24.7 C
ಪುತ್ತೂರು, ಬೆಳ್ತಂಗಡಿ
May 17, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಆ.19: ಧರ್ಮಸ್ಥಳದಲ್ಲಿ ನೈತಿಕ ಮೌಲ್ಯಾಧಾರಿತ ಪುಸ್ತಕಗಳ ಲೋಕಾರ್ಪಣೆ, ರಾಜ್ಯಮಟ್ಟದ ಅಂಚೆ-ಕುಂಚ ಸ್ಪರ್ಧಾ ವಿಜೇತರಿಗೆ ಪುರಸ್ಕಾರ ಸಮಾರಂಭ

ಉಜಿರೆ: ಧರ್ಮಸ್ಥಳದ ಶಾಂತಿವನ ಟ್ರಸ್ಟ್ ಆಶ್ರಯದಲ್ಲಿ ಶಾಲೆಗಳಲ್ಲಿ ಯೋಗ ಮತ್ತು ನೈತಿಕ ಶಿಕ್ಷಣ ಯೋಜನೆಯಡಿ ಪ್ರಕಟಿಸಲಾದ “ಜ್ಞಾನಶರಧಿ” ಮತ್ತು ಜ್ಞಾನವಾರಿಧಿ” ಎಂಬ ನೈತಿಕ ಮೌಲ್ಯಾಧಾರಿತ ಪುಸ್ತಕಗಳನ್ನು ಆ. 19 ರಂದು  ಶನಿವಾರ ಬೆಳಿಗ್ಗೆ ಹನ್ನೊಂದು ಗಂಟೆಗೆ ಧರ್ಮಸ್ಥಳದಲ್ಲಿ ಮಹೋತ್ಸವ ಸಭಾಭವನದಲ್ಲಿ ಮೈಸೂರಿನ ಖ್ಯಾತ ವಾಗ್ಮಿ ಪ್ರೊ. ಕೃಷ್ಣೇಗೌಡ ಲೋಕಾರ್ಪಣೆ ಮಾಡಲಿದ್ದಾರೆ.


ಖ್ಯಾತ ಚಲನಚಿತ್ರ ನಟ ಸಿಹಿಕಹಿ ಚಂದ್ರು ರಾಜ್ಯಮಟ್ಟದ ಅಂಚೆ-ಕುಂಚ ಸ್ಪರ್ಧಾ ವಿಜೇತರಿಗೆ ಪುರಸ್ಕಾರ ವಿತರಿಸಲಿದ್ದಾರೆ ಎಂದು ಯೋಗ ಮತ್ತು ನೈತಿಕ ಶಿಕ್ಷಣ ಯೋಜನೆಯ ನಿರ್ದೇಶಕ ಡಾ. ಐ. ಶಶಿಕಾಂತ್ ಜೈನ್ ತಿಳಿಸಿದ್ದಾರೆ.


ರಾಜ್ಯ ಶಿಕ್ಷಣ, ಸಂಶೋಧನೆ ಮತ್ತು ತರಬೇತಿ ಇಲಾಖೆಯ ನಿರ್ದೇಶಕಿ ಸುಮಂಗಲ ಶುಭಾಶಂಸನೆ ಮಾಡುವರು.
ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರು ಅಧ್ಯಕ್ಷತೆ ವಹಿಸುವರು.


ಕುಂಚ-ಗಾನ-ನೃತ್ಯ ವೈಭವ: ಸಂಗೀತ ವಿದುಷಿ ಶ್ರೇಯ ಕೊಳತ್ತಾಯರ ಸುಶ್ರಾವ್ಯ ಗಾಯನಕ್ಕೆ ದಾವಣಗೆರೆಯ ಚಿತ್ರಕಲಾವಿದ ಬಾಬಲೇಶ್ವರ ಕುಂಚದಲ್ಲಿ ಚಿತ್ರಕಲೆ ರೂಪಿಸಿದರೆ ಮಂಗಳೂರಿನ ಸನಾತನ ನಾಟ್ಯಾಲಯದ ವಿದುಷಿ ಶಾರದಾಮಣಿಶೇಖರ್ ನೃತ್ಯ ಪ್ರದರ್ಶನ ನೀಡಲಿದ್ದಾರೆ.

Related posts

ಉಡುಪಿಯ ಮಧ್ವ ನವರಾತ್ರೋತ್ಸವದಲ್ಲಿ ವಿದ್ವಾನ್ ರಾಘವೇಂದ್ರ ಭಟ್ ಲಕ್ಷ್ಮೀ ನರಸಿಂಹ ಮಠ ಮದ್ದಡ್ಕ ರವರಿಗೆ ಸನ್ಮಾನ

Suddi Udaya

ಜೆಸಿಐ ಬೆಳ್ತಂಗಡಿ ಮಂಜುಶ್ರೀ ವತಿಯಿಂದ ಶುಶ್ರೂಷ ಮಾಹಿತಿ ಕಾರ್ಯಾಗಾರ: ಜೆಸಿಐ ಪದಾಧಿಕಾರಿಗಳೊಂದಿಗೆ ಕುಟುಂಭೋತ್ಸವ ಆಚರಣೆ, ಬಹುಮಾನ ವಿತರಣೆ

Suddi Udaya

ಚಾರ್ಮಾಡಿ: ಅರೆ ಪ್ರಜ್ಞಾ ಸ್ಥಿತಿಯಲ್ಲಿ ಪತ್ತೆಯಾದ ಕಾಡಾನೆ

Suddi Udaya

ಫೆ.12: ಉಜಿರೆ ಶ್ರೀ ದುರ್ಗಾ ನಿಲಯದಲ್ಲಿ ಶ್ರೀ ಸತ್ಯನಾರಾಯಣ ದೇವರ ಪೂಜೆ, ಹಾಗೂ ಶ್ರೀ ಶನೀಶ್ವರ ಪೂಜೆ

Suddi Udaya

ಪಡಂಗಡಿ : ಪೊಯ್ಯೆಗುಡ್ಡೆ ನಿವಾಸಿ ಶ್ರೀಮತಿ ಕಮಲ ನಿಧನ

Suddi Udaya

ಲಾಯಿಲ ಗ್ರಾಮ ಪಂಚಾಯತ್ ನಲ್ಲಿ ಮಕ್ಕಳ ಹಕ್ಕುಗಳ ಗ್ರಾಮ ಸಭೆ

Suddi Udaya
error: Content is protected !!