April 1, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿಸಾಧಕರು

ಕಳೆಂಜ ಗ್ರಾಮ ಪಂಚಾಯತ್ ವತಿಯಿಂದ ನಿವೃತ್ತ ಸೈನಿಕ ಕೆ. ಮಹಾಬಲ ಕಾಂತ್ರೇಲು ಮತ್ತು ಹಿರಿಯ ಪಶು ವೈದ್ಯ ಯಾದವ ಗೌಡ ರವರಿಗೆ ಸನ್ಮಾನ

ಕಳೆಂಜ: ಸುದೀರ್ಘ 39 ವರ್ಷಗಳ ಕಾಲ ಸೇನೆಯಲ್ಲಿ ಸೇವೆ ಸಲ್ಲಿಸಿ ನಿವೃತ್ತರಾದ ಮಹಾಬಲ ಕಾಂತ್ರೇಲು ಮತ್ತು 31 ವರ್ಷಗಳ ಕಾಲ ಹಿರಿಯ ಪಶು ವೈದ್ಯ ಪರೀಕ್ಷಕರಾಗಿ ಸೇವೆ ಸಲ್ಲಿಸಿದ್ದ ಯಾದವ ಗೌಡರವರನ್ನು ಕಳೆಂಜ ಗ್ರಾ.ಪಂ. ವತಿಯಿಂದ ಆ.10ರಂದು ಗೌರವಿಸಲಾಯಿತು.

ಮಹಾಬಲ ಕಾಂತ್ರೇಲು ಅವರು 1983ರಂದು ಸೇವೆಗೆ ಸೇರಿದ್ದು, ಸಿಪಾಯಿ, ಲ್ಯಾನ್ಟ್ ನಾಯಕ್, ನಾಯಕ್ , ಹವಾಲ್ದಾರ, ನಾಯಕ್ಸ್ ಸುಬೇದಾರ್ ರಾಗಿ ಡೆಲ್ಲಿ, ರಾಜಸ್ಥಾನ್, ಪಂಜಾಬ್, ಹರಿಯಾಣ, ಗುಜರಾತ್, ಜಮ್ಮು-ಕಾಶ್ಮೀರ್, ಲಡಾಖ್ ಬೆಂಗಳೂರು ಹೀಗೆ ಹಲವು ಕಡೆಗಳಲ್ಲಿ ಸೇವೆ ಸಲ್ಲಿಸಿ ಜೂ.30ರಂದು ಸುಬೇದಾರ್ ರಾಗಿ ನಿವೃತ್ತರಾದರು.

ಇನ್ನೋರ್ವ ಮುಖ್ಯ ವ್ಯಕ್ತಿ ಯಾದವ ಗೌಡ ರವರು 31 ವರ್ಷ 6 ತಿಂಗಳು ಗಳ ಕಾಲ ಸುದೀರ್ಘ ಸೇವೆ ಸಲ್ಲಿಸಿದರು. ಇವರು ವೆಟರಿನರಿ ಡಿಪ್ಲೋಮ ವಿದ್ಯಾಭ್ಯಾಸ ಮುಗಿಸಿ ಕಿರಿಯ ಪಶು ವೈದ್ಯ ಪರೀಕ್ಷಕರು, ಹಿರಿಯ ಪಶು ವೈದ್ಯ ಪರೀಕ್ಷಕರಾಗಿ ಜಿಲ್ಲಾ ಉಪ ನಿರ್ದೇಶಕರ ಕಛೇರಿ ಮಂಗಳೂರು, ಪಶು ವೈದ್ಯ ಆಸ್ಪತ್ರೆ ಮಂಗಳೂರು, ವಿ.ಹೆಚ್. ಧರ್ಮಸ್ಥಳ, ಪಿ.ವಿ.ಸಿ ಪ್ರಾಥಮಿಕ ಪಶು ಚಿಕಿತ್ಸಾ ಕೇಂದ್ರ ಅರಸಿನಮಕ್ಕಿ-ಕಳೆಂಜ ಗಳಲ್ಲಿ ಸೇವೆ ಸಲ್ಲಿಸಿ ನಿವೃತ್ತರಾದರು.

ಈ ಸಂದರ್ಭದಲ್ಲಿ ಅಧ್ಯಕ್ಷೆ ಗಿರಿಜಾ, ಉಪಾಧ್ಯಕ್ಷ ವಿಶ್ವನಾಥ ಗೌಡ, ಪಂ. ಅಭಿವೃದ್ಧಿ ಅಧಿಕಾರಿ ಹೊನ್ನಮ್ಮ, ಕಾರ್ಯದರ್ಶಿ ಹೊನ್ನಪ್ಪ, ಸದಸ್ಯರು ಹಾಗೂ ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು. ಪಂಚಾಯತ್ ಸದಸ್ಯ ಗಂಗಾಧರ್ ಕೆ. ಕಾರ್ಯಕ್ರಮ ನಿರೂಪಿಸಿದರು.

Related posts

ಶ್ರೀ ಕ್ಷೇತ್ರ ಚಂದ್ರಪುರ ಶಿಶಿಲಕ್ಕೆ ಪಂಚಕಲ್ಯಾಣಗೊಂಡ 24 ತೀರ್ಥಂಕರರ ಜಿನ ಬಿಂಬಗಳಿಗೆ ಅಭಿಷೇಕ

Suddi Udaya

ನ.1: ಕೊಕ್ಕಡ ಉಪ್ಪಾರಪಳಿಕೆಯಲ್ಲಿ ದೀಪಾವಳಿ ಪ್ರಯುಕ್ತ ಗೋ ಪೂಜೆ ಹಾಗೂ ದೋಸೆ ಹಬ್ಬ

Suddi Udaya

ಅ.29: ಕಲ್ಲೇರಿ ಶಾಖಾ ವ್ಯಾಪ್ತಿಯಲ್ಲಿ ವಿದ್ಯುತ್ ನಿಲುಗಡೆ

Suddi Udaya

ಮಾಲಾಡಿ: ವಿಶ್ವಕರ್ಮ ಯೋಜನೆಯ ಫಲಾನುಭವಿಗಳಿಗೆ ಆರೋಗ್ಯ ಮಾಹಿತಿ

Suddi Udaya

ಉಜಿರೆ ಶ್ರೀ ಧ.ಮಂ. ಶಿಕ್ಷಕರ ತರಬೇತಿ ಸಂಸ್ಥೆಯಲ್ಲಿ ಸಂದರ್ಶನವನ್ನು ಎದುರಿಸುವುದು ಹೇಗೆ? ಎಂಬ ವಿಷಯದ ಕುರಿತು ಉಪನ್ಯಾಸ

Suddi Udaya

ಕಳೆಂಜ ಕ್ರಿಶ್ಚಿಯನ್ ಬ್ರದರ್‍ಸ್ ವತಿಯಿಂದ ಕಾಯರ್ತ್ತಡ್ಕ – ಶಿಬರಾಜೆ ರಸ್ತೆಯ ಶ್ರಮದಾನ

Suddi Udaya
error: Content is protected !!