ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಅಳದಂಗಡಿ ಸ. ಪ್ರೌ. ಶಾಲೆಯ ಶಿಕ್ಷಕ ಜಗದೀಶ್ ಬಿ.ಎಸ್ ಹಾಗೂ ಗೌರವ ಶಿಕ್ಷಕಿ ಸಾಧನ ರವರಿಗೆ ಬೀಳ್ಕೊಡುಗೆ ಸಮಾರಂಭ

ಅಳದಂಗಡಿ ಸರಕಾರಿ ಪ್ರೌಡ ಶಾಲೆಯ ಶಿಕ್ಷಕ ಜಗದೀಶ್ ಬಿ.ಎಸ್ ಹಾಗೂ ಅತಿಥಿ ಶಿಕ್ಷಕಿ ಸಾಧನ ರವರಿಗೆ ಬೀಳ್ಕೊಡುಗೆ ಸಮಾರಂಭವು ಇತ್ತೀಚೆಗೆ ಶಾಲೆಯಲ್ಲಿ ನಡೆಯಿತು.

ಶಾಲೆಯಲ್ಲಿ ಸುಮಾರು 15 ವರ್ಷ ಚಿತ್ರಕಲಾ ಶಿಕ್ಷಕರಾಗಿ ಸೇವೆ ಸಲ್ಲಿಸಿ ಸಾವಿರಾರು ವಿದ್ಯಾರ್ಥಿಗಳಿಗೆ ಮಾರ್ಗದರ್ಶನ ನೀಡಿ ದಾರಿದೀಪವಾದ ಜಗದೀಶ್ ಬಿ.ಎಸ್ ರವರು ಇತ್ತೀಚೆಗೆ ನಡೆದ ಶಿಕ್ಷಕರ ವರ್ಗಾವಣೆಯಲ್ಲಿ ಅವರ ಹುಟ್ಟೂರು ಹಾಸನ ಜಿಲ್ಲೆಯ ಅರಕಲಗೂಡು ತಾಲೂಕಿನ ಹುಲಿಕಲ್ ಪ್ರೌಢ ಶಾಲೆಗೆ ವರ್ಗಾವಣೆ ಪಡೆದುಕೊಂಡಿರುತ್ತಾರೆ.


ಶಾಲೆಯಲ್ಲಿ ಸಮಾಜ ವಿಜ್ಞಾನ ವಿಷಯದ ಗೌರವ ಶಿಕ್ಷಕಿ ಶ್ರೀಮತಿ ಸಾಧನ ರವರು ವಿದ್ಯಾರ್ಥಿ ಗಳಿಗೆ ಪಾಠ ಬೋಧನೆಯ ಜೊತೆಗೆ ಸಹ ಪಠ್ಯ ಚಟುವಟಿಕೆಯ ಮಾರ್ಗದರ್ಶನ ನೀಡಿ ವಿದ್ಯಾರ್ಥಿಗಳ ಪಾಲಿನ ಅಚ್ಚು ಮೆಚ್ಚಿನ ಶಿಕ್ಷಕಿಯಾಗಿದ್ದಾರೆ.


ಶಿಕ್ಷಕರಿಗೆ ಶಾಲಾಭಿವೃದ್ಧಿ ಸಮಿತಿ, ಹಳೆ ವಿದ್ಯಾರ್ಥಿಗಳು, ಶಾಲಾ ಮುಖ್ಯೋಪಾಧ್ಯಯರು, ಶಿಕ್ಷಕರು, ವಿದ್ಯಾರ್ಥಿಗಳ ಸಮ್ಮುಖದಲ್ಲಿ, ರಮೇಶ್ ದೇವಾಡಿಗ ರವರ ಅಧ್ಯಕ್ಷತೆಯಲ್ಲಿ ಗೌರವ ಸನ್ಮಾನದೊಂದಿಗೆ ಬೀಳ್ಕೊಡುಗೆ ಸಮಾರಂಭವನ್ನು ಹಮ್ಮಿಕೊಳ್ಳಲಾಯಿತು.

