ಉಜಿರೆಗೆ ಹೋಗಿ ಬರುತ್ತೇನೆ ಎಂದ ನಿಡ್ಲೆಯ ವ್ಯಕ್ತಿ ನಾಪತ್ತೆ

Suddi Udaya

ನಿಡ್ಲೆ: ಉಜಿರೆಗೆ ಹೋಗಿ ಬರುತ್ತೇನೆ ಎಂದು ಮನೆಯಿಂದ ಹೋದ ವ್ಯಕ್ತಿ ನಾಪತ್ತೆಯಾದ ಘಟನೆ ಆ.4ರಂದು ನಡೆದಿದೆ.

ನಿಡ್ಲೆ ಗ್ರಾಮದ ಶ್ರೇಯಸ್ ಉಪಾಧ್ಯಾಯ (38ವ) ಎಂಬವರು ಆ.4ರಂದು ಬೆಳಿಗ್ಗೆ ಉಜಿರೆಗೆ ಹೋಗಿ ಬರುತ್ತೇನೆಂದು ಹೇಳಿ ಹೋಗಿದ್ದು, ಆದರೆ ವಾಪಾಸ್ ಮನೆಗೆ ಬಂದಿಲ್ಲ. ಅಲ್ಲದೇ ಅವರ ಮೊಬೈಲ್ ಫೋನ್ ಸ್ವಿಚ್ ಆಫ್ ಆಗಿದ್ದು, ಮನೆಮಂದಿ ಹುಡುಕಾಟ ನಡೆಸಿ ನಂತರ ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದಾರೆ.

ಕಾಣೆಯಾದ ದಿನ ಶ್ರೇಯಸ್ ಉಪಾಧ್ಯಾಯ ರವರು ಹಸಿರು ಬಣ್ಣದ ಟಿ-ಶರ್ಟ್, ನೀಲಿ ಬಣ್ಣದ ಜೀನ್ಸ್ ಪ್ಯಾಂಟ್ ಧರಿಸಿದ್ದು ತುಳು, ಕನ್ನಡ, ಇಂಗ್ಲಿಷ್, ಹಿಂದಿ ಮಾತನಾಡಬಲ್ಲರು. ಈ ವ್ಯಕ್ತಿ ಎಲ್ಲಿಯಾದರೂ ಪತ್ತೆಯಾದಲ್ಲಿ ಧರ್ಮಸ್ಥಳ ಠಾಣೆಗೆ ತಿಳಿಸುವಂತೆ ಪೊಲೀಸ್ ಪ್ರಕಟಣೆಯಲ್ಲಿ ಸೂಚಿಸಲಾಗಿದೆ.

Leave a Comment

error: Content is protected !!