July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಮುಂಡಾಜೆ :ಯುವ ಸಾಹಿತಿ ಆಪ್ತಿ ಪಟವರ್ಧನ್ ರವರು ಬರೆದ ಜರ್ನಿ ಅಂಡರ್‌ದ ಸ್ಕೈ ಪುಸ್ತಕ ಬಿಡುಗಡೆ

ಬೆಳ್ತಂಗಡಿ: ಇಂದಿನ‌ ಯುವಕ-ಯುವತಿಯರಲ್ಲಿನ ಸಜ್ಜನಶೀಲತೆ ಹೊರಬರಲು ಹಿರಿಯರ ಆಶೀರ್ವಾದ ಅತ್ಯಗತ್ಯ. ಅಪ್ಪನನ್ನು ಮಗಳ ಕಣ್ಣಲ್ಲಿ ನೋಡುವ ಬಗೆ ಹೇಗೆ ಎಂಬುದನ್ನು ತಿಳಿಯಲು ಈ ಪುಸ್ತಕ ಓದಬೇಕು. ಎಂದು ಪತ್ರಕರ್ತ, ಅನುವಾದಕ ಹುಬ್ಬಳಿಯ ಅನಂತ ಹುದಂಗಜೆ ಹೇಳಿದರು.


ಅವರು ಜು.30 ರಂದು ಮುಂಡಾಜೆ ಸನ್ಯಾಸಿಕಟ್ಟೆ ಪರಶುರಾಮ ದೇವಸ್ಥಾನದಲ್ಲಿ ಯುವ ಸಾಹಿತಿ ಬೆಂಗಳೂರಿನ ಆಪ್ತಿ ಪಟವರ್ಧನ್ ಅವರು ಬರೆದ ಜರ್ನಿ ಅಂಡರ್‌ದ ಸ್ಕೈ ಎಂಬ ಪುಸ್ತಕವನ್ನು ಬಿಡುಗಡೆಗೊಳಿಸಿ ಮಾತನಾಡಿದರು.
ಮುಂಡಾಜೆಯ ವೇದಮೂರ್ತಿ ಶ್ರೀನಿಧಿ ಅಭ್ಯಂಕರ್ ಅವರು ಪವನ್ ಕಾಕತ್ಕರ್ ಅವರು ಸಂಕಲಿಸಿದ ನಿತ್ಯಪೂಜಾ ಪುಸ್ತಕವನ್ನು ಬಿಡುಗಡೆಗೊಳಿಸಿ, ವಿಚಾರಗಳನ್ನು ನಾವು ಜೀವನದಲ್ಲಿ ಅಳವಡಿಸಿಕೊಂಡಾಗ ಪುಸ್ತಕಕ್ಕೆ ಸಾರ್ಥಕತೆ ಬರುತ್ತದೆ. ಮೊಬೈಲ್ ಚಟವನ್ನು ಬದಿಗೊತ್ತಿ ಪುಸ್ತಕಗಳನ್ನು ಓದುವ ಹವ್ಯಾಸ ಬೆಳೆಸಿಕೊಳ್ಳೋಣ ಎಂದರು.
ಶಿವಮೊಗ್ಗದ ದೇವಿ ಉಪಾಸಕ ಸಿದ್ದಪ್ಪಾಜಿ‌ ದೊಡ್ಡಮ್ಮ, ಕಿಶೋರ ಪಟವರ್ಧನ್, ರಶ್ಮೀ ಪಟವರ್ಧನ್ ಉಪಸ್ಥಿತರಿದ್ದರು.


