25.5 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಕೊಕ್ಕಡ “ಅಮೃತ” ಗ್ರಾಮ ಪಂಚಾಯತ್ ವಿವಿಧ ಕಾಮಗಾರಿಗಳ ಉದ್ಘಾಟನೆ

ಕೊಕ್ಕಡ: ಕೊಕ್ಕಡ “ಅಮೃತ” ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ವಿವಿಧ ಕಾಮಗಾರಿಗಳ ಉದ್ಘಾಟನೆಯು ಆ.9ರಂದು ಜರುಗಿತು.

ಕೆಂಗುಡೇಲು ಎಂಬಲ್ಲಿ ನೂತನವಾಗಿ ನಿರ್ಮಿಸಿದ ಬಸ್‍ಸ್ಟಾಂಡ್‍ನ್ನು ಕೊಕ್ಕಡ ಸಹಕಾರಿ ಸಂಘದ ಅಧ್ಯಕ್ಷರಾದ ಕುಶಾಲಪ್ಪ ಗೌಡ ಪೂವಾಜೆ ಉದ್ಘಾಟಿಸಿ, ಶುಭಹಾರೈಸಿದರು.

ಪಂಚಾಯತ್ ಉಪಾಧ್ಯಕ್ಷೆ ಪವಿತ್ರಾ ಗುರುಪ್ರಸಾದ್ ಸ್ವಾಗತಿಸಿ, ಕಾರ್ಯಕ್ರಮ ನಿರೂಪಿಸಿದರು. ವಿಠಲ ಕುರ್ಲೆ ಧನ್ಯವಾದವಿತ್ತರು.

ಉಪ್ಪಾರಪಳಿಕೆ ಹಿ.ಪ್ರಾ.ಶಾಲೆಯಲ್ಲಿ ಗ್ರಾ.ಪಂ ಅನುದಾನದಲ್ಲಿ ನಿರ್ಮಿಸಿದ ಹುಡುಗಿಯರ ಶೌಚಾಲಯವನ್ನು ಪಂಚಾಯತ್ ಉಪಾಧ್ಯಕ್ಷೆ ಪವಿತ್ರಾ ಗುರುಪ್ರಸಾದ್ ಉದ್ಘಾಟಿಸಿ, ಶುಭಹಾರೈಸಿದರು. ಶಿಕ್ಷಕಿ ಸರಸ್ವತಿ ಸ್ವಾಗತಿಸಿ, ಧನ್ಯವಾದವಿತ್ತರು. ಶಿಕ್ಷಕ ದಾಮೋದರ ಅಜ್ಜಾವರ ಕಾರ್ಯಕ್ರಮ ನಿರೂಪಿಸಿದರು.

ಪುದ್ಯಂಗ ಎಂಬಲ್ಲಿ ನಿರ್ಮಿಸಿದ ಬಸ್‍ಸ್ಟ್ಯಾಂಡ್‍ನ್ನು ಗ್ರಾ.ಪಂ ಅಧ್ಯಕ್ಷ ಯೋಗೀಶ ಆಲಂಬಿಲ ಉದ್ಘಾಟಿಸಿ , ಶುಭಹಾರೈಸಿದರು. ವಿಠಲ ಕುರ್ಲೆ ಸ್ವಾಗತಿಸಿ, ಕಾರ್ಯಕ್ರಮ ನಿರೂಪಿಸಿದರು. ಶ್ರೀನಾಥ್ ಬಡಕಾೈಲು ವಂದಿಸಿದರು.

ಹಳ್ಳಿಂಗೇರಿ ಎಂಬಲ್ಲಿ ನಿರ್ಮಿಸಿದ ಬಸ್‍ಸ್ಟ್ಯಾಂಡ್‍ನ್ನು ನಿವೃತ್ತ ಸೈನಿಕ ಪದ್ಮಯ ಗೌಡ ತಿಪ್ಪೆಮಜಲು ಉದ್ಘಾಟಿಸಿದರು. ಸದಸ್ಯ ಜಗದೀಶ ಕೆಂಪಕೋಡಿ ಸ್ವಾಗತಿಸಿ, ಸದಸ್ಯ ವಿಶ್ವನಾಥ ಕಕ್ಕುದೋಳಿ ಧನ್ಯವಾದವಿತ್ತರು. ಉಪಾಧ್ಯಕ್ಷೆ ಪವಿತ್ರಾ ಗುರುಪ್ರಸಾದ್ ಕಾರ್ಯಕ್ರಮ ನಿರೂಪಿಸಿದರು.