ಹಲವಾರು ವಿದ್ಯಾರ್ಥಿಗಳು ಶಿಕ್ಷಕರ ಬಗ್ಗೆ ಮೆಚ್ಚುಗೆಯ ನುಡಿಗಳನ್ನಾಡಿ ನೆನಪಿನ ಕಾಣಿಕೆಗಳನ್ನು ನೀಡಿದರು. ಶಾಲೆಯಲ್ಲಿ ಸೇವೆ ಸಲ್ಲಿಸಿ ವರ್ಗಾವಣೆಯಾದ ಶಿಕ್ಷಕರು, ಇತರ ಶಾಲೆಗಳಿಂದ ಆಗಮಿಸಿದ ಚಿತ್ರಕಲಾ ಶಿಕ್ಷಕರು, ನಿವೃತ್ತ ಮುಖ್ಯ ಶಿಕ್ಷಕರು ಯಶೋಧರ ಸುವರ್ಣ, ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷರು ಮನೋಹರ್ ಮತ್ತು ದಕ್ಷಿಣ ಕನ್ನಡ ಜಿಲ್ಲಾ ಪ್ರೌಡ ಶಾಲಾ ಶಿಕ್ಷಕರ ಸಂಘದ ಜಿಲ್ಲಾ ಅಧ್ಯಕ್ಷ ಮಹಮ್ಮದ್ ರಿಯಾಜ್ ರವರು ವರ್ಗಾವಣೆಯಾದ ಶಿಕ್ಷಕರಿಗೆ ಶುಭ ಹಾರೈಸಿದರು.
ಶ್ರೀಮತಿ ಲಲಿತಾ ಹಾಗೂ ಜಗದೀಶ್ ರವರು ಸನ್ಮಾನ ಪತ್ರವನ್ನು ವಾಚಿಸಿದರು.

ಗಣಿತ ಶಿಕ್ಷಕಿ ಶ್ರೀಮತಿ ಪ್ರೇಮಲತಾ ಸಿಲ್ವಿಯ ಡಿಕೋಸ್ತ ರವರು ಕಾರ್ಯಕ್ರಮ ನಿರೂಪಿಸಿ, ಶಾಲಾ ಮುಖ್ಯೋಪಾಧ್ಯಾಯಿನಿ ಶ್ರೀಮತಿ ಶಾಂತಿ ಮರಿಯಾ ಸಾಲ್ದಾನ್ಹ ಸ್ವಾಗತಿಸಿ, ಹಿಂದಿ ಶಿಕ್ಷಕಿ ಶ್ರೀಮತಿ ಲಿಲ್ಲಿ ಮ್ಯಾಥ್ಯುರವರು ವಂದಿಸಿದರು.

Related posts

ಇಳಂತಿಲ ಗ್ರಾಮದ ಕುಡಿಯುವ ನೀರಿನ ಸಮಸ್ಯೆ ಪರಿಹರಿಸಲು ಅಧಿಕಾರಿಗಳಿಗೆ ಎಸ್‌ಡಿಪಿಐ ಮನವಿ

Suddi Udaya

ಮಚ್ಚಿನ ಬೂತ್ ಸಂಖ್ಯೆ 181, 182, 183ರ ಮತಗಟ್ಟೆಗೆ ಆರ್‌ಎಸ್‌ಎಸ್ ಮುಖಂಡ ಪ್ರಭಾಕರ್ ಭಟ್ ಕಲ್ಲಡ್ಕ ಭೇಟಿ

Suddi Udaya

ಕಡಿರುದ್ಯಾವರ: ಕಾನರ್ಪ ಪುರುಷರ ಬಳಗದ ವತಿಯಿಂದ ಪುರುಷರ ರಾಶಿ ಪೂಜೆ

Suddi Udaya

ಇಂದಬೆಟ್ಟು ಟೀಮ್ ದೇವನಾರಿ ವತಿಯಿಂದ ದೇವನಾರಿ ಸ.ಹಿ.ಪ್ರಾ. ಶಾಲೆಗೆ ಉಚಿತ ಪುಸ್ತಕ ವಿತರಣೆ

Suddi Udaya

ಶಿಶಿಲ: ಕೃಷಿಕ ಆನಂದ ಕೆದಿಲ್ಲಾಯ ನಿಧನ

Suddi Udaya

ಉಜಿರೆ: ಅಗತ್ಯ ದಾಖಲೆ ಹಾಗೂ ನಗದು ಇದ್ದ ಪರ್ಸ್ ಬಿದ್ದು ಕಳೆದುಹೋಗಿದೆ

Suddi Udaya
error: Content is protected !!