22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿಬೆಳ್ತಂಗಡಿ

ಆ.15: ನಾಲ್ಕೂರು ಶ್ರೀ ಪಂಚಲಿಂಗೇಶ್ವರ ಭಜನಾ ಮಂಡಳಿಯಿಂದ ಸ್ವಾತಂತ್ರ್ಯೋತ್ಸವದ ಧ್ವಜಾರೋಹಣ ಕಾರ್ಯಕ್ರಮ ಹಾಗೂ ವಿವಿಧ ಆಟೋಟ ಸ್ಪರ್ಧೆಗಳು

ನಾಲ್ಕೂರು ಶ್ರೀ ಪಂಚಲಿಂಗೇಶ್ವರ ಭಜನಾ ಮಂಡಳಿ ವತಿಯಿಂದ ಸ್ವಾತಂತ್ರ್ಯೋತ್ಸವದ ಧ್ವಜಾರೋಹಣ ಕಾರ್ಯಕ್ರಮವು ಹಾಗೂ ವಿವಿಧ ಆಟೋಟ ಸ್ಪರ್ಧೆಗಳು ಆ.15ರಂದು ನಾಲ್ಕೂರು ಶ್ರೀ ಪಂಚಲಿಂಗೇಶ್ವರ ಭಜನಾ ಮಂಡಳಿ ವಠಾರದಲ್ಲಿ ಜರಗಲಿರುವುದು.


ನಾಲ್ಕೂರು ಹಾಲು ಉತ್ಪಾದಕರ ಸಹಕಾರಿ ಸಂಘದ ಅಧ್ಯಕ್ಷ ವಸಂತ ಶೆಟ್ಟಿ ಕಾರ್ಯಕ್ರಮ ಉದ್ಘಾಟಿಸಲಿದ್ದಾರೆ. ಬೆಳಿಗ್ಗೆ ನಾಲ್ಕೂರು ಬಳಂಜ ಗ್ರಾಮಗಳ ಗ್ರಾಮಸ್ಥರಿಗೆ ಆಟೋಟ ಸ್ಪರ್ಧೆಗಳ ನಡೆಯಲಿರುವುದು. ಪುರುಷರಿಗೆ: ಹಗ್ಗಜಗ್ಗಾಟ, ಗುಂಡೆಸೆತ, ಮಡಕೆ ಒಡೆಯುವುದು, ನಿಧಿ ಅನ್ವೇಷಣೆ, ತೆಂಗಿನಕಾಯಿಗೆ ಕಲ್ಲು ಎಸೆಯುವುದು, ವಾಲಿಬಾಲ್, ಮಹಿಳೆಯರಿಗೆ ಸಂಗೀತ ಕುರ್ಚಿ, ಮಡಕೆ ಒಡೆಯುವುದು, ಗುಂಡೆಸೆತ, ಹಗ್ಗಜಗ್ಗಾಟ, ತ್ರೋಬಾಲ್ ಹಾಗೂ ಮಕ್ಕಳಿಗೆ ವಿವಿಧ ಆಟೋಟ ಸ್ಪರ್ಧೆಗಳ ನಡೆಯಲಿರುವುದು.


ಅಪರಾಹ್ನ ಸಮಾರೋಪ ಸಮಾರಂಭ ಜರುಗಲಿದ್ದು, ಮುಖ್ಯ ಅತಿಥಿಗಳಾಗಿ ಬಳಂಜ ಗ್ರಾ.ಪಂ. ಅಧ್ಯಕ್ಷ ಹೇಮಂತ್ ಕುಮಾರ್, ಪಡಂಗಡಿ ಗ್ರಾ.ಪಂ. ಸದಸ್ಯ ಸಂತೋಷ್ ಕುಮಾರ್ ಜೈನ್, ವಿದ್ವಾನ್ ಶಶಾಂಕ್ ಭಟ್ ನಾಲ್ಕೂರು ಕೋಡಿಮನೆ, ನಾಲ್ಕೂರು ಗುರುನಾರಾಯಣ ಸಂಘದ ಅಧ್ಯಕ್ಷ ಹೆಚ್.ಎಸ್. ಪ್ರವೀಣ್, ಬಳಂಜ ಗಣೇಶೋತ್ಸವ ಸಮಿತಿ ಅಧ್ಯಕ್ಷ ರಾಕೇಶ್ ಹೆಗ್ಡೆ ಭಾಗವಹಿಸಲಿದ್ದಾರೆ. ಮಧ್ಯಾಹ್ನ ಅನ್ನಸಂತರ್ಪಣೆ ನಡೆಯಲಿರುವುದು.

Related posts

ವೇಣೂರು ಐಟಿಐಯಲ್ಲಿ ವಾರ್ಷಿಕ ಕ್ರೀಡೋತ್ಸವ

Suddi Udaya

ನೆರಿಯ ಬಾಂಜಾರುವಿನಲ್ಲಿ “ಉಚಿತ ಆರೋಗ್ಯ ತಪಾಸಣಾ ಮತ್ತು ಚಿಕಿತ್ಸಾ ಶಿಬಿರ”

Suddi Udaya

ಮಚ್ಚಿನದಲ್ಲಿ ಪಿಕಪ್ ಹಾಗೂ ದ್ವಿಚಕ್ರ ವಾಹನದ ನಡುವೆ ಭೀಕರ ಅಪಘಾತ ದ್ವಿಚಕ್ರ ಸವಾರರಿಬ್ಬರು ಮೃತ್ಯು

Suddi Udaya

ಪರೀಕ ಶ್ರೀ ಧ.ಮಂ. ಯೋಗ ಮತ್ತು ಪ್ರಕೃತಿ ಚಿಕಿತ್ಸಾ ಆಸ್ಪತ್ರೆ ಸೌಖ್ಯವನದಲ್ಲಿ ಸಂಭ್ರಮದ ಸ್ವಾತಂತ್ರ್ಯ ದಿನಾಚರಣೆ

Suddi Udaya

ಕನಾ೯ಟಕ ದಲಿತ ಚಳುವಳಿಗೆ 50ರ ಸಂಭ್ರಮ: ಬೆಳ್ತಂಗಡಿಯಲ್ಲಿ ವಿವಿಧ ದಲಿತ ಸಂಘಟನೆಗಳ ಸಹಭಾಗಿತ್ವದಲ್ಲಿ ‘ಕನಾ೯ಟಕ ದಲಿತ ಚಳುವಳಿ 50ರ ಸಂಭ್ರಮ ಸಮಾವೇಶಕ್ಕೆ ಚಾಲನೆ; ದಲಿತ ಸಾಂಸ್ಕೃತಿಕ ವೈವಿಧ್ಯ ಕಾಯ೯ಕ್ರಮ

Suddi Udaya

ಕಳೆಂಜ ಗ್ರಾ.ಪಂ. ನಲ್ಲಿ ಕಸ್ತೂರಿ ರಂಗನ್ ವರದಿ ವಿರೋಧಿಸಿ ಪ್ರತಿಭಟನೆ: ಸರಕಾರಕ್ಕೆ ಮನವಿ

Suddi Udaya
error: Content is protected !!