30.7 C
ಪುತ್ತೂರು, ಬೆಳ್ತಂಗಡಿ
April 24, 2026
ಅಪರಾಧ ಸುದ್ದಿ

ಸೋಮಂತ್ತಡ್ಕ:ಅಂಗಡಿಯ ಶಟರ್ ತೆರೆದು ಅಂಗಡಿಯ ಒಳಗೆ ಡ್ರವರ್ ನಲ್ಲಿ ಇದ್ದ ರೂ.50 ಸಾವಿರ ನಗದು ಕಳವು

ಬೆಳ್ತಂಗಡಿ: ಮುಂಡಾಜೆ ಗ್ರಾಮದ ನಿವಾಸಿ ಪದ್ಮೇಶ್ ಕೆ ಎಸ್ ಎಂಬವರ ಸೋಮಂತ್ತಡ್ಕದ ಅಂಗಡಿಯ ಶಟರ್ ತೆಗೆದು ಅಂಗಡಿಯ ಒಳಗೆ ಡ್ರವರ್ ನಲ್ಲಿ ಇದ್ದ ರೂ.50 ಸಾವಿರ ನಗದನ್ನು ಕಳ್ಳರು ಕಳವು ಗೈದಿರುವುದಾಗಿ ಆ.10ರಂದು ಧಮ೯ಸ್ಥಳ ಪೊಲೀಸರಿಗೆ ದೂರು ನೀಡಲಾಗಿದೆ.
ಪದ್ಮೇಶ್ ಅವರು ಮುಂಡಾಜೆ ಗ್ರಾಮದ ಸೊಮಂತ್ತಡ್ಕ ಎಂಬಲ್ಲಿ ದಿನಸಿ ಅಂಗಡಿಯನ್ನು ನಡೆಸಿಕೊಂಡಿದ್ದು, ಆ.9 ರಂದು ತನ್ನ ವ್ಯವಹಾರದ ಬಾಬ್ತು 50 ಸಾವಿರ ರೂ ಹಣವನ್ನು ತನ್ನ ಅಂಗಡಿಯ ಡ್ರಾವರನ್ನಲ್ಲಿಟ್ಟು ಬೀಗ ಹಾಕಿ ರಾತ್ರಿ 10 ಗಂಟೆ ಸಮಯಕ್ಕೆ ಅಂಗಡಿಗೆ ಬೀಗ ಹಾಕಿ ಮನೆಗೆ ಹೋಗಿದ್ದು, ಮರುದಿನ ಆ.10 ರಂದು ಎಂದಿನಂತೆ ಬೆಳಗ್ಗೆ 6.30ಕ್ಕೆ ಅಂಗಡಿ ಬಾಗಿಲು ತೆರೆಯಲು ಬಂದಾಗ ಅಂಗಡಿಯ ಅರ್ಧ ಶೆಟರ್ ತೆರೆದಿರುವುದನ್ನು ಕಡು ಅಂಗಡಿಯನ್ನು ಪರಿಶೀಲಿಸಿದಾಗ ಡ್ರಾವರ್ ಬೀಗವನ್ನು ಕಳ್ಳರು ಯಾವುದೋ ಆಯುಧದಿಂದ ಮೀಟಿ ಅದರಲ್ಲಿದ್ದ ನಗದು ರೂ 50ಸಾವಿರವನ್ನು ಕಳ್ಳತನ ಮಾಡಿರುವುದು ಬೆಳಕಿಗೆ ಬಂದಿದೆ.
. ಈ ಬಗ್ಗೆ ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಅ.ಕ್ರ 55/2023 ಕಲಂ: 457,380 ಐಪಿಸಿ ಯಂತೆ ಪ್ರಕರಣ ದಾಖಲಾಗಿದೆ.

Related posts

ವೇಣೂರು: ಪಲ್ಗುಣಿ ನದಿಯಿಂದ ಅಕ್ರಮ ಮರಳು ಸಾಗಟ: ವೇಣೂರು ಪೊಲೀಸರಿಂದ ದಾಳಿ: ಆರೋಪಿಗಳ ಸಹಿತ ಪಿಕಪ್‌ ವಾಹನ ವಶ

Suddi Udaya

ಸುಜಾತಾ ಭಟ್ ನೀಡಿದ ನಾಪತ್ತೆ ಪ್ರಕರಣ: ಎಸ್ಐಟಿ ಕಚೇರಿಗೆ ಹಾಜರಾದ ವಸಂತಿ ಸಹೋದರ ವಿಜಯ್

Suddi Udaya

ಜಡಿ ಮಳೆ: ಸಂಪೂರ್ಣ ಕುಸಿದು ಬಿದ್ದ ಉಜಿರೆ ಹಳೆಪೇಟೆ ಎಸ್.ಎ. ರಝಾಕ್‌ರವರಿಗೆ ಸೇರಿದ ಮನೆ

Suddi Udaya

ಅಕ್ರಮ ಕೋಳಿ ಅಂಕ- ಧರ್ಮಸ್ಥಳ ಪೊಲೀಸರ ದಾಳಿ: ಏಳು ಆರೋಪಿಗಳ ಬಂಧನ

Suddi Udaya

ಪತ್ರಕರ್ತನಿಗೆ ಜೀವ ಬೆದರಿಕೆ: ಬೆಳ್ತಂಗಡಿ ತಾಲೂಕು ಪತ್ರಕರ್ತರ ಸಂಘ ಖಂಡನೆ,-ಕ್ರಮಕ್ಕೆ ಆಗ್ರಹ

Suddi Udaya

ಪಟ್ರಮೆ ಪಟ್ಟೂರಿನ ನೆರೆಕರೆಯ ಇಬ್ಬರು ಯುವತಿಯರು ಒಂದೇ ದಿನ ಮೃತ್ಯು: ಹೊಟ್ಟೆನೋವಿನಿಂದ ಅಸ್ವಸ್ಥಗೊಂಡಿದ್ದ ರಕ್ಷಿತಾ ಹಾಗೂ ಲಾವಣ್ಯ

Suddi Udaya
error: Content is protected !!