25.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿಬೆಳ್ತಂಗಡಿ

ಬೆಳ್ತಂಗಡಿ ನವೋದಯ ಪ್ರೌಢಶಾಲೆ ಮತ್ತು ಲಾಯಿಲ ಬಿ.ಇಡಿ ಕಾಲೇಜಿನ ನಿವೃತ್ತ ಗೌರವ ಪ್ರಾಧ್ಯಾಪಕ ಪಿ ವೆಂಕಟರಮಣ ನಿಧನ

ಬೆಳ್ತಂಗಡಿ ನಿವಾಸಿ ಪಿ ವೆಂಕಟರಮಣ (84ವ) ರವರು ಅಲ್ಪಕಾಲದ ಅಸೌಖ್ಯದಿಂದ ಆ.9 ರಂದು ನಿಧನರಾದರು.

ಇವರು ದಕ್ಷಿಣ ಕನ್ನಡ ಜಿಲ್ಲಾ ಉಪನಿರ್ದೇಶಕರ ಕಚೇರಿಯಲ್ಲಿ ವಿದ್ಯಾಧಿಕಾರಿಯಾಗಿ, ಜಿಲ್ಲಾ ಉಪನಿರ್ದೇಶಕರಾಗಿ, ಶಿಕ್ಷಕ ಶಿಕ್ಷಣ ಮಹಾವಿದ್ಯಾಲಯದಲ್ಲಿ ಪ್ರಾಂಶುಪಾಲರಾಗಿ, ಜಂಟಿ ನಿರ್ದೇಶಕರಾಗಿ ಬಳಿಕ ಮಂಗಳೂರು ಸರಕಾರಿ ಶಿಕ್ಷಣ ಮಹಾವಿದ್ಯಾಲಯದಲ್ಲಿ ನಿವೃತ್ತಿ ಹೊಂದಿದರು. ನಂತರ ಬೆಳ್ತಂಗಡಿ ನವೋದಯ ಪ್ರೌಢಶಾಲೆಯಲ್ಲಿ ಮತ್ತು ಲಾಯಿಲ ಬಿ.ಇಡಿ ಕಾಲೇಜಿನಲ್ಲಿ ಗೌರವ ಪ್ರಾಧ್ಯಾಪಕರಾಗಿ ಕರ್ತವ್ಯ ನಿರ್ವಹಿಸಿದ್ದರು.ಇವರು ಯಕ್ಷಗಾನ ಕಲಾವಿದರಾಗಿ ಅನೇಕ ವಿದ್ಯಾರ್ಥಿಗಳಿಗೆ ತರಬೇತಿ ನೀಡಿದರು.

ಮೃತರು ಪತ್ನಿ ದಮಯಂತಿ, ಪುತ್ರರಾದ ಜಗದೀಶ್, ಕಿರಣ್ ಮತ್ತು ಪುತ್ರಿ ಉಷಾ ಹಾಗೂ ಬಂಧು ಬಳಗವನ್ನು ಅಗಲಿದ್ದಾರೆ.

Related posts

ಪ್ರೊ. ಮಧೂರು ಮೋಹನ ಕಲ್ಲೂರಾಯರಿಗೆ ‘ಕರ್ನಾಟಕ ಕಲಾ ಶ್ರೀ’ ಪ್ರಶಸ್ತಿ

Suddi Udaya

ಉಜಿರೆ ಎಸ್‌.ಡಿ.ಎಂ (ಸಿ.ಬಿ.ಎಸ್.ಇ) ಶಾಲೆಯ ಶಿಕ್ಷಕರಿಗೆ “ಒತ್ತಡ ನಿರ್ವಹಣೆ” ಕಾರ್ಯಾಗಾರ

Suddi Udaya

ಯುವವಾಹಿನಿ ಕೆಂದ್ರ ಸಮಿತಿಯ ನೂತನ ಅಧ್ಯಕ್ಷರಾಗಿ ಅಧಿಕಾರ ಸ್ವೀಕರಿಸಿದ ಸಾಮಾಜಿಕ, ಧಾರ್ಮಿಕ, ಶೈಕ್ಷಣಿಕ ಕ್ಷೇತ್ರದ ಸಾಧಕ ಹರೀಶ್ ಕೆ ಪೂಜಾರಿ ಬೈಲಬರಿ ಬಳಂಜ

Suddi Udaya

ಅರೆಮಲೆಬೆಟ್ಟ ಶ್ರೀ ಕೊಡಮಣಿತ್ತಾಯ ದೈವಸ್ಥಾನದಲ್ಲಿ ಕುಂಭಾಭಿಷೇಕ ಪೂರ್ವಭಾವಿಯಾಗಿ ಚಪ್ಪರ ಮೂಹೂರ್ತ

Suddi Udaya

ಹೊಸಪಟ್ಣ ಸ.ಕಿ.ಪ್ರಾ. ಶಾಲೆಯಲ್ಲಿ ಪರಿಸರ ದಿನಾಚರಣೆ

Suddi Udaya

ಎಲ್ ಸಿ ಆರ್ ಇಂಡಿಯನ್ ಪದವಿ ವಿಭಾಗದಲ್ಲಿ ವಾಣಿಜ್ಯ ಚಟುವಟಿಕೆ ಕಾರ್ಯಕ್ರಮ

Suddi Udaya
error: Content is protected !!