23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿಬೆಳ್ತಂಗಡಿ

ಪುಂಜಾಲಕಟ್ಟೆ ಕರ್ನಾಟಕ ಪಬ್ಲಿಕ್ ಸ್ಕೂಲ್ ನಿಂದ ದಿ. ಪಿ. ವೆಂಕಟರಮಣ ರವರಿಗೆ ನುಡಿನಮನ

ಪುಂಜಾಲಕಟ್ಟೆ: ಆ.9ರಂದು ನಿಧನರಾದ ಪಿ. ವೆಂಕಟರಮಣ ರವರ ಆತ್ಮಕ್ಕೆ ಶಾಂತಿಯನ್ನು ಕೋರಿ ನುಡಿನಮನ ಕಾರ್ಯಕ್ರಮವು ಆ.10ರಂದು ಪುಂಜಾಲಕಟ್ಟೆ ಕರ್ನಾಟಕ ಪಬ್ಲಿಕ್‌ ಸ್ಕೂಲ್ ನ ಪ್ರೌಢಶಾಲಾ ವಿಭಾಗದಲ್ಲಿ ನಡೆಯಿತು.

ಇವರು ಕರ್ನಾಟಕ ಪಬ್ಲಿಕ್‌ ಸ್ಕೂಲ್ ಪುಂಜಾಲಕಟ್ಟೆಯ ಸ್ಥಾಪಕ ಪ್ರಾಂಶುಪಾಲರಾಗಿ, ಮುಂದಕ್ಕೆ ಮೈಸೂರು ವಿಭಾಗೀಯ ಸಹನಿರ್ದೇಶಕರಾಗಿ ನಿವೃತ್ತರಾಗಿದ್ದಂತಹ ವೆಂಕಟರಮಣ ಪಿ. ರವರು ಆ.9ರಂದು ದೈವಾಧೀನರಾದರು.

ಮೃತರು ಬೆಳ್ತಂಗಡಿ ಶಿಕ್ಷಣಾಧಿಕಾರಿ ಕಛೇರಿಯಲ್ಲಿ ಸಹಾಯಕ ಶಿಕ್ಷಣಾಧಿಕಾರಿಯಾಗಿ, ಮುಂದಕ್ಕೆ ಜಿಲ್ಲಾ ಶಿಕ್ಷಣಾಧಿಕಾರಿಯಾಗಿ, ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪನಿರ್ದೇಶಕರಾಗಿ, ಸಿಟಿಇ ಪ್ರಾಂಶುಪಾಲರಾಗಿ, ವಿಭಾಗೀಯ ಜಂಟಿ ನಿರ್ದೇಶಕರಾಗಿ ಕರ್ತವ್ಯ ನಿರ್ವಹಿಸಿ ನಿವೃತ್ತರಾಗಿರುವರು. ಆ ಬಳಿಕವೂ ನವೋದಯ ಮುಂಡಾಜೆಯಲ್ಲಿ ಪ್ರಾಂಶುಪಾಲರಾಗಿ, ಪ್ರಸನ್ನ ಬಿ.ಇಡಿ ಕಾಲೇಜಿನಲ್ಲಿ ಪ್ರಾಂಶುಪಾಲರಾಗಿ ಸೇವೆ ಸಲ್ಲಿಸಿರುವುದು ಇವರ ಸೇವಾ ತತ್ಪರತೆಗೆ ಹಿಡಿದಿರುವ ಕನ್ನಡಿಯಾಗಿದೆ.

