July 23, 2026
ಅಪರಾಧ ಸುದ್ದಿ

ಸೋಮಂತ್ತಡ್ಕ:ಅಂಗಡಿಯ ಶಟರ್ ತೆರೆದು ಅಂಗಡಿಯ ಒಳಗೆ ಡ್ರವರ್ ನಲ್ಲಿ ಇದ್ದ ರೂ.50 ಸಾವಿರ ನಗದು ಕಳವು

ಬೆಳ್ತಂಗಡಿ: ಮುಂಡಾಜೆ ಗ್ರಾಮದ ನಿವಾಸಿ ಪದ್ಮೇಶ್ ಕೆ ಎಸ್ ಎಂಬವರ ಸೋಮಂತ್ತಡ್ಕದ ಅಂಗಡಿಯ ಶಟರ್ ತೆಗೆದು ಅಂಗಡಿಯ ಒಳಗೆ ಡ್ರವರ್ ನಲ್ಲಿ ಇದ್ದ ರೂ.50 ಸಾವಿರ ನಗದನ್ನು ಕಳ್ಳರು ಕಳವು ಗೈದಿರುವುದಾಗಿ ಆ.10ರಂದು ಧಮ೯ಸ್ಥಳ ಪೊಲೀಸರಿಗೆ ದೂರು ನೀಡಲಾಗಿದೆ.
ಪದ್ಮೇಶ್ ಅವರು ಮುಂಡಾಜೆ ಗ್ರಾಮದ ಸೊಮಂತ್ತಡ್ಕ ಎಂಬಲ್ಲಿ ದಿನಸಿ ಅಂಗಡಿಯನ್ನು ನಡೆಸಿಕೊಂಡಿದ್ದು, ಆ.9 ರಂದು ತನ್ನ ವ್ಯವಹಾರದ ಬಾಬ್ತು 50 ಸಾವಿರ ರೂ ಹಣವನ್ನು ತನ್ನ ಅಂಗಡಿಯ ಡ್ರಾವರನ್ನಲ್ಲಿಟ್ಟು ಬೀಗ ಹಾಕಿ ರಾತ್ರಿ 10 ಗಂಟೆ ಸಮಯಕ್ಕೆ ಅಂಗಡಿಗೆ ಬೀಗ ಹಾಕಿ ಮನೆಗೆ ಹೋಗಿದ್ದು, ಮರುದಿನ ಆ.10 ರಂದು ಎಂದಿನಂತೆ ಬೆಳಗ್ಗೆ 6.30ಕ್ಕೆ ಅಂಗಡಿ ಬಾಗಿಲು ತೆರೆಯಲು ಬಂದಾಗ ಅಂಗಡಿಯ ಅರ್ಧ ಶೆಟರ್ ತೆರೆದಿರುವುದನ್ನು ಕಡು ಅಂಗಡಿಯನ್ನು ಪರಿಶೀಲಿಸಿದಾಗ ಡ್ರಾವರ್ ಬೀಗವನ್ನು ಕಳ್ಳರು ಯಾವುದೋ ಆಯುಧದಿಂದ ಮೀಟಿ ಅದರಲ್ಲಿದ್ದ ನಗದು ರೂ 50ಸಾವಿರವನ್ನು ಕಳ್ಳತನ ಮಾಡಿರುವುದು ಬೆಳಕಿಗೆ ಬಂದಿದೆ.
. ಈ ಬಗ್ಗೆ ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಅ.ಕ್ರ 55/2023 ಕಲಂ: 457,380 ಐಪಿಸಿ ಯಂತೆ ಪ್ರಕರಣ ದಾಖಲಾಗಿದೆ.

Related posts

ಯುಟ್ಯೂಬರ್ ಸಮೀರ್ ಎಂಡಿ ವಿರುದ್ದ ಧರ್ಮಸ್ಥಳ ಠಾಣೆಯಲ್ಲಿ ಪ್ರಕರಣ‌ ದಾಖಲು

Suddi Udaya

ಅಕ್ರಮ ಜೂಜಾಟದ ಮೇಲೆ ವೇಣೂರು ಪೊಲೀಸರ ದಾಳಿ: 17 ಮಂದಿ ಆರೋಪಿಗಳ ಬಂಧನ

Suddi Udaya

ಧರ್ಮಸ್ಥಳ: ವೈದ್ಯಕೀಯ ವಿದ್ಯಾರ್ಥಿನಿ ಅನನ್ಯ ಭಟ್ ನಾಪತ್ತೆ ಪ್ರಕರಣಕ್ಕೆ ಮರು ಜೀವ ಎಸ್ಪಿಗೆ ದೂರು ನೀಡಿದ ಆಕೆಯ ತಾಯಿ

Suddi Udaya

ಬೆಳ್ತಂಗಡಿ : ಚೆಕ್ ಬೌನ್ಸ್ ಪ್ರಕರಣದಲ್ಲಿ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಹಾಸನದಲ್ಲಿ ಬಂಧಿಸಿದ ವೇಣೂರು ಪೊಲೀಸರು

Suddi Udaya

ಯೂಟ್ಯೂಬರ್ಸ್ ಹಾಗೂ ಖಾಸಗಿ ಚಾನೆಲ್ ವರದಿಗಾರನ ಮೇಲೆ ಹಲ್ಲೆ ಆರೋಪ: ಸ್ಥಳದಲ್ಲಿ ಜನ ಜಮಾಯಿಸಿ ಉದ್ವಿಗ್ನ ಸ್ಥಿತಿ- ಪೊಲೀಸರಿಂದ ಲಾಠಿ ಚಾರ್ಜ್. ಸ್ಥಳದಲ್ಲಿ ಪರಿಸ್ಥಿತಿ ಪ್ರಸ್ತುತ ಶಾಂತವಾಗಿದ್ದು, ಪ್ರಕರಣ ದಾಖಲಿಸಲಾಗುತ್ತಿದೆ: ಎಸ್.ಪಿ

Suddi Udaya

ಪುದುವೆಟ್ಟು: ಮಿಯಾರು ನಿವಾಸಿ ಶೇಖರ್ ಗೌಡ ವಿಷ ಸೇವಿಸಿ ಆತ್ಮಹತ್ಯೆ

Suddi Udaya
error: Content is protected !!