22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಮುಂಡಾಜೆ: ಪೌಷ್ಟಿಕ ಆಹಾರ ಸಿರಿಧಾನ್ಯ ಬಳಕೆ ಮಾಹಿತಿ ಹಾಗೂ ಪ್ರಾತ್ಯಕ್ಷಿಕೆ

ಬೆಳ್ತಂಗಡಿ; ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆ ಬಿ.ಸಿ .ಟ್ರಸ್ಟ್ ( ರಿ) ಬೆಳ್ತಂಗಡಿ ತಾಲೂಕು, ಮುಂಡಾಜೆ ವಲಯ ಇದರ ವತಿಯಿಂದ ಕಡಿರುದ್ಯಾವರ ಗ್ರಾಮ ಪಂಚಾಯತಿ ಸಭಾಭವನದಲ್ಲಿ ಮಲ್ಲಡ್ಕ ಕಡಿರುದ್ಯಾವರ ಕುಕ್ಕಾವು ಜ್ಞಾನ ವಿಕಾಸ ಮಹಿಳಾ ಕಾರ್ಯಕ್ರಮದಡಿಯಲ್ಲಿ ಪೌಷ್ಟಿಕ ಆಹಾರ, ಸಿರಿ ಧಾನ್ಯ ಬಳಕೆ ಮಾಹಿತಿ ಹಾಗೂ ಪ್ರಾತ್ಯಕ್ಷಿಕೆ ಕಾರ್ಯಕ್ರಮವನ್ನು ಆ.8 ರಂದು ನಡೆಯಿತು.


ಕಾರ್ಯಕ್ರಮದ ಉದ್ಘಾಟನೆಯನ್ನು ಗ್ರಾಮ ಪಂಚಾಯಿತಿ ನಿಕಟಪೂರ್ವ ಅಧ್ಯಕ್ಷ ಅಶೋಕ್ ಕುಮಾರ್ ನೆರವೇರಿಸಿದರು. ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಜಯಕೀರ್ತಿ ಹೆಚ್ ಬಿ ಯವರು ಮುಖ್ಯ ಅತಿಥಿಯಾಗಿ ಮಾತನಾಡಿದರು. ಬಳಿಕ ಸಿರಿಧಾನ್ಯ ಮಾರುಕಟ್ಟೆ ಅಧಿಕಾರಿ ವಿವಿಧ ಸಿರಿ ಧಾನ್ಯಗಳ ಪರಿಚಯ ಮಾಡುವುದರೊಂದಿಗೆ ನವಣೆ, ಊದಲು , ಕೊರಳು, ಸಜ್ಜೆ, ಸಾಮೆ , ರಾಗಿ ಬಳಕೆ ವಿಧಾನ ಇವುಗಳಿಂದ ತಯಾರಿಸುವ ವಿವಿಧ ತಿಂಡಿಗಳ ಬಗ್ಗೆ ಬಳಕೆ ವಿಧಾನ & ರೋಗನಿರೋಧಕ ಶಕ್ತಿ ಬಗ್ಗೆ ಮಾಹಿತಿ ನೀಡಿದರು.

ಗ್ರಾಮ ಪಂಚಾಯಿತಿ ನೂತನ ಅಧ್ಯಕ್ಷೆ ರತ್ನಾವತಿ, ಗ್ರಾಮ ಪಂಚಾಯತಿ ಕಾರ್ಯದರ್ಶಿ ಜನಾರ್ದನ್ , ಬಂಗಾಡಿ ಸಹಕಾರಿ ಸಂಘದ ನಿರ್ದೇಶಕ ಆನಂದ, ವಲಯ ಮೇಲ್ವಿಚಾರಕ ಜನಾರ್ದನ, ಮುಂಡಾಜೆ ಬಿ ಸೇವಾಪ್ರತಿನಿಧಿ ಲೀಲಾವತಿ ಕಾನರ್ಪ, ಸೇವಾಪ್ರತಿನಿಧಿ ಅಜಿತಾ ಉಪಸ್ಥಿತರಿದ್ದರು.
ಜ್ಞಾನವಿಕಾಸ ಸಮನ್ವಯಧಿಕಾರಿ ಮಧುರಾ ನಿರೂಪಿಸಿದರು. ಕೇಂದ್ರ ಸಂಯೋಜಕಿ ದಿವ್ಯಾ ಸ್ವಾಗತಿಸಿದರು. ಸೇವಾಪ್ರತಿನಿಧಿ ಸುರೇಖಾ ಧನ್ಯವಾದವಿತ್ತರು.

Related posts

ಶಿಶಿಲ ಕಪಿಲ ನದಿಯಲ್ಲಿ ಒಮ್ಮೆಲೇ ಉಕ್ಕಿ ಹರಿದು ಬಂದ ಪ್ರವಾಹ: ಕಿಂಡಿಅಣೆಕಟ್ಟು ಮುಳುಗಡೆ- ದೇವಸ್ಥಾನದ ಒಳಗೆ ನುಗ್ಗಿದ ನೀರು

Suddi Udaya

ನಿಡ್ಲೆ ಸರಕಾರಿ ಪ್ರೌಢ ಶಾಲೆಗೆ ಶೇ.95.83 ಫಲಿತಾಂಶ

Suddi Udaya

ಮಚ್ಚಿನ ಸರಕಾರಿ ಪ್ರೌಢಶಾಲೆಗೆ ಬ್ಯಾಂಕ್ ಆಫ್ ಬರೋಡ ವತಿಯಿಂದ ಟೇಬಲ್ ಹಾಗೂ ಹಣ್ಣಿನ ಗಿಡ ವಿತರಣೆ

Suddi Udaya

ಧರ್ಮಸ್ಥಳ ಲಕ್ಷದೀಪೋತ್ಞವಸರ್ವಧರ್ಮ ಸಮ್ಮೇಳನದ 92ನೇ ಅಧಿವೇಶನ ಉದ್ಘಾಟನೆ

Suddi Udaya

ಬೆಳ್ತಂಗಡಿ 45ನೇ ವರ್ಷದ ಸಾರ್ವಜನಿಕ ಶ್ರೀ ಶಾರದೋತ್ಸವಕ್ಕೆ ಚಾಲನೆ

Suddi Udaya

ಬೆಳ್ತಂಗಡಿ ಔಷಧಿ ವ್ಯಾಪಾರಸ್ಥರ ಸಂಘದ ಜಂಟಿ ಸಭೆ

Suddi Udaya
error: Content is protected !!