27.9 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಮುಂಡಾಜೆ :ಯುವ ಸಾಹಿತಿ ಆಪ್ತಿ ಪಟವರ್ಧನ್ ರವರು ಬರೆದ ಜರ್ನಿ ಅಂಡರ್‌ದ ಸ್ಕೈ ಪುಸ್ತಕ ಬಿಡುಗಡೆ

ಬೆಳ್ತಂಗಡಿ: ಇಂದಿನ‌ ಯುವಕ-ಯುವತಿಯರಲ್ಲಿನ ಸಜ್ಜನಶೀಲತೆ ಹೊರಬರಲು ಹಿರಿಯರ ಆಶೀರ್ವಾದ ಅತ್ಯಗತ್ಯ. ಅಪ್ಪನನ್ನು ಮಗಳ ಕಣ್ಣಲ್ಲಿ ನೋಡುವ ಬಗೆ ಹೇಗೆ ಎಂಬುದನ್ನು ತಿಳಿಯಲು ಈ ಪುಸ್ತಕ ಓದಬೇಕು. ಎಂದು ಪತ್ರಕರ್ತ, ಅನುವಾದಕ ಹುಬ್ಬಳಿಯ ಅನಂತ ಹುದಂಗಜೆ ಹೇಳಿದರು.


ಅವರು ಜು.30 ರಂದು ಮುಂಡಾಜೆ ಸನ್ಯಾಸಿಕಟ್ಟೆ ಪರಶುರಾಮ ದೇವಸ್ಥಾನದಲ್ಲಿ ಯುವ ಸಾಹಿತಿ ಬೆಂಗಳೂರಿನ ಆಪ್ತಿ ಪಟವರ್ಧನ್ ಅವರು ಬರೆದ ಜರ್ನಿ ಅಂಡರ್‌ದ ಸ್ಕೈ ಎಂಬ ಪುಸ್ತಕವನ್ನು ಬಿಡುಗಡೆಗೊಳಿಸಿ ಮಾತನಾಡಿದರು.
ಮುಂಡಾಜೆಯ ವೇದಮೂರ್ತಿ ಶ್ರೀನಿಧಿ ಅಭ್ಯಂಕರ್ ಅವರು ಪವನ್ ಕಾಕತ್ಕರ್ ಅವರು ಸಂಕಲಿಸಿದ ನಿತ್ಯಪೂಜಾ ಪುಸ್ತಕವನ್ನು ಬಿಡುಗಡೆಗೊಳಿಸಿ, ವಿಚಾರಗಳನ್ನು ನಾವು ಜೀವನದಲ್ಲಿ ಅಳವಡಿಸಿಕೊಂಡಾಗ ಪುಸ್ತಕಕ್ಕೆ ಸಾರ್ಥಕತೆ ಬರುತ್ತದೆ. ಮೊಬೈಲ್ ಚಟವನ್ನು ಬದಿಗೊತ್ತಿ ಪುಸ್ತಕಗಳನ್ನು ಓದುವ ಹವ್ಯಾಸ ಬೆಳೆಸಿಕೊಳ್ಳೋಣ ಎಂದರು.
ಶಿವಮೊಗ್ಗದ ದೇವಿ ಉಪಾಸಕ ಸಿದ್ದಪ್ಪಾಜಿ‌ ದೊಡ್ಡಮ್ಮ, ಕಿಶೋರ ಪಟವರ್ಧನ್, ರಶ್ಮೀ ಪಟವರ್ಧನ್ ಉಪಸ್ಥಿತರಿದ್ದರು.


