23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿಬೆಳ್ತಂಗಡಿ

ಆ.15: ನಾಲ್ಕೂರು ಶ್ರೀ ಪಂಚಲಿಂಗೇಶ್ವರ ಭಜನಾ ಮಂಡಳಿಯಿಂದ ಸ್ವಾತಂತ್ರ್ಯೋತ್ಸವದ ಧ್ವಜಾರೋಹಣ ಕಾರ್ಯಕ್ರಮ ಹಾಗೂ ವಿವಿಧ ಆಟೋಟ ಸ್ಪರ್ಧೆಗಳು

ನಾಲ್ಕೂರು ಶ್ರೀ ಪಂಚಲಿಂಗೇಶ್ವರ ಭಜನಾ ಮಂಡಳಿ ವತಿಯಿಂದ ಸ್ವಾತಂತ್ರ್ಯೋತ್ಸವದ ಧ್ವಜಾರೋಹಣ ಕಾರ್ಯಕ್ರಮವು ಹಾಗೂ ವಿವಿಧ ಆಟೋಟ ಸ್ಪರ್ಧೆಗಳು ಆ.15ರಂದು ನಾಲ್ಕೂರು ಶ್ರೀ ಪಂಚಲಿಂಗೇಶ್ವರ ಭಜನಾ ಮಂಡಳಿ ವಠಾರದಲ್ಲಿ ಜರಗಲಿರುವುದು.


ನಾಲ್ಕೂರು ಹಾಲು ಉತ್ಪಾದಕರ ಸಹಕಾರಿ ಸಂಘದ ಅಧ್ಯಕ್ಷ ವಸಂತ ಶೆಟ್ಟಿ ಕಾರ್ಯಕ್ರಮ ಉದ್ಘಾಟಿಸಲಿದ್ದಾರೆ. ಬೆಳಿಗ್ಗೆ ನಾಲ್ಕೂರು ಬಳಂಜ ಗ್ರಾಮಗಳ ಗ್ರಾಮಸ್ಥರಿಗೆ ಆಟೋಟ ಸ್ಪರ್ಧೆಗಳ ನಡೆಯಲಿರುವುದು. ಪುರುಷರಿಗೆ: ಹಗ್ಗಜಗ್ಗಾಟ, ಗುಂಡೆಸೆತ, ಮಡಕೆ ಒಡೆಯುವುದು, ನಿಧಿ ಅನ್ವೇಷಣೆ, ತೆಂಗಿನಕಾಯಿಗೆ ಕಲ್ಲು ಎಸೆಯುವುದು, ವಾಲಿಬಾಲ್, ಮಹಿಳೆಯರಿಗೆ ಸಂಗೀತ ಕುರ್ಚಿ, ಮಡಕೆ ಒಡೆಯುವುದು, ಗುಂಡೆಸೆತ, ಹಗ್ಗಜಗ್ಗಾಟ, ತ್ರೋಬಾಲ್ ಹಾಗೂ ಮಕ್ಕಳಿಗೆ ವಿವಿಧ ಆಟೋಟ ಸ್ಪರ್ಧೆಗಳ ನಡೆಯಲಿರುವುದು.


ಅಪರಾಹ್ನ ಸಮಾರೋಪ ಸಮಾರಂಭ ಜರುಗಲಿದ್ದು, ಮುಖ್ಯ ಅತಿಥಿಗಳಾಗಿ ಬಳಂಜ ಗ್ರಾ.ಪಂ. ಅಧ್ಯಕ್ಷ ಹೇಮಂತ್ ಕುಮಾರ್, ಪಡಂಗಡಿ ಗ್ರಾ.ಪಂ. ಸದಸ್ಯ ಸಂತೋಷ್ ಕುಮಾರ್ ಜೈನ್, ವಿದ್ವಾನ್ ಶಶಾಂಕ್ ಭಟ್ ನಾಲ್ಕೂರು ಕೋಡಿಮನೆ, ನಾಲ್ಕೂರು ಗುರುನಾರಾಯಣ ಸಂಘದ ಅಧ್ಯಕ್ಷ ಹೆಚ್.ಎಸ್. ಪ್ರವೀಣ್, ಬಳಂಜ ಗಣೇಶೋತ್ಸವ ಸಮಿತಿ ಅಧ್ಯಕ್ಷ ರಾಕೇಶ್ ಹೆಗ್ಡೆ ಭಾಗವಹಿಸಲಿದ್ದಾರೆ. ಮಧ್ಯಾಹ್ನ ಅನ್ನಸಂತರ್ಪಣೆ ನಡೆಯಲಿರುವುದು.

Related posts

ನ್ಯಾಯತರ್ಪು: ಮಾದಕ ವಸ್ತು ದಿನಾಚರಣೆ ಅಂಗವಾಗಿ ದುಶ್ಚಟ ಮುಕ್ತ ಸಮಾಜ ನಿರ್ಮಾಣದ ಮಾಹಿತಿ ಕಾರ್ಯಕ್ರಮ

Suddi Udaya

ಕಿಲ್ಲೂರು ದರ್ಖಾಸು ನಿವಾಸಿ ರಾಧಾಕೃಷ್ಣ ಆಚಾರ್ಯ ನೇಣು ಬಿಗಿದು ಆತ್ಮಹತ್ಯೆ

Suddi Udaya

ನಡ: ಶ್ರೀ ಶ್ರೀನಿವಾಸ ಕಲ್ಯಾಣೋತ್ಸವ, ವೈಭವೋಪೇತ ಶೋಭಾಯಾತ್ರೆ , ಧಾರ್ಮಿಕ ಸಭೆ

Suddi Udaya

ನಾಳೆ(ಜು.6): ಬೆಳ್ತಂಗಡಿ ತಾಲೂಕು ಪತ್ರಕರ್ತರ ಸಂಘದ ವತಿಯಿಂದ ಪತ್ರಿಕಾ ದಿನಾಚರಣೆ : ಎಸ್.ಎಸ್.ಎಲ್.ಸಿ ಸಾಧಕರಿಗೆ ಸನ್ಮಾನ: ದಿತಿ ಸಾಂತ್ವನ ನಿಧಿ ವಿತರಣೆ

Suddi Udaya

ಉಜಿರೆ : ಮಂಜುನಾಥೇಶ್ವರ ಶಿಕ್ಷಕರ ತರಬೇತಿ ಸಂಸ್ಥೆಯಲ್ಲಿ ಕಾರ್ಗಿಲ್ ವಿಜಯ ದಿವಸ್ ಆಚರಣೆ

Suddi Udaya

ಸಂಬೋಳ್ಯ ಮೃತ ಬಾಲಕ ಸುಮಂತ್ ಮನೆಗೆ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ ಭೇಟಿ

Suddi Udaya
error: Content is protected !!