September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿವರದಿ

ಉಜಿರೆ: ವಾಣಿಜ್ಯ ಮತ್ತು ಕೈಗಾರಿಕಾ ಸಂಘದ ಮಹತ್ವದ ಸಭೆ

ಉಜಿರೆ: ವಾಣಿಜ್ಯ ಮತ್ತು ಕೈಗಾರಿಕಾ ಸಂಘ ಉಜಿರೆ ಇದರ ಮಹತ್ವದ ಸಭೆಯು ಆ. 5 ರಂದು ಉಜಿರೆಯ ರಾಮಕೃಷ್ಣ ಸಭಾಮಂಟಪದಲ್ಲಿ ನಡೆಯಿತು.

ರಾಷ್ಟ್ರೀಯ ಹೆದ್ದಾರಿಯ ಕಾಮಗಾರಿ ನಡೆಯುತ್ತಿದ್ದು ಹೆದ್ದಾರಿಯ ಬದಿಯಲ್ಲಿ ಸರ್ವೀಸ್ ರೋಡ್ ನಿರ್ಮಿಸಿದಲ್ಲಿ ವ್ಯಾಪಾರವನ್ನೆ ನಂಬಿ ಜೀವಿಸುತ್ತಿರುವ ವರ್ತಕರ ಜೀವನ ಬೀದಿಗೆ ಬೀಳುವ ಸಾಧ್ಯತೆ ಇದೆ. ಆದ್ದರಿಂದ ರಸ್ತೆ ಅಗಲೀಕರಣ ಆಗಬೇಕಾದದ್ದೆ, ಅದಕ್ಕೆ ಉಜಿರೆ ವರ್ತಕರ ಸಹಕಾರ ಸದಾ ಇದೆ. ಆದರೆ ಸರ್ವೀಸ್ ರೋಡನ್ನು ಮಾಡದೇ ರಸ್ತೆ ಅಗಲೀಕರಣ ಮಾಡಿ ಎಂಬ ಮನವಿಯನ್ನು ಸಂಬಂಧಪಟ್ಟ ಇಲಾಖೆಗೆ ಸಲ್ಲಿಸುವುದೆಂದು ಸಭೆಯಲ್ಲಿ ತೀರ್ಮಾನಿಸಲಾಯಿತು ಎಂದು ಸಂಘಟಕರು ತಿಳಿಸಿದರು. ಸರಿಯಾದ ಪಾರ್ಕಿಂಗ್ ನಿರ್ಮಿಸಿಕೊಡಬೇಕಾಗಿಯು ಮನವಿ ನೀಡುವುದೆಂದು ತೀರ್ಮಾನಿಸಿದರು.

ಸೆಪ್ಟಂಬರ್ 10 ಉಜಿರೆ ವರ್ತಕರಿಗಾಗಿ ಸ್ಪೋಡ್ಸ್ ಡೇ ಆಯೋಜಿಸುವುದು ಸೆಪ್ಟಂಬರ್ 24 ಸಂಘದ ಮಹಾಸಭೆಯನ್ನು ನಡೆಸುವುದು ಮತ್ತು ಉಜಿರೆ ವರ್ತಕ ಸಂಘದ ನೂತನ ಸಮಿತಿಯನ್ನು ರಚನೆ ಮಾಡುವುದೆಂದು ಸಂಘ ತೀರ್ಮಾನಿಸಿತು ಎಂದರು.

ಸಭೆಯಲ್ಲಿ ಅಧ್ಯಕ್ಷರಾದ ಅರವಿಂದ್ ಕಾರಂತ್, ಕಾರ್ಯದರ್ಶಿಗಳಾದ ಪ್ರಸಾದ್ ಬಿ ಎಸ್ ,ವಿಶ್ವನಾಥ ಭಂಡಾರಿ ವಿಶ್ವ ದುರ್ಗ ಮೊಬೈಲ್ ಉಪಾಧ್ಯಕ್ಷರಾದ ದಿನೇಶ್ ದಿಶಾ, ಪ್ರವೀಣ್ ಹಳ್ಳಿಮನೆ, ಹುಕುಂ ರಾಮ್ ಶಾರದಾ ಹರೀಶ್ ಕುಮಾರ್ ಆಶಿಕ ಹಾಗೂ ಇನ್ನಿತರ ವರ್ತಕರು ಉಪಸ್ಥಿತರಿದ್ದರು.

Related posts

ಕೊಕ್ರಾಡಿ ಸರಕಾರಿ ಪ.ಪೂ. ಕಾಲೇಜಿಗೆ ಶೇ. 98.50 ಫಲಿತಾಂಶ

Suddi Udaya

ನಡ ಸರಕಾರಿ ಪದವಿಪೂರ್ವ ಕಾಲೇಜಿನಲ್ಲಿ ಆಟಿಡೊಂಜಿ ಕೂಟ ಕಾರ್ಯಕ್ರಮ

Suddi Udaya

ನಾಲ್ಕೂರು: ಬೊಳ್ಳಾಜೆ ನಿವಾಸಿ ಸೀತು ನಿಧನ

Suddi Udaya

ವೇಣೂರು ಮಹಾಲಿಂಗೇಶ್ವರ ದೇವಸ್ಥಾನದ ಜಾತ್ರಾ ಮಹೋತ್ಸವಕ್ಕೆ ಚಾಲನೆ

Suddi Udaya

ಲಾಯಿಲ: ಪುತ್ರ ಬೈಲು ಗ್ರಂಥಾಲಯ ಕಟ್ಟಡಕ್ಕೆ ಶಿಲಾನ್ಯಾಸ

Suddi Udaya

ತೆಕ್ಕಾರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಸಾಧನೆಗೆ ಸತತ 6ನೇ ಬಾರಿ ಎಸ್.ಡಿ.ಸಿ.ಸಿ ಬ್ಯಾಂಕ್ ನಿಂದ ಪ್ರೋತ್ಸಾಹಕ ಪ್ರಶಸ್ತಿ

Suddi Udaya
error: Content is protected !!