25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಕೊಕ್ಕಡ “ಅಮೃತ” ಗ್ರಾಮ ಪಂಚಾಯತ್ ವಿವಿಧ ಕಾಮಗಾರಿಗಳ ಉದ್ಘಾಟನೆ

ಕೊಕ್ಕಡ: ಕೊಕ್ಕಡ “ಅಮೃತ” ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ವಿವಿಧ ಕಾಮಗಾರಿಗಳ ಉದ್ಘಾಟನೆಯು ಆ.9ರಂದು ಜರುಗಿತು.

ಕೆಂಗುಡೇಲು ಎಂಬಲ್ಲಿ ನೂತನವಾಗಿ ನಿರ್ಮಿಸಿದ ಬಸ್‍ಸ್ಟಾಂಡ್‍ನ್ನು ಕೊಕ್ಕಡ ಸಹಕಾರಿ ಸಂಘದ ಅಧ್ಯಕ್ಷರಾದ ಕುಶಾಲಪ್ಪ ಗೌಡ ಪೂವಾಜೆ ಉದ್ಘಾಟಿಸಿ, ಶುಭಹಾರೈಸಿದರು.

ಪಂಚಾಯತ್ ಉಪಾಧ್ಯಕ್ಷೆ ಪವಿತ್ರಾ ಗುರುಪ್ರಸಾದ್ ಸ್ವಾಗತಿಸಿ, ಕಾರ್ಯಕ್ರಮ ನಿರೂಪಿಸಿದರು. ವಿಠಲ ಕುರ್ಲೆ ಧನ್ಯವಾದವಿತ್ತರು.

ಉಪ್ಪಾರಪಳಿಕೆ ಹಿ.ಪ್ರಾ.ಶಾಲೆಯಲ್ಲಿ ಗ್ರಾ.ಪಂ ಅನುದಾನದಲ್ಲಿ ನಿರ್ಮಿಸಿದ ಹುಡುಗಿಯರ ಶೌಚಾಲಯವನ್ನು ಪಂಚಾಯತ್ ಉಪಾಧ್ಯಕ್ಷೆ ಪವಿತ್ರಾ ಗುರುಪ್ರಸಾದ್ ಉದ್ಘಾಟಿಸಿ, ಶುಭಹಾರೈಸಿದರು. ಶಿಕ್ಷಕಿ ಸರಸ್ವತಿ ಸ್ವಾಗತಿಸಿ, ಧನ್ಯವಾದವಿತ್ತರು. ಶಿಕ್ಷಕ ದಾಮೋದರ ಅಜ್ಜಾವರ ಕಾರ್ಯಕ್ರಮ ನಿರೂಪಿಸಿದರು.

ಪುದ್ಯಂಗ ಎಂಬಲ್ಲಿ ನಿರ್ಮಿಸಿದ ಬಸ್‍ಸ್ಟ್ಯಾಂಡ್‍ನ್ನು ಗ್ರಾ.ಪಂ ಅಧ್ಯಕ್ಷ ಯೋಗೀಶ ಆಲಂಬಿಲ ಉದ್ಘಾಟಿಸಿ , ಶುಭಹಾರೈಸಿದರು. ವಿಠಲ ಕುರ್ಲೆ ಸ್ವಾಗತಿಸಿ, ಕಾರ್ಯಕ್ರಮ ನಿರೂಪಿಸಿದರು. ಶ್ರೀನಾಥ್ ಬಡಕಾೈಲು ವಂದಿಸಿದರು.

ಹಳ್ಳಿಂಗೇರಿ ಎಂಬಲ್ಲಿ ನಿರ್ಮಿಸಿದ ಬಸ್‍ಸ್ಟ್ಯಾಂಡ್‍ನ್ನು ನಿವೃತ್ತ ಸೈನಿಕ ಪದ್ಮಯ ಗೌಡ ತಿಪ್ಪೆಮಜಲು ಉದ್ಘಾಟಿಸಿದರು. ಸದಸ್ಯ ಜಗದೀಶ ಕೆಂಪಕೋಡಿ ಸ್ವಾಗತಿಸಿ, ಸದಸ್ಯ ವಿಶ್ವನಾಥ ಕಕ್ಕುದೋಳಿ ಧನ್ಯವಾದವಿತ್ತರು. ಉಪಾಧ್ಯಕ್ಷೆ ಪವಿತ್ರಾ ಗುರುಪ್ರಸಾದ್ ಕಾರ್ಯಕ್ರಮ ನಿರೂಪಿಸಿದರು.