ಈ ಸಂದರ್ಭದಲ್ಲಿ ಕೊಕ್ಕಡ ಗ್ರಾ.ಪಂ ವ್ಯಾಪ್ತಿಯಲ್ಲಿ ಎರಡೂವರೆ ವರ್ಷದಲ್ಲಿ ನಡೆಸಿರುವ ವಿವಿಧ ಕಾಮಗಾರಿಗಳ ವಿವರಗಳನ್ನೊಳಗೊಂಡ ಪತ್ರಿಕೆಯನ್ನು ಕೊಕ್ಕಡ ಸಹಕಾರಿ ಸಂಘದ ಅಧ್ಯಕ್ಷ ಕುಶಾಲಪ್ಪ ಗೌಡ ಪೂವಾಜೆ ಬಿಡುಗಡೆಗೊಳಿಸಿದರು. ಗ್ರಾ.ಪಂ ಸದಸ್ಯರಾದ ಪ್ರಭಾಕರ ಗೌಡ ಮಲ್ಲಿಗೆಮಜಲು, ವಿಶ್ವನಾಥ ಕಕ್ಕುದೋಳಿ, ಜಗದೀಶ ಕೆಂಪಕೋಡಿ, ಶ್ರೀಮತಿ ಬೇಬಿ, ಕಾರ್ಯದರ್ಶಿ ಭಾರತಿ, ಬೂತ್ ಸಮಿತಿ ಅಧ್ಯಕ್ಷ ಶ್ರೀನಾಥ ಬಡಕಾೈಲು, ಕಾರ್ಯದರ್ಶಿಗಳಾದ ವಿಠಲ ಕುರ್ಲೆ, ಶ್ರೀಮತಿ ಅಶ್ವಿನಿ ಉಪಸ್ಥಿತರಿದ್ದರು.

Related posts

ಬೆಳ್ತಂಗಡಿ ತಾಲೂಕು ಮಹಿಳಾ ಮಂಡಲಗಳ ಒಕ್ಕೂಟದಿಂದ ಆಟಿಡೊಂಜಿ ದಿನ

Suddi Udaya

ಮಾಜಿ ಶಾಸಕ ಕೆ. ವಸಂತ ಬಂಗೇರರ 79ನೇ ಹುಟ್ಟು ಹಬ್ಬದ ಆಚರಣೆ, ಬೃಹತ್ ರಕ್ತದಾನ ಶಿಬಿರ ಹಾಗೂ ಶ್ರೀ ಗುರುದೇವ ಕಾಲೇಜಿನ ವಿದ್ಯಾರ್ಥಿಗಳ ಶಿಕ್ಷಣಕ್ಕೆ ಆರ್ಥಿಕ ನೆರವು ನೀಡುವಲ್ಲಿ ಸಹಕರಿಸಿದ ದಾನಿಗಳಿಗೆ ಅಭಿನಂದನೆ

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಅರಣ್ಯ ಮತ್ತು ಪರಿಸರ ಸಚಿವ ಈಶ್ವರ ಖಂಡ್ರೆ ಭೇಟಿ, ದೇವರ ದರ್ಶನ

Suddi Udaya

ಮತ್ತೂರು ಶ್ರೀ ಪಂಚಲಿಂಗೇಶ್ವರ ದೇವಸ್ಥಾನದ ನಾಗ ಬನದಲ್ಲಿ ದೇವರಿಗೆ ನಾಗತಂಬಿಲ ಹಾಗೂ ವಿಶೇಷ ಪೂಜೆ

Suddi Udaya

ಹಿರಿಯ ಹಿಮ್ಮೇಳ ವಾದಕ ಧರ್ಮಸ್ಥಳದ ಸೀತಾರಾಮ ತೋಳ್ಪಾಡಿತ್ತಾಯರಿಗೆ ಕುರಿಯ ವಿಠಲ ಶಾಸ್ತ್ರಿ ನೆನಪಿನ ‘ಕುರಿಯ ಪ್ರಶಸ್ತಿ’ ಪ್ರದಾನ

Suddi Udaya

ಸೂಳಬೆಟ್ಟು ಶ್ರೀ ಗೋಪಾಲಕೃಷ್ಣ ಕುಣಿತ ಭಜನಾ ಮಂಡಳಿ ವತಿಯಿಂದ ನೃತ್ಯ ಭಜನೋತ್ಸವ

Suddi Udaya
error: Content is protected !!