23.7 C
ಪುತ್ತೂರು, ಬೆಳ್ತಂಗಡಿ
April 24, 2026
ಅಪರಾಧ ಸುದ್ದಿ

ಸೋಮಂತ್ತಡ್ಕ:ಅಂಗಡಿಯ ಶಟರ್ ತೆರೆದು ಅಂಗಡಿಯ ಒಳಗೆ ಡ್ರವರ್ ನಲ್ಲಿ ಇದ್ದ ರೂ.50 ಸಾವಿರ ನಗದು ಕಳವು

ಬೆಳ್ತಂಗಡಿ: ಮುಂಡಾಜೆ ಗ್ರಾಮದ ನಿವಾಸಿ ಪದ್ಮೇಶ್ ಕೆ ಎಸ್ ಎಂಬವರ ಸೋಮಂತ್ತಡ್ಕದ ಅಂಗಡಿಯ ಶಟರ್ ತೆಗೆದು ಅಂಗಡಿಯ ಒಳಗೆ ಡ್ರವರ್ ನಲ್ಲಿ ಇದ್ದ ರೂ.50 ಸಾವಿರ ನಗದನ್ನು ಕಳ್ಳರು ಕಳವು ಗೈದಿರುವುದಾಗಿ ಆ.10ರಂದು ಧಮ೯ಸ್ಥಳ ಪೊಲೀಸರಿಗೆ ದೂರು ನೀಡಲಾಗಿದೆ.
ಪದ್ಮೇಶ್ ಅವರು ಮುಂಡಾಜೆ ಗ್ರಾಮದ ಸೊಮಂತ್ತಡ್ಕ ಎಂಬಲ್ಲಿ ದಿನಸಿ ಅಂಗಡಿಯನ್ನು ನಡೆಸಿಕೊಂಡಿದ್ದು, ಆ.9 ರಂದು ತನ್ನ ವ್ಯವಹಾರದ ಬಾಬ್ತು 50 ಸಾವಿರ ರೂ ಹಣವನ್ನು ತನ್ನ ಅಂಗಡಿಯ ಡ್ರಾವರನ್ನಲ್ಲಿಟ್ಟು ಬೀಗ ಹಾಕಿ ರಾತ್ರಿ 10 ಗಂಟೆ ಸಮಯಕ್ಕೆ ಅಂಗಡಿಗೆ ಬೀಗ ಹಾಕಿ ಮನೆಗೆ ಹೋಗಿದ್ದು, ಮರುದಿನ ಆ.10 ರಂದು ಎಂದಿನಂತೆ ಬೆಳಗ್ಗೆ 6.30ಕ್ಕೆ ಅಂಗಡಿ ಬಾಗಿಲು ತೆರೆಯಲು ಬಂದಾಗ ಅಂಗಡಿಯ ಅರ್ಧ ಶೆಟರ್ ತೆರೆದಿರುವುದನ್ನು ಕಡು ಅಂಗಡಿಯನ್ನು ಪರಿಶೀಲಿಸಿದಾಗ ಡ್ರಾವರ್ ಬೀಗವನ್ನು ಕಳ್ಳರು ಯಾವುದೋ ಆಯುಧದಿಂದ ಮೀಟಿ ಅದರಲ್ಲಿದ್ದ ನಗದು ರೂ 50ಸಾವಿರವನ್ನು ಕಳ್ಳತನ ಮಾಡಿರುವುದು ಬೆಳಕಿಗೆ ಬಂದಿದೆ.
. ಈ ಬಗ್ಗೆ ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಅ.ಕ್ರ 55/2023 ಕಲಂ: 457,380 ಐಪಿಸಿ ಯಂತೆ ಪ್ರಕರಣ ದಾಖಲಾಗಿದೆ.

Related posts

ಪುದುವೆಟ್ಟಿನ ಮಹಿಳೆ ಪುಣ್ಯಶ್ರೀ ಪುತ್ತೂರು ತಾಯಿ ಮನೆಯಲ್ಲಿ ಬಾವಿಗೆ ಬಿದ್ದು ಮೃತ್ಯು

Suddi Udaya

ಬಜಿರೆಯಲ್ಲಿ ಎರಡು ಕುಟುಂಬಗಳ ನಡುವೆ ಜಾಗದ ಪಾಲಿನ ವಿಷಯದಲ್ಲಿ ಹೊಡೆದಾಟ: ಪರಸ್ಪರ ಆರೋಪಿಸಿ ಪೊಲೀಸರಿಗೆ ದೂರು

Suddi Udaya

ಕೊಕ್ಕಡದ ಅಂಗಡಿಯಿಂದ ರೂ.2 ಲಕ್ಷ ಹಣ ಕಳ್ಳತನ ಪ್ರಕರಣ: ಆರೋಪಿಗಳಿಬ್ಬರ ಬಂಧನ

Suddi Udaya

ವೇಣೂರು: ಅಕ್ರಮ ಮರಳು ಸಾಗಟ: ರೂ.6 ಸಾವಿರ ಮೌಲ್ಯದ ಮರಳು ವಶಪಡಿಸಿಕೊಂಡ ವೇಣೂರು ಪೊಲೀಸರು

Suddi Udaya

ಅಕ್ರಮ ಮದ್ಯ ಮಾರಾಟ ಅಡ್ಡೆಗೆ ಧರ್ಮಸ್ಥಳ ಪೊಲೀಸರ ದಾಳಿ : ಆರೋಪಿಯ ಬಂಧನ

Suddi Udaya

ಕೆದ್ದುನಲ್ಲಿ ಕಾರು ಡಿಕ್ಕಿ:ಬೈಕ್ ಸವಾರಿಬ್ಬರಿಗೆ ಗಾಯ

Suddi Udaya
error: Content is protected !!