23.7 C
ಪುತ್ತೂರು, ಬೆಳ್ತಂಗಡಿ
April 24, 2026
ತಾಲೂಕು ಸುದ್ದಿ

ಪ.ಜಾತಿ-ಪ.ಪಂಗಡದವರ ಹಿತರಕ್ಷಣಾ ಸಭೆ : ಬೆಳ್ತಂಗಡಿ ಸರಕಾರಿ ಆಸ್ಪತ್ರೆಯಲ್ಲಿ ಮಗು ಸಾವು: ಸುಮೋಟೋ ಕೇಸು ದಾಖಲಿಸಲು ಆಗ್ರಹ

ಬೆಳ್ತಂಗಡಿ: ಬೆಳ್ತಂಗಡಿ ತಾಲೂಕು ಮಟ್ಟದ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದವರ ಹಿತರಕ್ಷಣಾ ಸಭೆಯು ಅ.9ರಂದು ತಹಶೀಲ್ದಾರ್ ಸುರೇಶ್ ಕುಮಾರ್ ಅವರ ಅಧ್ಯಕ್ಷತೆಯಲ್ಲಿ ಮಿನಿ ವಿಧಾನ ಸೌಧ ಕಚೇರಿ ಸಭಾಂಗಣದಲ್ಲಿ ಜರುಗಿತು.

ಬೆಳ್ತಂಗಡಿ ತಾಲೂಕಿನಲ್ಲಿ ಡಿ.ಸಿ ಮನ್ನಾ ಜಾಗ ವರ್ಷದಿಂದ ವರ್ಷಕ್ಕೆ ಕಡಿಮೆಯಾಗುತ್ತಗಿದ್ದು, ಕಂದಾಯ ಇಲಾಖೆಯ ದಾಖಲೆಗಳ ಪ್ರಕಾರ ಅದು 26 ಎಕರೆ ಮಾತ್ರ ಇದೆ. ಆದರೆ ಕೊಯ್ಯೂರು ಒಂದೇ ಗ್ರಾಮದಲ್ಲಿ 45 ಎಕ್ರೆ ಡಿ.ಸಿ ಮನ್ನಾ ಜಾಗ ಇದೆ. ತಾಲೂಕಿನಲ್ಲಿ ಎಲ್ಲಾ ಗ್ರಾಮಗಳಲ್ಲಿರುವ ಡಿ.ಸಿ ಮನ್ನಾ ಜಾಗ ಗುರುತಿಸಬೇಕು, ಡಿಸಿ ಮನ್ನಾ ಜಾಗ ಮಂಜೂರುಗೊಳಿಸಲು 275 ಮಂದಿ ಅರ್ಜಿ ಸಲ್ಲಿಸಿದ್ದರೂ ಇದನ್ನು ಇನ್ನೂ ಮಂಜೂರುಗೊಳಿಸಿಲ್ಲ ಎಂದು ಚಂದು ಎಲ್, ಸಂಜೀವ, ವೆಂಕಣ್ಣ ಕೊಯ್ಯೂರು, ನೇಮಿರಾಜ ಕಿಲ್ಲೂರು ಸಭೆಯ ಗಮನಕ್ಕೆ ತಂದರು. ಆ.21ರಂದು ಈ ಬಗ್ಗೆ ಜಿಲ್ಲಾಧಿಕಾರಿಗಳು ಸಭೆ ಕರೆದಿದ್ದು, ಅದರಲ್ಲಿ ಈ ವಿಷಯ ಚರ್ಚಿಸಲಾಗುವುದು ಎಂದು ತಹಶೀಲ್ದಾರ್ ತಿಳಿಸಿದರು.

ನಗರ ಪಂಚಾಯತದ ಪೌರ ಕಾರ್ಮಿಕರನ್ನು ರಾಜಕಾರಣಿಗಳು, ಅಧಿಕಾರಿಗಳು ತಮ್ಮ ಸ್ವಂತ ಕೆಲಸಗಳಿಗೆ ಬಳಸಿಕೊಳ್ಳುವುದಕ್ಕೆ ಸಭೆಯಲ್ಲಿ ತೀವ್ರ ವಿರೋಧ ವ್ಯಕ್ತಪಡಿಸಿದ ನಾಯಕರು ಅವರಿಗೆ ಸರಕಾರದಿಂದ ಸರಿಯಾದ ಸೌಲಭ್ಯ ಒದಗಿಸುವಂತೆ ಆಗ್ರಹಿಸಿದರು. ಬೆಳ್ತಂಗಡಿ ತಾಲೂಕು ಆಸ್ಪತ್ರೆಯಲ್ಲಿ ಸೂಕ್ತ ಚಿಕಿತ್ಸೆ ಸಿಗದೇ, ವೈದ್ಯರ ನಿರ್ಲಕ್ಷದಿಂದ ಧಮ೯ಸ್ಥಳ ಗ್ರಾಮದ ಮುಳಿಕ್ಕಾರು ಬಾಲಕೃಷ್ಣ ಮತ್ತು ಸವಿತಾ ದಂಪತಿಯ ಮಗು ಮೃತಪಟ್ಟಿದ್ದು ವೈದ್ಯರ ಮೇಲೆ ಸುಮೋಟೋ ಕೇಸು ದಾಖಲಿಸುವಂತೆ ಶೇಖರ ಎಲ್. ಆಗ್ರಹಿಸಿದರು. ತಾಲೂಕು ಆಸ್ಪತ್ರೆಯಲ್ಲಿ ಕೆಲ ವೈದ್ಯರು ಖಾಸಗಿ ಕ್ಲಿನಿಕ್ ಗಳನ್ನು ನಡೆಸುತ್ತಿದ್ದಾರೆ. ಇದರ ಬಗ್ಗೆ ಕ್ರಮಕ್ಕೆ ಆಗ್ರಹಿಸಲಾಯಿತು. ವೈದ್ಯರು ತಮ್ಮ ಕರ್ತವ್ಯ ಬಿಟ್ಟು ಇತರ ಅವಧಿಯಲ್ಲಿ ಮಾಡಬಹುದು ಎಂದು ಸರಕಾರದ ಆದೇಶ ಇದೆ ಎಂದು ತಾಲೂಕು

