ಅಪರಾಧ ಸುದ್ದಿ

ಸೋಮಂತ್ತಡ್ಕ:ಅಂಗಡಿಯ ಶಟರ್ ತೆರೆದು ಅಂಗಡಿಯ ಒಳಗೆ ಡ್ರವರ್ ನಲ್ಲಿ ಇದ್ದ ರೂ.50 ಸಾವಿರ ನಗದು ಕಳವು

ಬೆಳ್ತಂಗಡಿ: ಮುಂಡಾಜೆ ಗ್ರಾಮದ ನಿವಾಸಿ ಪದ್ಮೇಶ್ ಕೆ ಎಸ್ ಎಂಬವರ ಸೋಮಂತ್ತಡ್ಕದ ಅಂಗಡಿಯ ಶಟರ್ ತೆಗೆದು ಅಂಗಡಿಯ ಒಳಗೆ ಡ್ರವರ್ ನಲ್ಲಿ ಇದ್ದ ರೂ.50 ಸಾವಿರ ನಗದನ್ನು ಕಳ್ಳರು ಕಳವು ಗೈದಿರುವುದಾಗಿ ಆ.10ರಂದು ಧಮ೯ಸ್ಥಳ ಪೊಲೀಸರಿಗೆ ದೂರು ನೀಡಲಾಗಿದೆ.
ಪದ್ಮೇಶ್ ಅವರು ಮುಂಡಾಜೆ ಗ್ರಾಮದ ಸೊಮಂತ್ತಡ್ಕ ಎಂಬಲ್ಲಿ ದಿನಸಿ ಅಂಗಡಿಯನ್ನು ನಡೆಸಿಕೊಂಡಿದ್ದು, ಆ.9 ರಂದು ತನ್ನ ವ್ಯವಹಾರದ ಬಾಬ್ತು 50 ಸಾವಿರ ರೂ ಹಣವನ್ನು ತನ್ನ ಅಂಗಡಿಯ ಡ್ರಾವರನ್ನಲ್ಲಿಟ್ಟು ಬೀಗ ಹಾಕಿ ರಾತ್ರಿ 10 ಗಂಟೆ ಸಮಯಕ್ಕೆ ಅಂಗಡಿಗೆ ಬೀಗ ಹಾಕಿ ಮನೆಗೆ ಹೋಗಿದ್ದು, ಮರುದಿನ ಆ.10 ರಂದು ಎಂದಿನಂತೆ ಬೆಳಗ್ಗೆ 6.30ಕ್ಕೆ ಅಂಗಡಿ ಬಾಗಿಲು ತೆರೆಯಲು ಬಂದಾಗ ಅಂಗಡಿಯ ಅರ್ಧ ಶೆಟರ್ ತೆರೆದಿರುವುದನ್ನು ಕಡು ಅಂಗಡಿಯನ್ನು ಪರಿಶೀಲಿಸಿದಾಗ ಡ್ರಾವರ್ ಬೀಗವನ್ನು ಕಳ್ಳರು ಯಾವುದೋ ಆಯುಧದಿಂದ ಮೀಟಿ ಅದರಲ್ಲಿದ್ದ ನಗದು ರೂ 50ಸಾವಿರವನ್ನು ಕಳ್ಳತನ ಮಾಡಿರುವುದು ಬೆಳಕಿಗೆ ಬಂದಿದೆ.
. ಈ ಬಗ್ಗೆ ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಅ.ಕ್ರ 55/2023 ಕಲಂ: 457,380 ಐಪಿಸಿ ಯಂತೆ ಪ್ರಕರಣ ದಾಖಲಾಗಿದೆ.

Related posts

ಉಜಿರೆ: ಅಪ್ರಾಪ್ತ ಕಾಲೇಜು ವಿದ್ಯಾರ್ಥಿನಿಗೆ ಕಿರುಕುಳ ಆರೋಪಿ ಸಯ್ಯದ್ ಬಂಧನ; ಪೋಕ್ಸೋ ಪ್ರಕರಣ ದಾಖಲು

Suddi Udaya

ಧರ್ಮಸ್ಥಳದಲ್ಲಿ ಚಿನ್ನಾಭರಣ ಕಳ್ಳತನ ಪ್ರಕರಣ ಇಬ್ಬರ ಬಂಧನ-ರೂ.5.32 ಲಕ್ಷದ ಚಿನ್ನಾಭರಣ ವಶ

Suddi Udaya

ಧರ್ಮಸ್ಥಳ ಬುರುಡೆ ಪ್ರಕರಣ: ಚಿನ್ನಯ್ಯನಿಗೆ ಜೀವ ಬೆದರಿಕೆ ಹಿನ್ನೆಲೆ ರಕ್ಷಣೆ ನೀಡುವಂತೆ ನ್ಯಾಯಾಲಯಕ್ಕೆ ಅರ್ಜಿ

Suddi Udaya

ನೇತ್ರಾವತಿ ಕಾರ್ಯಾಚರಣೆ ಸ್ಥಳಕ್ಕೆ ಎಸ್.ಐ.ಟಿ ಮುಖ್ಯಸ್ಥ ಡಾ.ಪ್ರಣವ್ ಮೊಹಾಂತಿ ಭೇಟಿ

Suddi Udaya

ಅಕ್ರಮ ಕಸಾಯಿಖಾನೆಗೆ ಬೆಳ್ತಂಗಡಿ ಪೊಲೀಸ್ ದಾಳಿ: ದನದ ಮಾಂಸ ಹಾಗೂ ಇಬ್ಬರು ಆರೋಪಿಗಳ ಬಂಧನ

Suddi Udaya

ಸುಮಂತ್ ಅನುಮಾನಸ್ಪದ ಸಾವು ಪ್ರಕರಣ: ಸಹೋದರನ ಬ್ರೈನ್ ಮ್ಯಾಪಿಂಗ್ ಪರೀಕ್ಷೆ ಮುಕ್ತಾಯ

Suddi Udaya
error: Content is protected !!