23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಆ.12: ಉಜಿರೆ ಎಸ್.ಡಿ.ಎಂ. ಕಾಲೇಜಿನಲ್ಲಿ ಎಂಜಿಐಆರ್ ಐ ತಂತ್ರಜ್ಞಾನ ಆಧಾರಿತ ಉದ್ಯಮಶೀಲತೆ ಅಭಿವೃದ್ಧಿಯ ಸಾಧ್ಯತೆಗಳ ಕುರಿತು ರಾಷ್ಟ್ರಮಟ್ಟದ ಜಾಗೃತಿ ಕಾರ್ಯಾಗಾರ

ಉಜಿರೆ: ಮಹಾರಾಷ್ಟ್ರದ ಮಹಾತ್ಮ ಗಾಂಧಿ ಇನ್ಸ್ಟಿಟ್ಯೂಟ್ ಫಾರ್ ರೂರಲ್ ಇಂಡಸ್ಟ್ರಿಯಲೈಸೇಶನ್ (ಎಂ ಜಿ ಐ ಆರ್ ಐ) ಸಂಸ್ಥೆಯ ವತಿಯಿಂದ ಉಜಿರೆಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಕಾಲೇಜಿನ ಎಸ್.ಡಿ.ಎಂ.-ರೋಟರಿ ಕರಿಯರ್ ಗೈಡೆನ್ಸ್ ಮತ್ತು ಪ್ಲೇಸ್ಮೆಂಟ್ ಸೆಂಟರ್ ಹಾಗೂ ಎಸ್.ಡಿ.ಎಂ. ತಾಂತ್ರಿಕ ಮಹಾವಿದ್ಯಾಲಯ (ಎಸ್.ಡಿ.ಎಂ.ಐ.ಟಿ., ಉಜಿರೆ) ಸಹಯೋಗದಲ್ಲಿ ‘ಎಂ ಜಿ ಐ ಆರ್ ಐ ತಂತ್ರಜ್ಞಾನ ಆಧಾರಿತ ಉದ್ಯಮಶೀಲತೆ ಅಭಿವೃದ್ಧಿಯ ಸಾಧ್ಯತೆಗಳು’ ಕುರಿತು ರಾಷ್ಟ್ರಮಟ್ಟದ ಜಾಗೃತಿ ಕಾರ್ಯಾಗಾರವು ಉಜಿರೆ ಎಸ್.ಡಿ.ಎಂ. ಕಾಲೇಜಿನ ಸೆಮಿನಾರ್ ಹಾಲ್ ನಲ್ಲಿ ಆ.12ರಂದು ನಡೆಯಲಿದೆ.

ಬೆಳ್ತಂಗಡಿಯ ‘ಸಿರಿ’ ಗ್ರಾಮೋದ್ಯೋಗ ಸಂಸ್ಥೆಯ ವ್ಯವಸ್ಥಾಪಕ ನಿರ್ದೇಶಕ ಜನಾರ್ದನ್ ಕೆ.ಎನ್. ಅವರು ಬೆಳಗ್ಗೆ 10ಕ್ಕೆ ಉದ್ಘಾಟನೆ ನೆರವೇರಿಸಲಿದ್ದಾರೆ. ಎಂ.ಜಿ.ಐ.ಆರ್.ಐ. ಸಂಸ್ಥೆಯ ನಿರ್ದೇಶಕ ಡಾ. ಅಶುತೋಷ್ ಎ. ಮುರ್ಕುಟೆ ಹಾಗೂ ಎಸ್.ಡಿ.ಎಂ. ಶಿಕ್ಷಣ ಸಂಸ್ಥೆಗಳ ಕಾರ್ಯದರ್ಶಿ ಡಾ. ಸತೀಶ್ಚಂದ್ರ ಎಸ್. ಮುಖ್ಯ ಅತಿಥಿಗಳಾಗಿ ಪಾಲ್ಗೊಳ್ಳಲಿದ್ದು, ಉಜಿರೆ ಎಸ್.ಡಿ.ಎಂ. ಕಾಲೇಜಿನ ಪ್ರಾಂಶುಪಾಲ ಡಾ. ಬಿ.ಎ. ಕುಮಾರ ಹೆಗ್ಡೆ ಅಧ್ಯಕ್ಷತೆ ವಹಿಸಲಿದ್ದಾರೆ.

