23.7 C
ಪುತ್ತೂರು, ಬೆಳ್ತಂಗಡಿ
April 24, 2026
Uncategorizedಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಬೆಳ್ತಂಗಡಿ ಸರಕಾರಿ ಆಸ್ಪತ್ರೆಯಲ್ಲಿ ಒಂದೂವರೆ ತಿಂಗಳ ಮಗು ಸಾವು: ಆಸ್ಪತ್ರೆಗೆ ಭೇಟಿ ನೀಡಿದ ಮಾಜಿ ಶಾಸಕ ವಸಂತ ಬಂಗೇರ ಸೂಕ್ತ ತನಿಖೆಗೆ ಒತ್ತಾಯ

ಬೆಳ್ತಂಗಡಿ: ಸರಕಾರಿ ಆಸ್ಪತ್ರೆಯಲ್ಲಿ ವೈದ್ಯರು ಇಲ್ಲದ ವೇಳೆ ನರ್ಸ್ ಗಳು ಆರೈಕೆ ಮಾಡಿರುವುದರಿಂದ ಒಂದೂವರೆ ತಿಂಗಳ ಹೆಣ್ಣು ಮಗು ಸಾವನ್ನಪ್ಪಿದೆ ಎಂದು ಮಗುವಿನ ಹೆತ್ತವರು ಆರೋಪಿಸಿದ್ದಾರೆ.

ಧರ್ಮಸ್ಥಳ ಗ್ರಾಮದ ಮುಳಿಕಾರ್ ನಿವಾಸಿ ಬಾಲಕೃಷ್ಣ ಮತ್ತು ಸವಿತಾ ದಂಪತಿಯ ಒಂದೂವರೆ ತಿಂಗಳ ಹೆಣ್ಣು ಮಗು ಅಂಶಿಕಾ ಸಾವನ್ನಪ್ಪಿದ ಘಟನೆ ಆ.8ರಂದು ನಡೆದಿದೆ.


ಘಟನೆಯ ಬಗ್ಗೆ ಮಾಹಿತಿ ತಿಳಿದು ಮಾಜಿ ಶಾಸಕ ವಸಂತ ಬಂಗೇರ ಆಗಮಿಸಿ, ಜಿಲ್ಲಾ ಆರೋಗ್ಯ ಅಧಿಕಾರಿ ಮತ್ತು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಅವರ ಆಪ್ತ ಕಾರ್ಯದರ್ಶಿ ಗೆ ದೂರವಾಣಿ ಕರೆ ಮಾಡಿ ವಿಷಯವನ್ನು ತಿಳಿಸಿ ಯಾರಿಂದ ತೊಂದರೆ ಆಗಿದೆಯೋ ಅವರ ಮೇಲೆ ಕೂಡಲೇ ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸಿದರು.

ಮಗುವನ್ನು ತಾಯಿ ಸವಿತಾ ನೆರಿಯದ ತನ್ನ ಅಕ್ಕ ಲೀಲಾವತಿ ಅವರ ಮನೆಯಲ್ಲಿದ್ದುಕೊಂಡು ಆರೈಕೆ ಮಾಡಿಕೊಂಡಿದ್ದರು. ಆಗಸ್ಟ್ 8 ರಂದು ಮಗುವಿಗೆ ಕಫ ಆಗಿತ್ತು ಎಂದು ಬೆಳಿಗ್ಗೆ ಬೆಳ್ತಂಗಡಿ ಸರಕಾರಿ ಆಸ್ಪತ್ರೆಗೆ ದಾಖಲು ಮಾಡಿದ್ದರು. ಮಕ್ಕಳ ವೈದ್ಯರು ಮತ್ತು ದಾದಿಯರು ಸರಿಯಾಗಿ ಆರೈಕೆ ಮಾಡದಿರುವುದರಿಂದ ಮಗು ಸಾವನ್ನಪ್ಪಿದೆ ಎಂದು ಮಗುವಿನ ಮನೆಯವರು ಆರೋಪಿಸಿದ್ದಾರೆ.


ಕರ್ತವ್ಯ ನಿರ್ವಹಿಸಿದ ಮಕ್ಕಳ ತಜ್ಞೆ ಹೆಚ್ಚಿನ ಚಿಕಿತ್ಸೆಗೆ ಮಂಗಳೂರಿಗೆ ಹೋಗಲು ತಿಳಿಸಿದರು. ಮಗುವನ್ನು ಕರೆದುಕೊಂಡು ಬಂದ ಪೋಷಕರು ಇಲ್ಲಿಯೇ ಆರೈಕೆ ಮಾಡಿ ಎಂದು ತಿಳಿಸಿದರಿಂದ ಮಗುವಿಗೆ ಅಲ್ಲಿಯೇ ಚಿಕಿತ್ಸೆ ನೀಡಿದರು .ಮಗುವಿಗೆ ಶ್ವಾಸಕೋಶದ ತೊಂದರೆ ಇದ್ದುದರಿಂದ ಸಾವನ್ನಪ್ಪಿದೆ ಎಂದು ವೈದ್ಯರು ತಿಳಿಸಿದ್ದಾರೆ.

Related posts

ಉಜಿರೆ: ಬೆನಕ ಆಸ್ಪತ್ರೆಯಲ್ಲಿ ನೂತನ “ವೆಂಟಿಲೇಟರ್” ಉದ್ಘಾಟನೆ

Suddi Udaya

ಬಿಜೆಪಿ ತಣ್ಣೀರುಪoತ ಶಕ್ತಿಕೇಂದ್ರ ಪ್ರಮುಖ್ ಆಗಿ ಚೇತನ್ ಸುವರ್ಣ ಅಳಕ್ಕೆ ಆಯ್ಕೆ

Suddi Udaya

ಪಿಯುಸಿ ಫಲಿತಾಂಶ: ಪುತ್ತೂರಿನ ವಿವೇಕಾನಂದ ಪ.ಪೂ. ಕಾಲೇಜಿನ ವಿಜ್ಞಾನ ವಿಭಾಗದ ಅಭಿರಾಮ್ ವಿ. ಭಟ್ ರಾಜ್ಯಕ್ಕೆ ದ್ವಿತೀಯ ರ‍್ಯಾಂಕ್

Suddi Udaya

ಉಜಿರೆಯ ರುಡ್‌ಸೆಟ್ ಸಂಸ್ಥೆಯಲ್ಲಿ ಜ್ಞಾನ ವಿಕಾಸ ಮಹಿಳಾ ಕಾರ್ಯಕರ್ತರಿಗೆ ಸಾಮಾನ್ಯ ಉದ್ಯಮಶೀಲತಾ ಅಭಿವೃದ್ಧಿ ತರಬೇತಿಯ ಸಮಾರೋಪ ಸಮಾರಂಭ

Suddi Udaya

ಬೆಳ್ತಂಗಡಿ : ಮಾನಸಿಕ ಅಸ್ವಸ್ಥನನ್ನು ಸಿಯೋನ್ ಆಶ್ರಮಕ್ಕೆ ಸೇರಿಸಿದ ಬೆಳ್ತಂಗಡಿ ಪೊಲೀಸರು

Suddi Udaya

“ಸುರ್ಯ ದೇವಸ್ಥಾನದ ವಠಾರದಲ್ಲಿ “ವಿಶ್ವ ಪರಿಸರ ದಿನಾಚರಣೆ “

Suddi Udaya
error: Content is protected !!