ವೈಧ್ಯಾಧಿಕಾರಿಗಳು ಸ್ವಷ್ಟಪಡಿಸಿದರು. ಪ. ಜಾತಿ ಪಂಗಡದವರಿಗೆ 1986 ರಿಂದ ಪಟ್ಟಣ ಪಂಚಾಯಿತಿಯಿಂದ ಉಚಿತವಾಗಿ ನೀಡುತ್ತಿದ್ದ ನಳ್ಳಿ ನೀರಿಗೆ 2018 ರ ನಂತರ ಒಮ್ಮೆಲೆ 25 ಸಾವಿರಕ್ಕೂ ಮಿಕ್ಕಿ ಬಿಲ್ಲು ಬಂದಿದ್ದು, ಇದನ್ನು ಮನ್ನಾ ಮಾಡುವಂತೆ ಸಂಜೀವ ಅವರು ಆಗ್ರಹಸಿದರು. ಇದರ ಪರಿಶೀಲನೆ ನಡೆಸುವುದಾಗಿ ತಹಶೀಲ್ದಾರ್ ಭರವಸೆ ನೀಡಿದರು. ಸಭೆಯಲ್ಲಿ ವಿವಿಧ ವಿಷಯಗಳ ಬಗ್ಗೆ ಚರ್ಚೆ ನಡೆಯಿತು. ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕ ಹೇಮಚಂದ್ರ, ವಿವಿಧ ಇಲಾಖೆಗಳ ಅಧಿಕಾರಿಗಳು ಉಪಸ್ಥಿತರಿದ್ದರು.

Related posts

ಎಸ್ಐಟಿ ವಿಚಾರಣೆಗೆ ಜಯಂತ್ ಟಿ., ಗಿರೀಶ್ ಮಟ್ಟಣ್ಣವರ್, ಯ್ಯೂಟ್ಯೂಬರ್ ಗಳಾದ ಮನಾಫ್, ಅಭಿಷೇಕ್ ಹಾಜರು

Suddi Udaya

ಅಳದಂಗಡಿ ಶ್ರೀ ಸತ್ಯದೇವತಾ ದೈವಸ್ಥಾನದಲ್ಲಿ ಸಂಕ್ರಾಂತಿ ಪೂಜೆ: 3 ಸಾವಿರ ಮಕ್ಕಳಿಗೆ ಉಚಿತ ಪುಸ್ತಕ ವಿತರಣೆಯ ಅರ್ಜಿ ಫಾರಂ ವಿತರಣೆ

Suddi Udaya

ಉಜಿರೆ : ಅನುಗ್ರಹ ಕಾಲೇಜಿನಲ್ಲಿ ಸಾಹಿತ್ಯ ಹಾಗೂ ವ್ಯಕ್ತಿತ್ವ ವಿಕಸನ

Suddi Udaya

ಬೆಳ್ತಂಗಡಿಯಲ್ಲಿ ವಿಜಯ ಸಂಕಲ್ಪ ಯಾತ್ರೆ

Suddi Udaya

ಬೆಳ್ತಂಗಡಿ: ಕುತ್ಯಾರು ಶ್ರೀ ಸೋಮನಾಥೇಶ್ವರ ದೇವಸ್ಥಾನದ ವರ್ಷಾವಧಿ ಜಾತ್ರೋತ್ಸವ ಆರಂಭ: ತೋರಣ ಮುಹೂರ್ತ, ಧ್ವಜಾರೋಹಣ

Suddi Udaya

ಎಕ್ಸೆಲ್ ನಲ್ಲಿ ದ್ವಿತೀಯ ಪಿಯುಸಿ ರಾಜ್ಯ ಟಾಪರ್ಸ್ ಗೆ ಲಕ್ಷ ಮೊತ್ತದೊಂದಿಗೆ, ಸನ್ಮಾನ

Suddi Udaya
error: Content is protected !!