ಸಂಜೆ 4 ಗಂಟೆಗೆ ಸಮಾರೋಪ ಸಮಾರಂಭದಲ್ಲಿ ಉಜಿರೆಯ ರುಡ್ ಸೆಟ್ ಸಂಸ್ಥೆಯ ಕಾರ್ಯನಿರ್ವಾಹಕ ನಿರ್ದೇಶಕ ಗಿರಿಧರ್ ಕಲ್ಲಾಪುರ್, ಎಂ.ಜಿ.ಐ.ಆರ್.ಐ. ಸಂಸ್ಥೆಯ ಪ್ರಧಾನ ವೈಜ್ಞಾನಿಕ ಅಧಿಕಾರಿ (ಖಾದಿ ಮತ್ತು ಜವಳಿ) ಎಚ್.ಡಿ. ಸಿನ್ನೂರ್ ಹಾಗೂ ಉಜಿರೆ ಎಸ್.ಡಿ.ಎಂ.ಐ.ಟಿ. ಪ್ರಾಂಶುಪಾಲ ಡಾ. ಅಶೋಕ್ ಕುಮಾರ್ ಟಿ. ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದು, ಎಸ್.ಡಿ.ಎಂ. ಕಾಲೇಜಿನ ಪ್ರಾಂಶುಪಾಲ ಡಾ. ಬಿ.ಎ. ಕುಮಾರ ಹೆಗ್ಡೆ ಅಧ್ಯಕ್ಷತೆ ವಹಿಸಲಿದ್ದಾರೆಂದು ಪ್ರಕಟಣೆಯಲ್ಲಿ ತಿಳಿದಿದ್ದಾರೆ.

Related posts

ಬೆಳ್ತಂಗಡಿ ಬಿಜೆಪಿ ಕಛೇರಿಯಲ್ಲಿ ಸುಶಾಸನ‌ ದಿನ ಆಚರಣೆ

Suddi Udaya

ಹೊಸಪಟ್ಣ: ಶ್ರೀ ಸತ್ಯನಾರಾಯಣ ರಂಗ ಮಂದಿರದ ವಠಾರದಲ್ಲಿ ಮೊಸರು ಕುಡಿಕೆ ಉತ್ಸವ

Suddi Udaya

ಇಚ್ಚೂರು ಶ್ರೀ ಬಾಲಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಷಷ್ಠಿಯ ಪ್ರಯುಕ್ತ ವಿಶೇಷ ಭಜನಾ ಕಾರ್ಯಕ್ರಮ

Suddi Udaya

ಬೆಳ್ತಂಗಡಿಯ ‘ಆಲ್ಫಾ ಕೋಟ್’ ನಿವಾಸಿ ಮೇರಿ ಮಾಡ್ತಾ ನಿಧನ

Suddi Udaya

ಶ್ರೀ ಕ್ಷೇತ್ರ ಗೆಜ್ಜೆಗಿರಿಗೆ ಮಡಂತ್ಯಾರು ಬಿಲ್ಲವ ಸಂಘದ ಗೌರವಾಧ್ಯಕ್ಷ ಯೋಗೀಶ್ ಪೂಜಾರಿ ಕಡ್ತಿಲ ಹಾಗೂ ಸದಸ್ಯರು ಭೇಟಿ

Suddi Udaya

ವೇಣೂರು ಶ್ರೀಗು.ಸ್ವಾ.ಸೇ. ಸಂಘ, ಯುವವಾಹಿನಿ ವೇಣೂರು ಘಟಕ ಹಾಗೂ ಬಂಗೇರ ಅಭಿಮಾನಿ ಬಳಗ ವತಿಯಿಂದ ಮಾಜಿ ಶಾಸಕ ಕೆ ವಸಂತ ಬಂಗೇರಿಗೆ ನುಡಿನಮನ

Suddi Udaya
error: Content is protected !!