25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿಬೆಳ್ತಂಗಡಿ

ಪುಂಜಾಲಕಟ್ಟೆ ಕರ್ನಾಟಕ ಪಬ್ಲಿಕ್ ಸ್ಕೂಲ್ ನಿಂದ ದಿ. ಪಿ. ವೆಂಕಟರಮಣ ರವರಿಗೆ ನುಡಿನಮನ

ಪುಂಜಾಲಕಟ್ಟೆ: ಆ.9ರಂದು ನಿಧನರಾದ ಪಿ. ವೆಂಕಟರಮಣ ರವರ ಆತ್ಮಕ್ಕೆ ಶಾಂತಿಯನ್ನು ಕೋರಿ ನುಡಿನಮನ ಕಾರ್ಯಕ್ರಮವು ಆ.10ರಂದು ಪುಂಜಾಲಕಟ್ಟೆ ಕರ್ನಾಟಕ ಪಬ್ಲಿಕ್‌ ಸ್ಕೂಲ್ ನ ಪ್ರೌಢಶಾಲಾ ವಿಭಾಗದಲ್ಲಿ ನಡೆಯಿತು.

ಇವರು ಕರ್ನಾಟಕ ಪಬ್ಲಿಕ್‌ ಸ್ಕೂಲ್ ಪುಂಜಾಲಕಟ್ಟೆಯ ಸ್ಥಾಪಕ ಪ್ರಾಂಶುಪಾಲರಾಗಿ, ಮುಂದಕ್ಕೆ ಮೈಸೂರು ವಿಭಾಗೀಯ ಸಹನಿರ್ದೇಶಕರಾಗಿ ನಿವೃತ್ತರಾಗಿದ್ದಂತಹ ವೆಂಕಟರಮಣ ಪಿ. ರವರು ಆ.9ರಂದು ದೈವಾಧೀನರಾದರು.

ಮೃತರು ಬೆಳ್ತಂಗಡಿ ಶಿಕ್ಷಣಾಧಿಕಾರಿ ಕಛೇರಿಯಲ್ಲಿ ಸಹಾಯಕ ಶಿಕ್ಷಣಾಧಿಕಾರಿಯಾಗಿ, ಮುಂದಕ್ಕೆ ಜಿಲ್ಲಾ ಶಿಕ್ಷಣಾಧಿಕಾರಿಯಾಗಿ, ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪನಿರ್ದೇಶಕರಾಗಿ, ಸಿಟಿಇ ಪ್ರಾಂಶುಪಾಲರಾಗಿ, ವಿಭಾಗೀಯ ಜಂಟಿ ನಿರ್ದೇಶಕರಾಗಿ ಕರ್ತವ್ಯ ನಿರ್ವಹಿಸಿ ನಿವೃತ್ತರಾಗಿರುವರು. ಆ ಬಳಿಕವೂ ನವೋದಯ ಮುಂಡಾಜೆಯಲ್ಲಿ ಪ್ರಾಂಶುಪಾಲರಾಗಿ, ಪ್ರಸನ್ನ ಬಿ.ಇಡಿ ಕಾಲೇಜಿನಲ್ಲಿ ಪ್ರಾಂಶುಪಾಲರಾಗಿ ಸೇವೆ ಸಲ್ಲಿಸಿರುವುದು ಇವರ ಸೇವಾ ತತ್ಪರತೆಗೆ ಹಿಡಿದಿರುವ ಕನ್ನಡಿಯಾಗಿದೆ.

