September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿಬೆಳ್ತಂಗಡಿ

ಆ.15: ನಾಲ್ಕೂರು ಶ್ರೀ ಪಂಚಲಿಂಗೇಶ್ವರ ಭಜನಾ ಮಂಡಳಿಯಿಂದ ಸ್ವಾತಂತ್ರ್ಯೋತ್ಸವದ ಧ್ವಜಾರೋಹಣ ಕಾರ್ಯಕ್ರಮ ಹಾಗೂ ವಿವಿಧ ಆಟೋಟ ಸ್ಪರ್ಧೆಗಳು

ನಾಲ್ಕೂರು ಶ್ರೀ ಪಂಚಲಿಂಗೇಶ್ವರ ಭಜನಾ ಮಂಡಳಿ ವತಿಯಿಂದ ಸ್ವಾತಂತ್ರ್ಯೋತ್ಸವದ ಧ್ವಜಾರೋಹಣ ಕಾರ್ಯಕ್ರಮವು ಹಾಗೂ ವಿವಿಧ ಆಟೋಟ ಸ್ಪರ್ಧೆಗಳು ಆ.15ರಂದು ನಾಲ್ಕೂರು ಶ್ರೀ ಪಂಚಲಿಂಗೇಶ್ವರ ಭಜನಾ ಮಂಡಳಿ ವಠಾರದಲ್ಲಿ ಜರಗಲಿರುವುದು.


ನಾಲ್ಕೂರು ಹಾಲು ಉತ್ಪಾದಕರ ಸಹಕಾರಿ ಸಂಘದ ಅಧ್ಯಕ್ಷ ವಸಂತ ಶೆಟ್ಟಿ ಕಾರ್ಯಕ್ರಮ ಉದ್ಘಾಟಿಸಲಿದ್ದಾರೆ. ಬೆಳಿಗ್ಗೆ ನಾಲ್ಕೂರು ಬಳಂಜ ಗ್ರಾಮಗಳ ಗ್ರಾಮಸ್ಥರಿಗೆ ಆಟೋಟ ಸ್ಪರ್ಧೆಗಳ ನಡೆಯಲಿರುವುದು. ಪುರುಷರಿಗೆ: ಹಗ್ಗಜಗ್ಗಾಟ, ಗುಂಡೆಸೆತ, ಮಡಕೆ ಒಡೆಯುವುದು, ನಿಧಿ ಅನ್ವೇಷಣೆ, ತೆಂಗಿನಕಾಯಿಗೆ ಕಲ್ಲು ಎಸೆಯುವುದು, ವಾಲಿಬಾಲ್, ಮಹಿಳೆಯರಿಗೆ ಸಂಗೀತ ಕುರ್ಚಿ, ಮಡಕೆ ಒಡೆಯುವುದು, ಗುಂಡೆಸೆತ, ಹಗ್ಗಜಗ್ಗಾಟ, ತ್ರೋಬಾಲ್ ಹಾಗೂ ಮಕ್ಕಳಿಗೆ ವಿವಿಧ ಆಟೋಟ ಸ್ಪರ್ಧೆಗಳ ನಡೆಯಲಿರುವುದು.


ಅಪರಾಹ್ನ ಸಮಾರೋಪ ಸಮಾರಂಭ ಜರುಗಲಿದ್ದು, ಮುಖ್ಯ ಅತಿಥಿಗಳಾಗಿ ಬಳಂಜ ಗ್ರಾ.ಪಂ. ಅಧ್ಯಕ್ಷ ಹೇಮಂತ್ ಕುಮಾರ್, ಪಡಂಗಡಿ ಗ್ರಾ.ಪಂ. ಸದಸ್ಯ ಸಂತೋಷ್ ಕುಮಾರ್ ಜೈನ್, ವಿದ್ವಾನ್ ಶಶಾಂಕ್ ಭಟ್ ನಾಲ್ಕೂರು ಕೋಡಿಮನೆ, ನಾಲ್ಕೂರು ಗುರುನಾರಾಯಣ ಸಂಘದ ಅಧ್ಯಕ್ಷ ಹೆಚ್.ಎಸ್. ಪ್ರವೀಣ್, ಬಳಂಜ ಗಣೇಶೋತ್ಸವ ಸಮಿತಿ ಅಧ್ಯಕ್ಷ ರಾಕೇಶ್ ಹೆಗ್ಡೆ ಭಾಗವಹಿಸಲಿದ್ದಾರೆ. ಮಧ್ಯಾಹ್ನ ಅನ್ನಸಂತರ್ಪಣೆ ನಡೆಯಲಿರುವುದು.