ಬೆರಗುಗೊಳಿಸಿದ ಅಷ್ಟಾವಧನ: ಪುಸ್ತಕಗಳ ಬಿಡುಗಡೆಯ ಮೊದಲು ಅವಧಾನಿ ಸೂರ್ಯ ಹೆಬ್ಬಾರ್ ಅವರಿಂದ ಅಷ್ಡಾವಧಾನ ನಡೆಯಿತು. ಶ್ರೀನಿಧಿ ಅಭ್ಯಂಕರ್ ನಿಷೇಧಾಕ್ಷರಿಯಾಗಿ, ಅಕ್ಷಯ ಮರಾಠೆ ಸಮಸ್ಯಾ ಪೂರ್ತಿಕಾರರಾಗಿ, ಅನಿರುದ್ದ ಕಾಕತ್ಕರ್ ದತ್ತಪದಿಯಾಗಿ, ಮಹೇಶ್ ಕಾಕತ್ಕರ್ ಉದ್ದಿಷ್ಟಾಕ್ಷರಿಯಾಗಿ, ದಿನಕರ ಗೋಖಲೆ ಅಪ್ರಸ್ತುತ ಪ್ರಸಂಗಕಾರರಾಗಿ, ಅನಂತ ತಾಮ್ಹನ್ಕರ್ ಆಶುಪದ್ಯಕಾರರಾಗಿ, ರಾಕೇಶ್ ಫಡ್ಕೆ ಕಾವ್ಯವಾಚಕರಾಗಿ, ಆಪ್ತಿ ಪಟವರ್ಧನ್ ಸಂಖ್ಯಾಬಂಧಕರಾಗಿದ್ದರು. ಸುಮಾರು ಮೂರುಗಂಟೆಗಳ ಕಾಲ ನಡೆದ ಜಾಣ್ಮೆಯ, ಕುಶಲತೆಯ ಅಷ್ಟಾವಧಾನವು ಶ್ರೋತೃಗಳ ಬೌದ್ಧಿಕ ವೃದ್ಧಿಗೆ ಕಾರಣವಾಯಿತು.


ವಕೀಲ ಶೈಲೇಶ್ ಠೋಸರ್ ಸ್ವಾಗತಿಸಿದರು. ನಾರಾಯಣ ಫಡ್ಕೆ ಕಾರ್ಯಕ್ರಮ ನಿರ್ವಹಿಸಿದರು.

Related posts

ದ.ಕ. ಜಿಲ್ಲೆಯಲ್ಲಿ ವ್ಯಾಪಕ ಮಳೆ ಹಿನ್ನಲೆ: ಜು.25: ಎಲ್ಲಾ ಅಂಗನವಾಡಿ, ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ

Suddi Udaya

ಕಸಾಪ ಸಮ್ಮೇಳನ; ಸರ್ವಾಧ್ಯಕ್ಷ ಪ್ರೊ.ಎ ಕೃಷ್ಣಪ್ಪ ಪೂಜಾರಿ ಅವರಿಗೆ ಅಧಿಕೃತ ಆಮಂತ್ರಣ

Suddi Udaya

ಉಜಿರೆ: ಶ್ರೀ ಧ.ಮಂ. ಪ.ಪೂ. ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆಯ ವಾರ್ಷಿಕ ಚಟುವಟಿಕೆಗಳ ಉದ್ಘಾಟನೆ

Suddi Udaya

ಮನೋಜ್ ಕಟ್ಟೆಮಾರ್‌ರವರ ಹುಟ್ಟುಹಬ್ಬದ ಪ್ರಯುಕ್ತ ತಾಲೂಕು ಆಸ್ಪತ್ರೆಯ ಬಡ ರೋಗಿಗಳಿಗೆ ಹಣ್ಣು ಹಂಪಲು ವಿತರಣೆ

Suddi Udaya

ಬೆಳ್ತಂಗಡಿ ತಾಲೂಕು ಆಡಳಿತ ಸೌಧದಲ್ಲಿ ಗಣರಾಜ್ಯೋತ್ಸವ ಆಚರಣೆ

Suddi Udaya

ಡಾ. ಡಿ. ವೀರೇಂದ್ರ ಹೆಗ್ಗಡೆಯವರ ಜನ್ಮ ದಿನದ ಸಂಭ್ರಮಾಚರಣೆ: ಉಜಿರೆ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪದವಿ ಪೂರ್ವ ಕಾಲೇಜಿನಲ್ಲಿ ವಿದ್ಯಾರ್ಥಿ ವೇತನ ವಿತರಣೆ ಹಾಗೂ ಸಾಧಕ ವಿದ್ಯಾರ್ಥಿಗಳಿಗೆ ಸನ್ಮಾನ

Suddi Udaya
error: Content is protected !!