25.7 C
ಪುತ್ತೂರು, ಬೆಳ್ತಂಗಡಿ
May 17, 2025
ಗ್ರಾಮಾಂತರ ಸುದ್ದಿಚಿತ್ರ ವರದಿವರದಿ

ಉಜಿರೆ: ವಾಣಿಜ್ಯ ಮತ್ತು ಕೈಗಾರಿಕಾ ಸಂಘದ ಮಹತ್ವದ ಸಭೆ

ಉಜಿರೆ: ವಾಣಿಜ್ಯ ಮತ್ತು ಕೈಗಾರಿಕಾ ಸಂಘ ಉಜಿರೆ ಇದರ ಮಹತ್ವದ ಸಭೆಯು ಆ. 5 ರಂದು ಉಜಿರೆಯ ರಾಮಕೃಷ್ಣ ಸಭಾಮಂಟಪದಲ್ಲಿ ನಡೆಯಿತು.

ರಾಷ್ಟ್ರೀಯ ಹೆದ್ದಾರಿಯ ಕಾಮಗಾರಿ ನಡೆಯುತ್ತಿದ್ದು ಹೆದ್ದಾರಿಯ ಬದಿಯಲ್ಲಿ ಸರ್ವೀಸ್ ರೋಡ್ ನಿರ್ಮಿಸಿದಲ್ಲಿ ವ್ಯಾಪಾರವನ್ನೆ ನಂಬಿ ಜೀವಿಸುತ್ತಿರುವ ವರ್ತಕರ ಜೀವನ ಬೀದಿಗೆ ಬೀಳುವ ಸಾಧ್ಯತೆ ಇದೆ. ಆದ್ದರಿಂದ ರಸ್ತೆ ಅಗಲೀಕರಣ ಆಗಬೇಕಾದದ್ದೆ, ಅದಕ್ಕೆ ಉಜಿರೆ ವರ್ತಕರ ಸಹಕಾರ ಸದಾ ಇದೆ. ಆದರೆ ಸರ್ವೀಸ್ ರೋಡನ್ನು ಮಾಡದೇ ರಸ್ತೆ ಅಗಲೀಕರಣ ಮಾಡಿ ಎಂಬ ಮನವಿಯನ್ನು ಸಂಬಂಧಪಟ್ಟ ಇಲಾಖೆಗೆ ಸಲ್ಲಿಸುವುದೆಂದು ಸಭೆಯಲ್ಲಿ ತೀರ್ಮಾನಿಸಲಾಯಿತು ಎಂದು ಸಂಘಟಕರು ತಿಳಿಸಿದರು. ಸರಿಯಾದ ಪಾರ್ಕಿಂಗ್ ನಿರ್ಮಿಸಿಕೊಡಬೇಕಾಗಿಯು ಮನವಿ ನೀಡುವುದೆಂದು ತೀರ್ಮಾನಿಸಿದರು.

ಸೆಪ್ಟಂಬರ್ 10 ಉಜಿರೆ ವರ್ತಕರಿಗಾಗಿ ಸ್ಪೋಡ್ಸ್ ಡೇ ಆಯೋಜಿಸುವುದು ಸೆಪ್ಟಂಬರ್ 24 ಸಂಘದ ಮಹಾಸಭೆಯನ್ನು ನಡೆಸುವುದು ಮತ್ತು ಉಜಿರೆ ವರ್ತಕ ಸಂಘದ ನೂತನ ಸಮಿತಿಯನ್ನು ರಚನೆ ಮಾಡುವುದೆಂದು ಸಂಘ ತೀರ್ಮಾನಿಸಿತು ಎಂದರು.

ಸಭೆಯಲ್ಲಿ ಅಧ್ಯಕ್ಷರಾದ ಅರವಿಂದ್ ಕಾರಂತ್, ಕಾರ್ಯದರ್ಶಿಗಳಾದ ಪ್ರಸಾದ್ ಬಿ ಎಸ್ ,ವಿಶ್ವನಾಥ ಭಂಡಾರಿ ವಿಶ್ವ ದುರ್ಗ ಮೊಬೈಲ್ ಉಪಾಧ್ಯಕ್ಷರಾದ ದಿನೇಶ್ ದಿಶಾ, ಪ್ರವೀಣ್ ಹಳ್ಳಿಮನೆ, ಹುಕುಂ ರಾಮ್ ಶಾರದಾ ಹರೀಶ್ ಕುಮಾರ್ ಆಶಿಕ ಹಾಗೂ ಇನ್ನಿತರ ವರ್ತಕರು ಉಪಸ್ಥಿತರಿದ್ದರು.

Related posts

ಶಾಂತಿವನ ಟ್ರಸ್ಟ್ ಶ್ರೀ ಕ್ಷೇತ್ರ ಧರ್ಮಸ್ಥಳ, ಯೋಗ ಮತ್ತು ನೈತಿಕ ಶಿಕ್ಷಣ ಯೋಜನೆ ಆಶ್ರಯದಲ್ಲಿ, ನಡೆಯುವ ಯೋಗಾಸನ, ಪ್ರಾಣಾಯಾಮ ಧ್ಯಾನ ಶಿಬಿರದ ಪೂರ್ವಭಾವಿ ಸಭೆ

Suddi Udaya

ಕನ್ಯಾಡಿ II, ದ. ಕ. ಜಿ. ಪ ಸರಕಾರಿ ಉನ್ನತೀಕರಿಸಿದ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಪೋಷಕರ ಸಭೆ

Suddi Udaya

ಬೆಳ್ತಂಗಡಿ ಎಸ್ ಡಿ ಎಂ ಆಂ.ಮಾ. ಶಾಲೆಯಲ್ಲಿ ಮಹಾತ್ಮ ಗಾಂಧಿ ಹಾಗೂ ಲಾಲ್ ಬಹದ್ದೂರ್ ಶಾಸ್ತ್ರಿ ಜಯಂತಿ ಆಚರಣೆ

Suddi Udaya

ನಡ: ಮನೆಯ ಕೊಟ್ಟಿಗೆ ನುಗ್ಗಿದ ಬೃಹತ್ ಗಾತ್ರದ ಹೆಬ್ಬಾವು: ಸುರಕ್ಷಿತವಾಗಿ ಹಿಡಿದು ಕಾಡಿಗೆ ಬಿಟ್ಟ ಶೌರ್ಯ ವಿಪತ್ತು ನಿರ್ವಹಣಾ ಘಟಕದ ಪ್ರತಿನಿಧಿ ಮಂಜುನಾಥ್

Suddi Udaya

ಸಚಿವರಾಗಿ ಪ್ರಮಾಣವಚನ ಸ್ವೀಕರಿಸಿದ ರಾಜ್ಯದ ಸಂಸದರನ್ನು ಅಭಿನಂದಿಸಿದ ಶಾಸಕ ಹರೀಶ್ ಪೂಂಜ

Suddi Udaya

ಮಲವಂತಿಗೆ ಗ್ರಾ.ಪಂ. ನ ಪ್ರಥಮ ಸುತ್ತಿನ ಗ್ರಾಮ ಸಭೆ

Suddi Udaya
error: Content is protected !!