Related posts

ಅಖಿಲ ಭಾರತ ಬ್ಯಾರಿ ಪರಿಷತ್ ಮಹಿಳಾ ಘಟಕದ ವತಿಯಿಂದ ಮರ್ಹೂಮ್ ಮುಹಮ್ಮದ್ ಕುಂಜತ್ತಬೈಲು ರವರಿಗೆ ನುಡಿನಮನ.

Suddi Udaya

ಮುಂಡಾಜೆ ಶೀಟ್ ಬಳಿ ಮಿನಿ ಬಸ್ಸಿಗೆ ಲಾರಿ ಡಿಕ್ಕಿ : ಬಸ್ ಚಾಲಕನ ಸಮಯ ಪ್ರಜ್ಞೆಯಿಂದ ತಪ್ಪಿದ ದುರಂತ

Suddi Udaya

ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ- ಬೆಳ್ತಂಗಡಿ ತಾಲೂಕು ಮೂಲ್ಯರ ಯಾನೆ ಕುಂಬಾರರ ಸೇವಾ ಸಂಘ ಸಂಯುಕ್ತ ಆಶ್ರಯದಲ್ಲಿ ತಾಲೂಕು ಮಟ್ಟದಲ್ಲಿ ‘ತ್ರಿಪದಿ ಬ್ರಹ್ಮ, ಸಂತ ಕವಿ ಸವ೯ಜ್ಞ’ ಜಯಂತಿ ಆಚರಣೆ

Suddi Udaya

ಧರ್ಮಸ್ಥಳದ ಅಸ್ತಿತ್ವಕ್ಕೆ ಕೊಡಲಿಯೇಟು ನೀಡಲು ಮುಂದಾದವರ ಬಗ್ಗೆ ಮಾತನಾಡಿದ ಬಿ.ಎಲ್ ಸಂತೋಷ್ ವಿರುದ್ದ ನಗರ ನಕ್ಸಲರಿಂದ ಅವಹೇಳನ ಮಾತು ಸಮಾಜದ ತೇಜೋವಧೆ ಮಾಡುವ ಶಕ್ತಿಗಳನ್ನು ರಾಜ್ಯ ಸರ್ಕಾರ ಮಟ್ಟ ಹಾಕಬೇಕು ಪತ್ರಿಕಾಗೋಷ್ಠಿಯಲ್ಲಿ ಶಾಸಕ ಹರೀಶ್ ಪೂಂಜ ಆಗ್ರಹ

Suddi Udaya

ಉಜಿರೆ : ಎಸ್. ಡಿ. ಎಂ. ಪದವಿ ಪೂರ್ವ ಕಾಲೇಜಿನಲ್ಲಿ ರೋವರ್ಸ್ ರೇಂಜರ್ಸ್ ವಿದ್ಯಾರ್ಥಿಗಳಿಗೆ ಒಂದು ದಿನದ ಪುನಶ್ಚೇತನ ಶಿಬಿರ

Suddi Udaya

ಕರ್ನಾಟಕ ರಾಜ್ಯ ಗ್ರಾಮೀಣ ಜೀವನೋಪಾಯ ಅಭಿಯಾನ ಮುಖ್ಯ ಕಾರ್ಯಾಚರಣಾ ಅಧಿಕಾರಿ ಉಜಿರೆ ರುಡ್ ಸೆಟ್ ಸಂಸ್ಥೆಗೆ ಭೇಟಿ

Suddi Udaya
error: Content is protected !!