23.5 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿವರದಿ

ಉಜಿರೆ: ವಾಣಿಜ್ಯ ಮತ್ತು ಕೈಗಾರಿಕಾ ಸಂಘದ ಮಹತ್ವದ ಸಭೆ

ಉಜಿರೆ: ವಾಣಿಜ್ಯ ಮತ್ತು ಕೈಗಾರಿಕಾ ಸಂಘ ಉಜಿರೆ ಇದರ ಮಹತ್ವದ ಸಭೆಯು ಆ. 5 ರಂದು ಉಜಿರೆಯ ರಾಮಕೃಷ್ಣ ಸಭಾಮಂಟಪದಲ್ಲಿ ನಡೆಯಿತು.

ರಾಷ್ಟ್ರೀಯ ಹೆದ್ದಾರಿಯ ಕಾಮಗಾರಿ ನಡೆಯುತ್ತಿದ್ದು ಹೆದ್ದಾರಿಯ ಬದಿಯಲ್ಲಿ ಸರ್ವೀಸ್ ರೋಡ್ ನಿರ್ಮಿಸಿದಲ್ಲಿ ವ್ಯಾಪಾರವನ್ನೆ ನಂಬಿ ಜೀವಿಸುತ್ತಿರುವ ವರ್ತಕರ ಜೀವನ ಬೀದಿಗೆ ಬೀಳುವ ಸಾಧ್ಯತೆ ಇದೆ. ಆದ್ದರಿಂದ ರಸ್ತೆ ಅಗಲೀಕರಣ ಆಗಬೇಕಾದದ್ದೆ, ಅದಕ್ಕೆ ಉಜಿರೆ ವರ್ತಕರ ಸಹಕಾರ ಸದಾ ಇದೆ. ಆದರೆ ಸರ್ವೀಸ್ ರೋಡನ್ನು ಮಾಡದೇ ರಸ್ತೆ ಅಗಲೀಕರಣ ಮಾಡಿ ಎಂಬ ಮನವಿಯನ್ನು ಸಂಬಂಧಪಟ್ಟ ಇಲಾಖೆಗೆ ಸಲ್ಲಿಸುವುದೆಂದು ಸಭೆಯಲ್ಲಿ ತೀರ್ಮಾನಿಸಲಾಯಿತು ಎಂದು ಸಂಘಟಕರು ತಿಳಿಸಿದರು. ಸರಿಯಾದ ಪಾರ್ಕಿಂಗ್ ನಿರ್ಮಿಸಿಕೊಡಬೇಕಾಗಿಯು ಮನವಿ ನೀಡುವುದೆಂದು ತೀರ್ಮಾನಿಸಿದರು.

ಸೆಪ್ಟಂಬರ್ 10 ಉಜಿರೆ ವರ್ತಕರಿಗಾಗಿ ಸ್ಪೋಡ್ಸ್ ಡೇ ಆಯೋಜಿಸುವುದು ಸೆಪ್ಟಂಬರ್ 24 ಸಂಘದ ಮಹಾಸಭೆಯನ್ನು ನಡೆಸುವುದು ಮತ್ತು ಉಜಿರೆ ವರ್ತಕ ಸಂಘದ ನೂತನ ಸಮಿತಿಯನ್ನು ರಚನೆ ಮಾಡುವುದೆಂದು ಸಂಘ ತೀರ್ಮಾನಿಸಿತು ಎಂದರು.

ಸಭೆಯಲ್ಲಿ ಅಧ್ಯಕ್ಷರಾದ ಅರವಿಂದ್ ಕಾರಂತ್, ಕಾರ್ಯದರ್ಶಿಗಳಾದ ಪ್ರಸಾದ್ ಬಿ ಎಸ್ ,ವಿಶ್ವನಾಥ ಭಂಡಾರಿ ವಿಶ್ವ ದುರ್ಗ ಮೊಬೈಲ್ ಉಪಾಧ್ಯಕ್ಷರಾದ ದಿನೇಶ್ ದಿಶಾ, ಪ್ರವೀಣ್ ಹಳ್ಳಿಮನೆ, ಹುಕುಂ ರಾಮ್ ಶಾರದಾ ಹರೀಶ್ ಕುಮಾರ್ ಆಶಿಕ ಹಾಗೂ ಇನ್ನಿತರ ವರ್ತಕರು ಉಪಸ್ಥಿತರಿದ್ದರು.

Related posts

ಬೆಳ್ತಂಗಡಿ ವಿ.ಹಿಂ.ಪ ಬಜರಂಗದಳ ಪ್ರಖಂಡದ ವತಿಯಿಂದ ಬಕ್ರೀದ್ ಹಬ್ಬದ ಸಂದರ್ಭ ಗೋ ಹತ್ಯೆಯನ್ನು ಖಂಡಿಸಿ ಪೋಲಿಸ್ ಠಾಣೆ ಮತ್ತು ಗೋ ಆಸ್ಪತ್ರೆಯ ಅಧಿಕಾರಿಗಳಿಗೆ ಮನವಿ

Suddi Udaya

ಮುಗೇರಡ್ಕ ಮೂವರು ದೈವಗಳ ದೈವಸ್ಥಾನದ ವಾರ್ಷಿಕ ನೇಮೋತ್ಸವ

Suddi Udaya

ಬೆಳ್ತಂಗಡಿ: ವಿಶೇಷ ವಿಕಲಚೇತನರ ಗುರುತಿನ ಚೀಟಿ ನವೀಕರಣ ಮತ್ತು ಹೊಸ ಗುರುತಿಸುವಿಕೆಯ ಶಿಬಿರ

Suddi Udaya

ತೀರಾ ಹದಗೆಟ್ಟ ಪಡ್ಡಂದಡ್ಕ ರಸ್ತೆ: ಶಾಲಾ ಮಕ್ಕಳಿಂದ ದುರಸ್ತಿ ಕಾರ್ಯ

Suddi Udaya

ವಾಣಿ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲರಾಗಿ ವಿಷ್ಣುಪ್ರಕಾಶ್ ಅಧಿಕಾರ ಸ್ವೀಕಾರ

Suddi Udaya

ದೇವಿ ಭಗವತಿ ಅಮ್ಮನವರ ಬ್ರಹ್ಮಕಲಶೋತ್ಸವತಂತ್ರಿಗಳಿಗೆ ಪೂರ್ಣಕುಂಭದ ಸ್ವಾಗತ

Suddi Udaya
error: Content is protected !!