ಅಪರಾಧ ಸುದ್ದಿ

ಸೋಮಂತ್ತಡ್ಕ:ಅಂಗಡಿಯ ಶಟರ್ ತೆರೆದು ಅಂಗಡಿಯ ಒಳಗೆ ಡ್ರವರ್ ನಲ್ಲಿ ಇದ್ದ ರೂ.50 ಸಾವಿರ ನಗದು ಕಳವು

ಬೆಳ್ತಂಗಡಿ: ಮುಂಡಾಜೆ ಗ್ರಾಮದ ನಿವಾಸಿ ಪದ್ಮೇಶ್ ಕೆ ಎಸ್ ಎಂಬವರ ಸೋಮಂತ್ತಡ್ಕದ ಅಂಗಡಿಯ ಶಟರ್ ತೆಗೆದು ಅಂಗಡಿಯ ಒಳಗೆ ಡ್ರವರ್ ನಲ್ಲಿ ಇದ್ದ ರೂ.50 ಸಾವಿರ ನಗದನ್ನು ಕಳ್ಳರು ಕಳವು ಗೈದಿರುವುದಾಗಿ ಆ.10ರಂದು ಧಮ೯ಸ್ಥಳ ಪೊಲೀಸರಿಗೆ ದೂರು ನೀಡಲಾಗಿದೆ.
ಪದ್ಮೇಶ್ ಅವರು ಮುಂಡಾಜೆ ಗ್ರಾಮದ ಸೊಮಂತ್ತಡ್ಕ ಎಂಬಲ್ಲಿ ದಿನಸಿ ಅಂಗಡಿಯನ್ನು ನಡೆಸಿಕೊಂಡಿದ್ದು, ಆ.9 ರಂದು ತನ್ನ ವ್ಯವಹಾರದ ಬಾಬ್ತು 50 ಸಾವಿರ ರೂ ಹಣವನ್ನು ತನ್ನ ಅಂಗಡಿಯ ಡ್ರಾವರನ್ನಲ್ಲಿಟ್ಟು ಬೀಗ ಹಾಕಿ ರಾತ್ರಿ 10 ಗಂಟೆ ಸಮಯಕ್ಕೆ ಅಂಗಡಿಗೆ ಬೀಗ ಹಾಕಿ ಮನೆಗೆ ಹೋಗಿದ್ದು, ಮರುದಿನ ಆ.10 ರಂದು ಎಂದಿನಂತೆ ಬೆಳಗ್ಗೆ 6.30ಕ್ಕೆ ಅಂಗಡಿ ಬಾಗಿಲು ತೆರೆಯಲು ಬಂದಾಗ ಅಂಗಡಿಯ ಅರ್ಧ ಶೆಟರ್ ತೆರೆದಿರುವುದನ್ನು ಕಡು ಅಂಗಡಿಯನ್ನು ಪರಿಶೀಲಿಸಿದಾಗ ಡ್ರಾವರ್ ಬೀಗವನ್ನು ಕಳ್ಳರು ಯಾವುದೋ ಆಯುಧದಿಂದ ಮೀಟಿ ಅದರಲ್ಲಿದ್ದ ನಗದು ರೂ 50ಸಾವಿರವನ್ನು ಕಳ್ಳತನ ಮಾಡಿರುವುದು ಬೆಳಕಿಗೆ ಬಂದಿದೆ.
. ಈ ಬಗ್ಗೆ ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಅ.ಕ್ರ 55/2023 ಕಲಂ: 457,380 ಐಪಿಸಿ ಯಂತೆ ಪ್ರಕರಣ ದಾಖಲಾಗಿದೆ.

Related posts

ಚಾರ್ಮಾಡಿ ಮೃತ್ಯುಂಜಯ ನದಿ ಕಿನಾರೆಯಲ್ಲಿ ದನದ ತ್ಯಾಜ್ಯ ಎಸೆದ ಪ್ರಕರಣ: ಇಬ್ಬರು ಆರೋಪಿಗಳ ಬಂಧನ

Suddi Udaya

ಸುಜಾತಾ ಭಟ್ ನೀಡಿದ ನಾಪತ್ತೆ ಪ್ರಕರಣ: ಎಸ್ಐಟಿ ಕಚೇರಿಗೆ ಹಾಜರಾದ ವಸಂತಿ ಸಹೋದರ ವಿಜಯ್

Suddi Udaya

ಪತಿಯ ವರದಕ್ಷಿಣೆ ಕಿರುಕಳಕ್ಕೆ ಮನನೊಂದು ಪತ್ನಿ ಆತ್ಮಹತ್ಯೆ-ಪತಿ ಅಂಧರ್

Suddi Udaya

ಲಾಯಿಲ ಕಕ್ಕೇನಾದ ಯುವಕ ಭರತ್ ಕುಮಾರ್ ನಾಪತ್ತೆ: ಪೈಂಟಿಂಗ್ ಕೆಲಸ ಮಾಡುತ್ತಿದ್ದ ಯುವಕ : ಪತ್ತೆಗಾಗಿ ಬೆಳ್ತಂಗಡಿ ಪೋಲಿಸ್ ಠಾಣೆಗೆ ದೂರು

Suddi Udaya

ಯಕ್ಷಗಾನ ಕಲಾವಿದನ ತಾಯಿಗೆ ಅವಾಚ್ಯ ಶಬ್ದಗಳಿಂದ ನಿಂದನೆ ಪ್ರಕರಣ: ಮಹೇಶ್‌ ಶೆಟ್ಟಿ ತಿಮರೋಡಿಗೆ ಷರತ್ತು ಬದ್ಧ ನಿರೀಕ್ಷಣಾ ಜಾಮೀನು

Suddi Udaya

ಹಲವಾರು ಮೃತದೇಹ ಹೂತು ಹಾಕಿದ ದೂರು ಪ್ರಕರಣ: ಧರ್ಮಸ್ಥಳ ಗ್ರಾ.ಪಂ.ಯಿಂದ ದಾಖಲೆ ಪಡೆದ ಎಸ್ ಐಟಿ

Suddi Udaya
error: Content is protected !!