ಸಂಸ್ಥೆಯ ಪ್ರಥಮ ದರ್ಜೆ ಸಹಾಯಕ ಪ್ರವೀಣ್ ಕುಮಾರ್ ವೆಂಕಟರಮಣ ಪಿ ರವರ ಸೇವಾ ಬದ್ಧತೆ, ಶಿಸ್ತು, ಕಲೆಗೆ ಪ್ರೋತ್ಸಾಹ, ಸಹಕಾರ ಭಾವನೆ, ನುಡಿದಂತೆ ನಡೆದಿರುವ ಕಾರ್ಯವೈಖರಿ ಇತ್ಯಾದಿ ವಿಚಾರಗಳ ಬಗ್ಗೆ ಮೆಲುಕು ಹಾಕುತ್ತಾ ಅವರಿಗೆ ನುಡಿನಮನ ಸಲ್ಲಿಸಿದರು. ಬಳಿಕ ಒಂದು ನಿಮಿಷದ ಮೌನಪ್ರಾರ್ಥನೆ ಸಲ್ಲಿಸಿ, ಮೃತರ ಭಾವಚಿತ್ರಕ್ಕೆ ಪುಷ್ಪಾಂಜಲಿಯನ್ನು ಸಂಸ್ಥೆಯ ಉಪಪ್ರಾಂಶುಪಾಲ ಉದಯಕುಮಾರ್ ಪಿ, ಶಿಕ್ಷಕ ವೃಂದ ಹಾಗೂ ವಿದ್ಯಾರ್ಥಿ ವೃಂದದವರು ಅರ್ಪಿಸಿದರು.

ಈ ಸಂದರ್ಭದಲ್ಲಿ ಸಂಸ್ಥೆಯ ಉಪಪ್ರಾಂಶುಪಾಲಉದಯ ಕುಮಾರ್ ಬಿ, ಎಲ್ಲಾ ಶಿಕ್ಷಕರು, ಸಿಬ್ಬಂದಿಗಳು ಹಾಗೂ ಶಾಲಾ ಹಳೆವಿದ್ಯಾರ್ಥಿ ಭಾಸ್ಕರ ಶೆಟ್ಟಿ ಉಪಸ್ಥಿತರಿದ್ದರು. ಸಂಸ್ಥೆಯ ಸಹಶಿಕ್ಷಕ ಹರಿಪ್ರಸಾದ್ ಆರ್ ಸರ್ವರನ್ನು ಬರಮಾಡಿಕೊಂಡರು. ಸಹಶಿಕ್ಷಕ ಧರಣೇಂದ್ರ ಕೆ. ಜೈನ್ ಕಾರ್ಯಕ್ರಮ ನಿರೂಪಿಸಿದರು.

Related posts

ತಣ್ಣೀರುಪಂಥ ವಲಯದ ಕರಾಯ ಕಲ್ಲೇರಿ, ಕುಪ್ಪೆಟ್ಟಿ ಒಕ್ಕೂಟಗಳ ನೂತನ ಪದಾಧಿಕಾರಿಗಳ ಪದಗ್ರಹಣ

Suddi Udaya

ಕಲ್ಮಂಜ: ಸಿದ್ದಬೈಲು ಪರಾರಿ ಸ.ಹಿ.ಪ್ರಾ. ಶಾಲೆ ಶಾಲೆಯ ವಿದ್ಯಾರ್ಥಿಗಳಿಗೆ ಉಚಿತ ಪುಸ್ತಕ ವಿತರಣೆ

Suddi Udaya

ಅರಸಿನಮಕ್ಕಿ: ಶ್ರೀ ಸಿದ್ಧಿವಿನಾಯಕ ಭಜನಾ ಮಂಡಳಿ ಸದಸ್ಯರಿಗೆ ಸಮವಸ್ತ್ರ ವಿತರಣೆ

Suddi Udaya

ಬೆಳಾಲು ತಾರಗಂಡಿ ನಿವಾಸಿ ನೋಣಯ್ಯ ಪೂಜಾರಿ ನಿಧನ

Suddi Udaya

ಪಟ್ಟೂರು ಶ್ರೀರಾಮ ವಿದ್ಯಾಸಂಸ್ಥೆಯಲ್ಲಿ ಶ್ರೀರಾಮೋತ್ಸವ ಸಂಭ್ರಮ

Suddi Udaya

ಬೆಳ್ತಂಗಡಿ ಮಿಷ್‌ಮಷ್ ಫ್ಯಾನ್ಸಿ & ಗಿಫ್ಟ್ ಸೆಂಟರ್‌ನಲ್ಲಿ ಗ್ರಾಹಕರಿಗೆ ಹೊಸ ವರುಷದ ಪ್ರಯುಕ್ತ ಲಕ್ಕಿ ಡ್ರಾ ಕಾರ್ಯಕ್ರಮ

Suddi Udaya
error: Content is protected !!