22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಆ.19: ಧರ್ಮಸ್ಥಳದಲ್ಲಿ ನೈತಿಕ ಮೌಲ್ಯಾಧಾರಿತ ಪುಸ್ತಕಗಳ ಲೋಕಾರ್ಪಣೆ, ರಾಜ್ಯಮಟ್ಟದ ಅಂಚೆ-ಕುಂಚ ಸ್ಪರ್ಧಾ ವಿಜೇತರಿಗೆ ಪುರಸ್ಕಾರ ಸಮಾರಂಭ

ಉಜಿರೆ: ಧರ್ಮಸ್ಥಳದ ಶಾಂತಿವನ ಟ್ರಸ್ಟ್ ಆಶ್ರಯದಲ್ಲಿ ಶಾಲೆಗಳಲ್ಲಿ ಯೋಗ ಮತ್ತು ನೈತಿಕ ಶಿಕ್ಷಣ ಯೋಜನೆಯಡಿ ಪ್ರಕಟಿಸಲಾದ “ಜ್ಞಾನಶರಧಿ” ಮತ್ತು ಜ್ಞಾನವಾರಿಧಿ” ಎಂಬ ನೈತಿಕ ಮೌಲ್ಯಾಧಾರಿತ ಪುಸ್ತಕಗಳನ್ನು ಆ.19 ರಂದು ಬೆಳಿಗ್ಗೆ 11 ಗಂಟೆಗೆ ಧರ್ಮಸ್ಥಳದಲ್ಲಿ ಮಹೋತ್ಸವ ಸಭಾಭವನದಲ್ಲಿ ಮೈಸೂರಿನ ಖ್ಯಾತ ವಾಗ್ಮಿ ಪ್ರೊ. ಕೃಷ್ಣೇಗೌಡ ಲೋಕಾರ್ಪಣೆ ಮಾಡಲಿದ್ದಾರೆ.

ಖ್ಯಾತ ಚಲನಚಿತ್ರ ನಟ ಸಿಹಿಕಹಿ ಚಂದ್ರು ರಾಜ್ಯಮಟ್ಟದ ಅಂಚೆ-ಕುಂಚ ಸ್ಪರ್ಧಾ ವಿಜೇತರಿಗೆ ಪುರಸ್ಕಾರ ವಿತರಿಸಲಿದ್ದಾರೆ ಎಂದು ಯೋಗ ಮತ್ತು ನೈತಿಕ ಶಿಕ್ಷಣ ಯೋಜನೆಯ ನಿರ್ದೇಶಕ ಡಾ. ಐ. ಶಶಿಕಾಂತ್ ಜೈನ್ ತಿಳಿಸಿದ್ದಾರೆ.

ರಾಜ್ಯ ಶಿಕ್ಷಣ, ಸಂಶೋಧನೆ ಮತ್ತು ತರಬೇತಿ ಇಲಾಖೆಯ ನಿರ್ದೇಶಕಿ ಸುಮಂಗಲ ಶುಭಾಶಂಸನೆ ಮಾಡುವರು.
ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರು ಅಧ್ಯಕ್ಷತೆ ವಹಿಸುವರು.

ಕುಂಚ-ಗಾನ-ನೃತ್ಯ ವೈಭವ: ಸಂಗೀತ ವಿದುಷಿ ಶ್ರೇಯ ಕೊಳತ್ತಾಯರ ಸುಶ್ರಾವ್ಯ ಗಾಯನಕ್ಕೆ ದಾವಣಗೆರೆಯ ಚಿತ್ರಕಲಾವಿದ ಬಾಬಲೇಶ್ವರ ಕುಂಚದಲ್ಲಿ ಚಿತ್ರಕಲೆ ರೂಪಿಸಿದರೆ ಮಂಗಳೂರಿನ ಸನಾತನ ನಾಟ್ಯಾಲಯದ ವಿದುಷಿ ಶಾರದಾಮಣಿಶೇಖರ್ ನೃತ್ಯ ಪ್ರದರ್ಶನ ನೀಡಲಿದ್ದಾರೆ.

Related posts

ಜೆಸಿಐ ವಲಯ-15ರ ಅಭಿವೃದ್ಧಿ ಮತ್ತು ಬೆಳವಣಿಗೆ ಹಾಗೂ ವ್ಯವಹಾರ ಸಮ್ಮೇಳನದಲ್ಲಿ ಸಂತೋಷ್ ಪಿ ಕೋಟ್ಯಾನ್ ಬಳಂಜ ರವರಿಗೆ ಪ್ರತಿಷ್ಠಿತ “ಸಾಧನಾಶ್ರೀ ಪುರಸ್ಕಾರ”

Suddi Udaya

ಕಡಿರುದ್ಯಾವರ: ಕಾನರ್ಪ ಕುಮೇರು ನಿವಾಸಿ ಕೃಷಿಕ ಡೀಕಯ್ಯ ಗೌಡ ನಿಧನ

Suddi Udaya

ಅಳದಂಗಡಿ ಹಾಲು ಉತ್ಪಾದಕರ ಸಹಕಾರಿ ಸಂಘದ ವಾರ್ಷಿಕ ಸಾಮಾನ್ಯ ಸಭೆ: ವರದಿ ಸಾಲಿನಲ್ಲಿ 4,13,15,569 ವ್ಯವಹಾರ,13,49,980 ನಿವ್ವಳ ಲಾಭ. ಸದಸ್ಯರಿಗೆ 65% ಬೋನಸ್ ಹಾಗೂ 25% ಡಿವಿಡೆಂಡ್ ಘೋಷಣೆ: ದ್ವೀತಿಯ ಪಿಯುಸಿ ಮತ್ತು ಎಸ್.ಎಸ್.ಎಲ್.ಸಿ ಯಲ್ಲಿ ಉತ್ತಮ ಅಂಕ ಗಳಿಸಿದ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ

Suddi Udaya

ಕಕ್ಯಪದವು ಎಲ್‌ಸಿಆರ್ ವಿದ್ಯಾಸಂಸ್ಥೆ: ಕಾಲೇಜು ವಿಭಾಗದಲ್ಲಿ ವಾಣಿಜ್ಯ ಚಟುವಟಕೆ

Suddi Udaya

ಮಂಜು ಇಂಡೇನ್ ಗ್ಯಾಸ್‌ನಿಂದ ಅಸಮರ್ಪಕ ಗ್ಯಾಸ್ ವಿತರಣೆ: ಜಿಲ್ಲಾಧಿಕಾರಿ, ಬೆಳ್ತಂಗಡಿ ಪೊಲೀಸರಿಗೆ ಗ್ರಾಹಕರಿಂದ ದೂರು.

Suddi Udaya

ಮಹೇಶ್ ಶೆಟ್ಟಿ ತಿಮರೋಡಿ ಗಡಿಪಾರು ಆದೇಶ: ಕಾಯ್ದಿರಿಸಿದ ತೀರ್ಪು-ಏ.29ರವರೆಗೆ ಕ್ರಮ ಕೈಗೊಳ್ಳದಂತೆ ಹೈಕೋರ್ಟ್ ಆದೇಶ

Suddi Udaya
error: Content is protected !!