ಕಾಣದ ರಸ್ತೆ: ಸ್ವಂತ ಖರ್ಚಿನಲ್ಲಿ ರಸ್ತೆ ಸರಿಪಡಿಸಿದ ಆಟೋ ಚಾಲಕರು

Suddi Udaya

ಬಳಂಜ ಶಾಲಾ ವಿದ್ಯಾರ್ಥಿಗಳಿಗೆ ಸ್ಪೋಕನ್ ಇಂಗ್ಲಿಷ್ ತರಗತಿ ಉದ್ಘಾಟನೆ

Suddi Udaya
error: Content is protected !!