ಬೆರಗುಗೊಳಿಸಿದ ಅಷ್ಟಾವಧನ: ಪುಸ್ತಕಗಳ ಬಿಡುಗಡೆಯ ಮೊದಲು ಅವಧಾನಿ ಸೂರ್ಯ ಹೆಬ್ಬಾರ್ ಅವರಿಂದ ಅಷ್ಡಾವಧಾನ ನಡೆಯಿತು. ಶ್ರೀನಿಧಿ ಅಭ್ಯಂಕರ್ ನಿಷೇಧಾಕ್ಷರಿಯಾಗಿ, ಅಕ್ಷಯ ಮರಾಠೆ ಸಮಸ್ಯಾ ಪೂರ್ತಿಕಾರರಾಗಿ, ಅನಿರುದ್ದ ಕಾಕತ್ಕರ್ ದತ್ತಪದಿಯಾಗಿ, ಮಹೇಶ್ ಕಾಕತ್ಕರ್ ಉದ್ದಿಷ್ಟಾಕ್ಷರಿಯಾಗಿ, ದಿನಕರ ಗೋಖಲೆ ಅಪ್ರಸ್ತುತ ಪ್ರಸಂಗಕಾರರಾಗಿ, ಅನಂತ ತಾಮ್ಹನ್ಕರ್ ಆಶುಪದ್ಯಕಾರರಾಗಿ, ರಾಕೇಶ್ ಫಡ್ಕೆ ಕಾವ್ಯವಾಚಕರಾಗಿ, ಆಪ್ತಿ ಪಟವರ್ಧನ್ ಸಂಖ್ಯಾಬಂಧಕರಾಗಿದ್ದರು. ಸುಮಾರು ಮೂರುಗಂಟೆಗಳ ಕಾಲ ನಡೆದ ಜಾಣ್ಮೆಯ, ಕುಶಲತೆಯ ಅಷ್ಟಾವಧಾನವು ಶ್ರೋತೃಗಳ ಬೌದ್ಧಿಕ ವೃದ್ಧಿಗೆ ಕಾರಣವಾಯಿತು.


ವಕೀಲ ಶೈಲೇಶ್ ಠೋಸರ್ ಸ್ವಾಗತಿಸಿದರು. ನಾರಾಯಣ ಫಡ್ಕೆ ಕಾರ್ಯಕ್ರಮ ನಿರ್ವಹಿಸಿದರು.

Related posts

ಭೀಕರ ಮಳೆಗೆ ರೆಖ್ಯ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ ಹಿಂಬದಿಯ ಗುಡ್ಡ ಕುಸಿತ: ಗರ್ಭಗುಡಿ , ಸುತ್ತು ಪೌಳಿಗೆ ಹಾನಿ

Suddi Udaya

ಗುರಿಪಳ್ಳ ಸಮೀಪದ ಬಂಡ್ರತ್ತಿಲ್ ಬಳಿ ಟವರ್ ಮೇಲೆ ಬಿದ್ದ ಮರ ಸ್ಕೂಟರ್ ನಲ್ಲಿ ಹೋಗುತ್ತಿದ್ದ ವ್ಯಕ್ತಿಗೆ ಗಾಯ

Suddi Udaya

ಬೆಳ್ತಂಗಡಿ ತಾಲೂಕು ಆದಿದ್ರಾವಿಡ ಸಮಾಜ ಸೇವಾ ಸಂಘದ ವತಿಯಿಂದ ದಿ| ಶಿವಾನಂದ ಬಳ್ಳಾಲ್‌ಬಾಗ್ ರವರಿಗೆ ನುಡಿನಮನ

Suddi Udaya

ಉಜಿರೆ: ಮಗ ಆತ್ಮಹತ್ಯೆ ಮಾಡಿಕೊಂಡ 13 ದಿನಕ್ಕೆ ತಂದೆ ಕೂಡ ನೇಣುಬಿಗಿದು ಆತ್ಮಹತ್ಯೆ

Suddi Udaya

ಬೆಳ್ತಂಗಡಿ : ಎಸ್.ಡಿ.ಪಿ.ಐ ಪಕ್ಷ ಸಮಾವೇಶ

Suddi Udaya

ಕಾಜೂರು ದರ್ಗಾಕ್ಕೆ ಭೇಟಿ ನೀಡಿದ ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಆರ್.

Suddi Udaya
error: Content is protected !!