July 23, 2026
Uncategorizedಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಬೆಳ್ತಂಗಡಿ ಸರಕಾರಿ ಆಸ್ಪತ್ರೆಯಲ್ಲಿ ಒಂದೂವರೆ ತಿಂಗಳ ಮಗು ಸಾವು: ಆಸ್ಪತ್ರೆಗೆ ಭೇಟಿ ನೀಡಿದ ಮಾಜಿ ಶಾಸಕ ವಸಂತ ಬಂಗೇರ ಸೂಕ್ತ ತನಿಖೆಗೆ ಒತ್ತಾಯ

ಬೆಳ್ತಂಗಡಿ: ಸರಕಾರಿ ಆಸ್ಪತ್ರೆಯಲ್ಲಿ ವೈದ್ಯರು ಇಲ್ಲದ ವೇಳೆ ನರ್ಸ್ ಗಳು ಆರೈಕೆ ಮಾಡಿರುವುದರಿಂದ ಒಂದೂವರೆ ತಿಂಗಳ ಹೆಣ್ಣು ಮಗು ಸಾವನ್ನಪ್ಪಿದೆ ಎಂದು ಮಗುವಿನ ಹೆತ್ತವರು ಆರೋಪಿಸಿದ್ದಾರೆ.

ಧರ್ಮಸ್ಥಳ ಗ್ರಾಮದ ಮುಳಿಕಾರ್ ನಿವಾಸಿ ಬಾಲಕೃಷ್ಣ ಮತ್ತು ಸವಿತಾ ದಂಪತಿಯ ಒಂದೂವರೆ ತಿಂಗಳ ಹೆಣ್ಣು ಮಗು ಅಂಶಿಕಾ ಸಾವನ್ನಪ್ಪಿದ ಘಟನೆ ಆ.8ರಂದು ನಡೆದಿದೆ.


ಘಟನೆಯ ಬಗ್ಗೆ ಮಾಹಿತಿ ತಿಳಿದು ಮಾಜಿ ಶಾಸಕ ವಸಂತ ಬಂಗೇರ ಆಗಮಿಸಿ, ಜಿಲ್ಲಾ ಆರೋಗ್ಯ ಅಧಿಕಾರಿ ಮತ್ತು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಅವರ ಆಪ್ತ ಕಾರ್ಯದರ್ಶಿ ಗೆ ದೂರವಾಣಿ ಕರೆ ಮಾಡಿ ವಿಷಯವನ್ನು ತಿಳಿಸಿ ಯಾರಿಂದ ತೊಂದರೆ ಆಗಿದೆಯೋ ಅವರ ಮೇಲೆ ಕೂಡಲೇ ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸಿದರು.

ಮಗುವನ್ನು ತಾಯಿ ಸವಿತಾ ನೆರಿಯದ ತನ್ನ ಅಕ್ಕ ಲೀಲಾವತಿ ಅವರ ಮನೆಯಲ್ಲಿದ್ದುಕೊಂಡು ಆರೈಕೆ ಮಾಡಿಕೊಂಡಿದ್ದರು. ಆಗಸ್ಟ್ 8 ರಂದು ಮಗುವಿಗೆ ಕಫ ಆಗಿತ್ತು ಎಂದು ಬೆಳಿಗ್ಗೆ ಬೆಳ್ತಂಗಡಿ ಸರಕಾರಿ ಆಸ್ಪತ್ರೆಗೆ ದಾಖಲು ಮಾಡಿದ್ದರು. ಮಕ್ಕಳ ವೈದ್ಯರು ಮತ್ತು ದಾದಿಯರು ಸರಿಯಾಗಿ ಆರೈಕೆ ಮಾಡದಿರುವುದರಿಂದ ಮಗು ಸಾವನ್ನಪ್ಪಿದೆ ಎಂದು ಮಗುವಿನ ಮನೆಯವರು ಆರೋಪಿಸಿದ್ದಾರೆ.


ಕರ್ತವ್ಯ ನಿರ್ವಹಿಸಿದ ಮಕ್ಕಳ ತಜ್ಞೆ ಹೆಚ್ಚಿನ ಚಿಕಿತ್ಸೆಗೆ ಮಂಗಳೂರಿಗೆ ಹೋಗಲು ತಿಳಿಸಿದರು. ಮಗುವನ್ನು ಕರೆದುಕೊಂಡು ಬಂದ ಪೋಷಕರು ಇಲ್ಲಿಯೇ ಆರೈಕೆ ಮಾಡಿ ಎಂದು ತಿಳಿಸಿದರಿಂದ ಮಗುವಿಗೆ ಅಲ್ಲಿಯೇ ಚಿಕಿತ್ಸೆ ನೀಡಿದರು .ಮಗುವಿಗೆ ಶ್ವಾಸಕೋಶದ ತೊಂದರೆ ಇದ್ದುದರಿಂದ ಸಾವನ್ನಪ್ಪಿದೆ ಎಂದು ವೈದ್ಯರು ತಿಳಿಸಿದ್ದಾರೆ.

Related posts

ವೇಣೂರು ಸರಕಾರಿ ಪ್ರೌಢ ಶಾಲೆಯಲ್ಲಿ ಸ್ವಾತಂತ್ರ್ಯೋತ್ಸವ ಆಚರಣೆ: ನೂತನ ಪ್ರವೇಶ ದ್ವಾರದ ಉದ್ಘಾಟನೆ ಹಾಗೂ ದ್ವಜಸ್ತಂಭದ ಲೋಕಾರ್ಪಣೆ

Suddi Udaya

ಎಸ್.ಡಿ.ಎಂ ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ : ಅಂತರ್ ಕಾಲೇಜು ಮತ್ತು ರಾಜ್ಯ ಮಟ್ಟದ ತ್ರೋಬಾಲ್ ಪಂದ್ಯಾಟಕ್ಕೆ ಚಾಲನೆ

Suddi Udaya

ಮರೋಡಿ ಶ್ರೀ ಕ್ಷೇ.ಧ.ಗ್ರಾ. ಯೋಜನೆಯ ವತಿಯಿಂದ ಶ್ರೀ ಕೃಷ್ಣ ಜನ್ಮಾಷ್ಟಮಿ ಆಚರಣೆ

Suddi Udaya

ಉಜಿರೆ ಶ್ರೀ ಧ.ಮಂ. ಮಹಿಳಾ ಕೈಗಾರಿಕಾ ತರಬೇತಿ ಸಂಸ್ಥೆಯಲ್ಲಿ ಸ್ವಾಸ್ಥ್ಯ ಸಂಕಲ್ಪ ಕಾರ್ಯಕ್ರಮ

Suddi Udaya

ಬೆಳ್ತಂಗಡಿ ಉಪನೋಂದಣಾಧಿಕಾರಿಯಾಗಿ ಅಮ್ಲಿನ್ ಡಿಸೋಜಾ ಅಧಿಕಾರ ಸ್ವೀಕಾರ

Suddi Udaya

ದಿಡುಪೆ ಶ್ರೀ ವಿದ್ಯಾಗಣಪತಿ ಸೇವಾ ಸಮಿತಿಯಿಂದ ಗಣೇಶೋತ್ಸವ: ಧಾರ್ಮಿಕ ಸಭೆ ಮತ್ತು ಸಾಂಸ್ಕೃತಿಕ ಕಾರ್ಯಕ್ರಮ

Suddi Udaya
error: Content is protected !!