ಈ ಸಂದರ್ಭದಲ್ಲಿ ಕೊಕ್ಕಡ ಗ್ರಾ.ಪಂ ವ್ಯಾಪ್ತಿಯಲ್ಲಿ ಎರಡೂವರೆ ವರ್ಷದಲ್ಲಿ ನಡೆಸಿರುವ ವಿವಿಧ ಕಾಮಗಾರಿಗಳ ವಿವರಗಳನ್ನೊಳಗೊಂಡ ಪತ್ರಿಕೆಯನ್ನು ಕೊಕ್ಕಡ ಸಹಕಾರಿ ಸಂಘದ ಅಧ್ಯಕ್ಷ ಕುಶಾಲಪ್ಪ ಗೌಡ ಪೂವಾಜೆ ಬಿಡುಗಡೆಗೊಳಿಸಿದರು. ಗ್ರಾ.ಪಂ ಸದಸ್ಯರಾದ ಪ್ರಭಾಕರ ಗೌಡ ಮಲ್ಲಿಗೆಮಜಲು, ವಿಶ್ವನಾಥ ಕಕ್ಕುದೋಳಿ, ಜಗದೀಶ ಕೆಂಪಕೋಡಿ, ಶ್ರೀಮತಿ ಬೇಬಿ, ಕಾರ್ಯದರ್ಶಿ ಭಾರತಿ, ಬೂತ್ ಸಮಿತಿ ಅಧ್ಯಕ್ಷ ಶ್ರೀನಾಥ ಬಡಕಾೈಲು, ಕಾರ್ಯದರ್ಶಿಗಳಾದ ವಿಠಲ ಕುರ್ಲೆ, ಶ್ರೀಮತಿ ಅಶ್ವಿನಿ ಉಪಸ್ಥಿತರಿದ್ದರು.

Related posts

ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ವತಿಯಿಂದ ಮುಂಡಾಜೆ ಶಾಲಾ ವಿದ್ಯಾರ್ಥಿಗಳಾದ ಚಿನ್ಮಯಿ, ಸಮೃದ್ಧಿರವರಿಗೆ ರಾಜ್ಯ ಮಟ್ಟದ ಪ್ರಶಸ್ತಿ ಪ್ರದಾನ

Suddi Udaya

ಮಡಂತ್ಯಾರು ಸೇಕ್ರೆಡ್ ಹಾರ್ಟ್ ಆಂ.ಮಾ. ಶಾಲೆಯಲ್ಲಿ ಶಾಲಾ ಮಂತ್ರಿಮಂಡಲದ ಮೊದಲ ಅಧಿವೇಶನ

Suddi Udaya

ಬಿಜೆಪಿ ಜಿಲ್ಲಾ ಮಟ್ಟದ ವಿವಿಧ ಮೋರ್ಚಾಗಳ ಪ್ರಧಾನ ಕಾರ್ಯದರ್ಶಿಗಳ ನೇಮಕ

Suddi Udaya

ಚಾರ್ಮಾಡಿ ಮುಹಿದ್ದಿನ್ ಜುಮ್ಮಾ ಮಸೀದಿಗೆ ನುಗ್ಗಿದ ತಂಡದಿಂದ ಧರ್ಮಗುರುಗಳ ಮೇಲೆ ಹಲ್ಲೆ

Suddi Udaya

ಬೆಳ್ತಂಗಡಿ ಧರ್ಮ ಪ್ರಾಂತ್ಯದ ವಂ| ಸಿ| ಟೆಸಿ ಮಾನುವೆಲ್ ಎಸ್ ಎಚ್ ರವರಿಗೆ ರಾಜ್ಯ ಮಟ್ಟದ ಉತ್ತಮ ಶಿಕ್ಷಕಿ ಪ್ರಶಸ್ತಿ ಪ್ರದಾನ

Suddi Udaya

ಕುವೆಟ್ಟು : ಪಯ್ಯೊಟ್ಟು ನಿವಾಸಿ ಸೀತಾರಾಮ ಪೂಜಾರಿ ನಿಧನ

Suddi Udaya
error: Content is protected !!