ಸಂಸ್ಥೆಯ ಪ್ರಥಮ ದರ್ಜೆ ಸಹಾಯಕ ಪ್ರವೀಣ್ ಕುಮಾರ್ ವೆಂಕಟರಮಣ ಪಿ ರವರ ಸೇವಾ ಬದ್ಧತೆ, ಶಿಸ್ತು, ಕಲೆಗೆ ಪ್ರೋತ್ಸಾಹ, ಸಹಕಾರ ಭಾವನೆ, ನುಡಿದಂತೆ ನಡೆದಿರುವ ಕಾರ್ಯವೈಖರಿ ಇತ್ಯಾದಿ ವಿಚಾರಗಳ ಬಗ್ಗೆ ಮೆಲುಕು ಹಾಕುತ್ತಾ ಅವರಿಗೆ ನುಡಿನಮನ ಸಲ್ಲಿಸಿದರು. ಬಳಿಕ ಒಂದು ನಿಮಿಷದ ಮೌನಪ್ರಾರ್ಥನೆ ಸಲ್ಲಿಸಿ, ಮೃತರ ಭಾವಚಿತ್ರಕ್ಕೆ ಪುಷ್ಪಾಂಜಲಿಯನ್ನು ಸಂಸ್ಥೆಯ ಉಪಪ್ರಾಂಶುಪಾಲ ಉದಯಕುಮಾರ್ ಪಿ, ಶಿಕ್ಷಕ ವೃಂದ ಹಾಗೂ ವಿದ್ಯಾರ್ಥಿ ವೃಂದದವರು ಅರ್ಪಿಸಿದರು.

ಈ ಸಂದರ್ಭದಲ್ಲಿ ಸಂಸ್ಥೆಯ ಉಪಪ್ರಾಂಶುಪಾಲಉದಯ ಕುಮಾರ್ ಬಿ, ಎಲ್ಲಾ ಶಿಕ್ಷಕರು, ಸಿಬ್ಬಂದಿಗಳು ಹಾಗೂ ಶಾಲಾ ಹಳೆವಿದ್ಯಾರ್ಥಿ ಭಾಸ್ಕರ ಶೆಟ್ಟಿ ಉಪಸ್ಥಿತರಿದ್ದರು. ಸಂಸ್ಥೆಯ ಸಹಶಿಕ್ಷಕ ಹರಿಪ್ರಸಾದ್ ಆರ್ ಸರ್ವರನ್ನು ಬರಮಾಡಿಕೊಂಡರು. ಸಹಶಿಕ್ಷಕ ಧರಣೇಂದ್ರ ಕೆ. ಜೈನ್ ಕಾರ್ಯಕ್ರಮ ನಿರೂಪಿಸಿದರು.

Related posts

ಬೆಳ್ತಂಗಡಿ ಭಾರತೀಯ ಮಜ್ದೂರ್ ಸಂಘ ಇದರ ತಾಲೂಕು ಸಮಿತಿ ಹಾಗೂ ಗ್ರಾಮ ಸಮಿತಿಯ ಸಭೆ

Suddi Udaya

ರಾಷ್ಟ್ರಮಟ್ಟದ ಉರ್ದು ಭಾಷಣ ಸ್ಪರ್ಧೆ: ಸ್ಟಾರ್ ಲೈನ್ ಆಂಗ್ಲ ಮಾಧ್ಯಮ ಶಾಲೆಯ ಹಳೆ ವಿದ್ಯಾರ್ಥಿ ಸೈಯ್ಯದ್ ಮಹಮ್ಮದ್ ಉವೈಸ್ ಪ್ರಥಮ ಸ್ಥಾನ

Suddi Udaya

ಸಿಎ ಪರೀಕ್ಷೆಯಲ್ಲಿ ಉಜಿರೆಯ ಹರಿದಾಸ್ ರಾವ್ ಕೆ.ಜಿ. ಉತ್ತೀರ್ಣ     

Suddi Udaya

ಅರಸಿನಮಕ್ಕಿ ಶ್ರೀ ಗೋಪಾಲಕೃಷ್ಣ ಅ.ಹಿ.ಪ್ರಾ ಶಾಲೆಗೆ ಟೇಬಲ್ ಕೊಡುಗೆ

Suddi Udaya

ನಾವರ: 20ನೇ ವರ್ಷದ ಸಾರ್ವಜನಿಕ ಶ್ರೀ ಶಾರದೋತ್ಸವ ಪೂಜಾ ಮಹೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಬೆಳ್ತಂಗಡಿ: ಚಿನ್ನಯ್ಯನಿಗೆ ಜಿಲ್ಲಾ ಕೋರ್ಟ್ ನಲ್ಲಿ ಜಾಮೀನು ಮಂಜೂರು

Suddi Udaya
error: Content is protected !!