25.5 C
ಪುತ್ತೂರು, ಬೆಳ್ತಂಗಡಿ
June 8, 2026
ಅಪರಾಧ ಸುದ್ದಿ

ಸೋಮಂತ್ತಡ್ಕ:ಅಂಗಡಿಯ ಶಟರ್ ತೆರೆದು ಅಂಗಡಿಯ ಒಳಗೆ ಡ್ರವರ್ ನಲ್ಲಿ ಇದ್ದ ರೂ.50 ಸಾವಿರ ನಗದು ಕಳವು

ಬೆಳ್ತಂಗಡಿ: ಮುಂಡಾಜೆ ಗ್ರಾಮದ ನಿವಾಸಿ ಪದ್ಮೇಶ್ ಕೆ ಎಸ್ ಎಂಬವರ ಸೋಮಂತ್ತಡ್ಕದ ಅಂಗಡಿಯ ಶಟರ್ ತೆಗೆದು ಅಂಗಡಿಯ ಒಳಗೆ ಡ್ರವರ್ ನಲ್ಲಿ ಇದ್ದ ರೂ.50 ಸಾವಿರ ನಗದನ್ನು ಕಳ್ಳರು ಕಳವು ಗೈದಿರುವುದಾಗಿ ಆ.10ರಂದು ಧಮ೯ಸ್ಥಳ ಪೊಲೀಸರಿಗೆ ದೂರು ನೀಡಲಾಗಿದೆ.
ಪದ್ಮೇಶ್ ಅವರು ಮುಂಡಾಜೆ ಗ್ರಾಮದ ಸೊಮಂತ್ತಡ್ಕ ಎಂಬಲ್ಲಿ ದಿನಸಿ ಅಂಗಡಿಯನ್ನು ನಡೆಸಿಕೊಂಡಿದ್ದು, ಆ.9 ರಂದು ತನ್ನ ವ್ಯವಹಾರದ ಬಾಬ್ತು 50 ಸಾವಿರ ರೂ ಹಣವನ್ನು ತನ್ನ ಅಂಗಡಿಯ ಡ್ರಾವರನ್ನಲ್ಲಿಟ್ಟು ಬೀಗ ಹಾಕಿ ರಾತ್ರಿ 10 ಗಂಟೆ ಸಮಯಕ್ಕೆ ಅಂಗಡಿಗೆ ಬೀಗ ಹಾಕಿ ಮನೆಗೆ ಹೋಗಿದ್ದು, ಮರುದಿನ ಆ.10 ರಂದು ಎಂದಿನಂತೆ ಬೆಳಗ್ಗೆ 6.30ಕ್ಕೆ ಅಂಗಡಿ ಬಾಗಿಲು ತೆರೆಯಲು ಬಂದಾಗ ಅಂಗಡಿಯ ಅರ್ಧ ಶೆಟರ್ ತೆರೆದಿರುವುದನ್ನು ಕಡು ಅಂಗಡಿಯನ್ನು ಪರಿಶೀಲಿಸಿದಾಗ ಡ್ರಾವರ್ ಬೀಗವನ್ನು ಕಳ್ಳರು ಯಾವುದೋ ಆಯುಧದಿಂದ ಮೀಟಿ ಅದರಲ್ಲಿದ್ದ ನಗದು ರೂ 50ಸಾವಿರವನ್ನು ಕಳ್ಳತನ ಮಾಡಿರುವುದು ಬೆಳಕಿಗೆ ಬಂದಿದೆ.
. ಈ ಬಗ್ಗೆ ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಅ.ಕ್ರ 55/2023 ಕಲಂ: 457,380 ಐಪಿಸಿ ಯಂತೆ ಪ್ರಕರಣ ದಾಖಲಾಗಿದೆ.

Related posts

ನ್ಯಾಯಾಲಯದ ವಿಚಾರಣೆ ಹಾಜರಾಗದೆ 56 ವರ್ಷಗಳಿಂದ ವಿವಿಧ ಹೆಸರುಗಳಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿ: ಕುಟುಂಬವನ್ನು ಪತ್ತೆ ಹಚ್ಚಿದ ಬೆಳ್ತಂಗಡಿ ಪೊಲೀಸರು ಮರಣ ಹೊಂದಿದ್ದ ಆರೋಪಿ

Suddi Udaya

ಉಜಿರೆ: ವಾಸದ ಮನೆ ಕೆಡವಿ ಮನೆ ಸೊತ್ತು ಬೀದಿಗೆಸೆದ ವಿಲಕ್ಷಣ ಘಟನೆ: ವೀಡಿಯೋ ಮಾಡುತ್ತಿದ್ದ ಅಪ್ರಾಪ್ತ ಬಾಲಕಿಗೆ ಜೀವ ಬೆದರಿಕೆ

Suddi Udaya

ಬೆಳ್ತಂಗಡಿಯ ಯುವಕ ಗುಜರಾತ್ ನಲ್ಲಿ ಆತ್ಮಹತ್ಯೆ: ಸಂಜಯನಗರ ನಿವಾಸಿ ಪ್ರದೀಪ್ ಶೆಟ್ಟಿ

Suddi Udaya

ಪಿಲ್ಯ: ನಿನ್ನಿಕಲ್ಲಿನಲ್ಲಿ ಅಡಿಕೆ ತೋಟದಲ್ಲಿ ಅಕ್ರಮ ಮಾರಾಟಕ್ಕೆ ದಾಸ್ತಾನು ಇರಿಸಲಾಗಿದ್ದಮದ್ಯ ಪತ್ತೆ, ಅಬಕಾರಿ ಇಲಾಖೆಯಿಂದ ದಾಳಿ, ಸೊತ್ತುಗಳು ವಶಕ್ಕೆ

Suddi Udaya

ಕಣಿಯೂರು ಅಕ್ರಮ ಡೀಸೆಲ್ ಪ್ರಕರಣ: ಆರೋಪಿಗಳಿಗೆ ನಿರೀಕ್ಷಣಾ ಜಾಮೀನು ಮಂಜೂರು

Suddi Udaya

ನ್ಯಾಯಾಲಯಕ್ಕೆ ಹಾಜರಾಗದ ವಾರಂಟು ಆರೋಪಿಯನ್ನು ಬಂಧಿಸಿದ ಬೆಳ್ತಂಗಡಿ ಪೊಲೀಸರು

Suddi Udaya
error: Content is protected !!