23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿವರದಿ

ಉಜಿರೆ: ವಾಣಿಜ್ಯ ಮತ್ತು ಕೈಗಾರಿಕಾ ಸಂಘದ ಮಹತ್ವದ ಸಭೆ

ಉಜಿರೆ: ವಾಣಿಜ್ಯ ಮತ್ತು ಕೈಗಾರಿಕಾ ಸಂಘ ಉಜಿರೆ ಇದರ ಮಹತ್ವದ ಸಭೆಯು ಆ. 5 ರಂದು ಉಜಿರೆಯ ರಾಮಕೃಷ್ಣ ಸಭಾಮಂಟಪದಲ್ಲಿ ನಡೆಯಿತು.

ರಾಷ್ಟ್ರೀಯ ಹೆದ್ದಾರಿಯ ಕಾಮಗಾರಿ ನಡೆಯುತ್ತಿದ್ದು ಹೆದ್ದಾರಿಯ ಬದಿಯಲ್ಲಿ ಸರ್ವೀಸ್ ರೋಡ್ ನಿರ್ಮಿಸಿದಲ್ಲಿ ವ್ಯಾಪಾರವನ್ನೆ ನಂಬಿ ಜೀವಿಸುತ್ತಿರುವ ವರ್ತಕರ ಜೀವನ ಬೀದಿಗೆ ಬೀಳುವ ಸಾಧ್ಯತೆ ಇದೆ. ಆದ್ದರಿಂದ ರಸ್ತೆ ಅಗಲೀಕರಣ ಆಗಬೇಕಾದದ್ದೆ, ಅದಕ್ಕೆ ಉಜಿರೆ ವರ್ತಕರ ಸಹಕಾರ ಸದಾ ಇದೆ. ಆದರೆ ಸರ್ವೀಸ್ ರೋಡನ್ನು ಮಾಡದೇ ರಸ್ತೆ ಅಗಲೀಕರಣ ಮಾಡಿ ಎಂಬ ಮನವಿಯನ್ನು ಸಂಬಂಧಪಟ್ಟ ಇಲಾಖೆಗೆ ಸಲ್ಲಿಸುವುದೆಂದು ಸಭೆಯಲ್ಲಿ ತೀರ್ಮಾನಿಸಲಾಯಿತು ಎಂದು ಸಂಘಟಕರು ತಿಳಿಸಿದರು. ಸರಿಯಾದ ಪಾರ್ಕಿಂಗ್ ನಿರ್ಮಿಸಿಕೊಡಬೇಕಾಗಿಯು ಮನವಿ ನೀಡುವುದೆಂದು ತೀರ್ಮಾನಿಸಿದರು.

ಸೆಪ್ಟಂಬರ್ 10 ಉಜಿರೆ ವರ್ತಕರಿಗಾಗಿ ಸ್ಪೋಡ್ಸ್ ಡೇ ಆಯೋಜಿಸುವುದು ಸೆಪ್ಟಂಬರ್ 24 ಸಂಘದ ಮಹಾಸಭೆಯನ್ನು ನಡೆಸುವುದು ಮತ್ತು ಉಜಿರೆ ವರ್ತಕ ಸಂಘದ ನೂತನ ಸಮಿತಿಯನ್ನು ರಚನೆ ಮಾಡುವುದೆಂದು ಸಂಘ ತೀರ್ಮಾನಿಸಿತು ಎಂದರು.

ಸಭೆಯಲ್ಲಿ ಅಧ್ಯಕ್ಷರಾದ ಅರವಿಂದ್ ಕಾರಂತ್, ಕಾರ್ಯದರ್ಶಿಗಳಾದ ಪ್ರಸಾದ್ ಬಿ ಎಸ್ ,ವಿಶ್ವನಾಥ ಭಂಡಾರಿ ವಿಶ್ವ ದುರ್ಗ ಮೊಬೈಲ್ ಉಪಾಧ್ಯಕ್ಷರಾದ ದಿನೇಶ್ ದಿಶಾ, ಪ್ರವೀಣ್ ಹಳ್ಳಿಮನೆ, ಹುಕುಂ ರಾಮ್ ಶಾರದಾ ಹರೀಶ್ ಕುಮಾರ್ ಆಶಿಕ ಹಾಗೂ ಇನ್ನಿತರ ವರ್ತಕರು ಉಪಸ್ಥಿತರಿದ್ದರು.

Related posts

ಶ್ರೀ ಕ್ಷೇತ್ರ ಧರ್ಮಸ್ಥಳ ಲಕ್ಷದೀಪೋತ್ಸವದ ವಸ್ತುಪ್ರದರ್ಶನ ಮೇಳದಲ್ಲಿ ಮಾಂಡೋವಿ ಮೋಟಾರ್ಸ್ ಪ್ರೈ ಲಿ.ಸಂಸ್ಥೆ ಭಾಗಿ: ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ. ಡಿ. ವೀರೇಂದ್ರ ಹೆಗ್ಗಡೆಯವರಿಂದ ಪ್ರಥಮ‌ ಗ್ರಾಹಕರಿಗೆ ಕಾರು ಹಸ್ತಾಂತರ

Suddi Udaya

ವೇಣೂರು ಸ. ಪ.ಪೂ. ಕಾಲೇಜಿಗೆ ಹಳೆವಿದ್ಯಾರ್ಥಿಗಳಿಂದ ಹೊಸ ಪ್ರೊಜೆಕ್ಟರ್ ಕೊಡುಗೆ

Suddi Udaya

ತಾಲೂಕು ಪ್ರೌಢಶಾಲಾ ಕಬಡ್ಡಿ ಬೆಳಾಲು ಎಸ್ ಡಿ ಎಂ ಶಾಲಾ ತಂಡ ಪ್ರಥಮ

Suddi Udaya

ಕನ್ಯಾಡಿ || : ಹಿಂದೂ ಧಾರ್ಮಿಕ ಸೇವಾ ಸಮಿತಿ ವತಿಯಿಂದ ಸಾರ್ವಜನಿಕ ಶ್ರೀ ಗಣೇಶೋತ್ಸವದ ಸಮಿತಿ ರಚನೆ

Suddi Udaya

ಕೊಕ್ಕಡ : ಮಾಯಿಲಕೋಟೆ ದೇವಸ್ಥಾನದಲ್ಲಿ ಕಳ್ಳತನ: ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು

Suddi Udaya

ಸುಲ್ಕೇರಿಮೊಗ್ರು: ವರಮಹಾಲಕ್ಷ್ಮಿ ಪೂಜಾ ಸಮಿತಿಯ ನೂತನ ಪದಾಧಿಕಾರಿಗಳ ಆಯ್ಕೆ

Suddi Udaya
error: Content is protected !!