Uncategorizedಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಬೆಳ್ತಂಗಡಿ ಸರಕಾರಿ ಆಸ್ಪತ್ರೆಯಲ್ಲಿ ಒಂದೂವರೆ ತಿಂಗಳ ಮಗು ಸಾವು: ಆಸ್ಪತ್ರೆಗೆ ಭೇಟಿ ನೀಡಿದ ಮಾಜಿ ಶಾಸಕ ವಸಂತ ಬಂಗೇರ ಸೂಕ್ತ ತನಿಖೆಗೆ ಒತ್ತಾಯ

ಬೆಳ್ತಂಗಡಿ: ಸರಕಾರಿ ಆಸ್ಪತ್ರೆಯಲ್ಲಿ ವೈದ್ಯರು ಇಲ್ಲದ ವೇಳೆ ನರ್ಸ್ ಗಳು ಆರೈಕೆ ಮಾಡಿರುವುದರಿಂದ ಒಂದೂವರೆ ತಿಂಗಳ ಹೆಣ್ಣು ಮಗು ಸಾವನ್ನಪ್ಪಿದೆ ಎಂದು ಮಗುವಿನ ಹೆತ್ತವರು ಆರೋಪಿಸಿದ್ದಾರೆ.

ಧರ್ಮಸ್ಥಳ ಗ್ರಾಮದ ಮುಳಿಕಾರ್ ನಿವಾಸಿ ಬಾಲಕೃಷ್ಣ ಮತ್ತು ಸವಿತಾ ದಂಪತಿಯ ಒಂದೂವರೆ ತಿಂಗಳ ಹೆಣ್ಣು ಮಗು ಅಂಶಿಕಾ ಸಾವನ್ನಪ್ಪಿದ ಘಟನೆ ಆ.8ರಂದು ನಡೆದಿದೆ.


ಘಟನೆಯ ಬಗ್ಗೆ ಮಾಹಿತಿ ತಿಳಿದು ಮಾಜಿ ಶಾಸಕ ವಸಂತ ಬಂಗೇರ ಆಗಮಿಸಿ, ಜಿಲ್ಲಾ ಆರೋಗ್ಯ ಅಧಿಕಾರಿ ಮತ್ತು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಅವರ ಆಪ್ತ ಕಾರ್ಯದರ್ಶಿ ಗೆ ದೂರವಾಣಿ ಕರೆ ಮಾಡಿ ವಿಷಯವನ್ನು ತಿಳಿಸಿ ಯಾರಿಂದ ತೊಂದರೆ ಆಗಿದೆಯೋ ಅವರ ಮೇಲೆ ಕೂಡಲೇ ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸಿದರು.

ಮಗುವನ್ನು ತಾಯಿ ಸವಿತಾ ನೆರಿಯದ ತನ್ನ ಅಕ್ಕ ಲೀಲಾವತಿ ಅವರ ಮನೆಯಲ್ಲಿದ್ದುಕೊಂಡು ಆರೈಕೆ ಮಾಡಿಕೊಂಡಿದ್ದರು. ಆಗಸ್ಟ್ 8 ರಂದು ಮಗುವಿಗೆ ಕಫ ಆಗಿತ್ತು ಎಂದು ಬೆಳಿಗ್ಗೆ ಬೆಳ್ತಂಗಡಿ ಸರಕಾರಿ ಆಸ್ಪತ್ರೆಗೆ ದಾಖಲು ಮಾಡಿದ್ದರು. ಮಕ್ಕಳ ವೈದ್ಯರು ಮತ್ತು ದಾದಿಯರು ಸರಿಯಾಗಿ ಆರೈಕೆ ಮಾಡದಿರುವುದರಿಂದ ಮಗು ಸಾವನ್ನಪ್ಪಿದೆ ಎಂದು ಮಗುವಿನ ಮನೆಯವರು ಆರೋಪಿಸಿದ್ದಾರೆ.


ಕರ್ತವ್ಯ ನಿರ್ವಹಿಸಿದ ಮಕ್ಕಳ ತಜ್ಞೆ ಹೆಚ್ಚಿನ ಚಿಕಿತ್ಸೆಗೆ ಮಂಗಳೂರಿಗೆ ಹೋಗಲು ತಿಳಿಸಿದರು. ಮಗುವನ್ನು ಕರೆದುಕೊಂಡು ಬಂದ ಪೋಷಕರು ಇಲ್ಲಿಯೇ ಆರೈಕೆ ಮಾಡಿ ಎಂದು ತಿಳಿಸಿದರಿಂದ ಮಗುವಿಗೆ ಅಲ್ಲಿಯೇ ಚಿಕಿತ್ಸೆ ನೀಡಿದರು .ಮಗುವಿಗೆ ಶ್ವಾಸಕೋಶದ ತೊಂದರೆ ಇದ್ದುದರಿಂದ ಸಾವನ್ನಪ್ಪಿದೆ ಎಂದು ವೈದ್ಯರು ತಿಳಿಸಿದ್ದಾರೆ.

Related posts

ಭೂ ಪರಿವರ್ತಿತ ಜಮೀನುಗಳಲ್ಲಿನ ವಿನ್ಯಾಸ ಅನುಮೋದನೆಯನ್ನು ತಾ.ಪಂ. ಮತ್ತು ಗ್ರಾ.ಪಂ. ಯಲ್ಲಿಯೇ ಅನುಕೂಲ ಕಲ್ಪಿಸಲು ನಗರಾಭಿವೃದ್ಧಿ ಸಚಿವ ಬೈರತಿ ಸುರೇಶ್ ರವರಿಗೆ ದ.ಕ. ಮತ್ತು ಉಡುಪಿ ಜಿಲ್ಲೆಗಳ ಬಿಜೆಪಿ ಶಾಸಕರುಗಳ ನಿಯೋಗದಿಂದ ಮನವಿ

Suddi Udaya

ಎರ್ಡೂರು ನಿರಂಜನ್ ರಾವ್ ನಿಧನ

Suddi Udaya

ಎಸ್‌ಎಸ್‌ಎಲ್‌ಸಿ ಫಲಿತಾಂಶ: ವಾಣಿ ಆಂಗ್ಲ ಮಾಧ್ಯಮ ಪ್ರೌಢ ಶಾಲೆಗೆ ಶೇ. 100 ಫಲಿತಾಂಶ

Suddi Udaya

ಗೃಹ ಜ್ಯೋತಿ ಯೋಜನೆ: ಮನೆ ಮನೆಗೆ ತೆರಳಿ ಅರ್ಜಿ ಸ್ವೀಕಾರ – ಗೊಂದಲ ಬೇಡ, ಅರ್ಹರನ್ನು ಕೈಬಿಡುವುದಿಲ್ಲ: ಪದ್ಮನಾಭ ಸಾಲಿಯನ್

Suddi Udaya

ಶಿರ್ಲಾಲು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ವ್ಯವಸ್ಥಾಪನ ಸಮಿತಿಗೆ ಅಧ್ಯಕ್ಷರು ಹಾಗೂ ಸದಸ್ಯರ ನೇಮಕ; ವ್ಯವಸ್ಥಾಪನ ಸಮಿತಿ ಅಧ್ಯಕ್ಷರಾಗಿ ಕುಶಾಲಪ್ಪ ಗೌಡ ಆಯ್ಕೆ

Suddi Udaya

ಎಸ್.ಡಿ.ಎಂ ಪ.ಪೂ. ಕಾಲೇಜಿನಲ್ಲಿ ಭಿತ್ತಿಪತ್ರಿಕೆ ಸ್ಪರ್ಧೆ

Suddi Udaya
error: Content is protected !!